ಚುನಾವಣಾ ರಾಜಕಾರಣಕ್ಕೆ ಹಳ್ಳಿಹಕ್ಕಿ ಗುಡ್ ಬೈ – 50 ಕೋಟಿ ಖರ್ಚು ಮಾಡುವ ಶಕ್ತಿ ಇಲ್ಲ ಎಂದ ವಿಶ್ವನಾಥ್..!

ಮೈಸೂರು : ವಿಧಾನ ಪರಿಷತ್ ಸದಸ್ಯ, ಮಾಜಿ ಸಂಸದ ಎಚ್. ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಈಗಿನ ರಾಜಕಾರಣ ಬದಲಾಗಿದೆ. ಈ ಹಿಂದೆ ನಾನು ಚುನಾವಣೆ ಎದುರಿಸಿದ್ದಾಗ ಜನರೇ ಹಣ ನೀಡಿ ಗೆಲ್ಲಿಸಿದ್ದರು. ಆದರೆ ಈಗ ಹಣ ಕೊಟ್ಟು ಚುನಾವಣೆ ಎದುರಿಸುವ ಪರಿಸ್ಥಿತಿ ಇದೆ. 50 ಕೋಟಿ ರೂ. ಖರ್ಚು ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಶಕ್ತಿ ನನ್ನಲ್ಲಿಲ್ಲ. ಹೀಗಾಗಿ ಮುಂದೆ ಯಾವುದೇ ಚುನಾವಣೆಯಲ್ಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದರು. ಚುನಾವಣಾ ರಾಜಕಾರಣಕ್ಕೆ […]
ಕೊಡಗಿನ ನವೀನ್ ಡಿಸೋಜ, ಹಿರಿಕರ ರವಿಗೆ ದತ್ತಿನಿಧಿ ಪ್ರಶಸ್ತಿ

ಮಡಿಕೇರಿ : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವರದಿಗಾರರಾದ ನವೀನ್ ಡಿಸೋಜ ಹಾಗೂ ಹಿರಿಕರ ರವಿ ಆಯ್ಕೆಯಾಗಿದ್ದಾರೆ. ಉದ್ಯಮಿ ಶಿವಶಂಕರ ನೆಕಾಜೆ ನೀಡುವ ದತ್ತಿನಿಧಿ ಪ್ರಶಸ್ತಿಗೆ ಆಂದೋಲನ ದಿನಪತ್ರಿಕೆಯ ಕೊಡಗು ಜಿಲ್ಲಾ ವರದಿಗಾರ ನವೀನ್ ಡಿಸೋಜ ಆಯ್ಕೆಯಾಗಿದ್ದರೆ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ನೀಡುವ ದತ್ತಿನಿಧಿ ಪ್ರಶಸ್ತಿಗೆ ಸೋಮವಾರಪೇಟೆ ವಿಜಯವಾಣಿ ವರದಿಗಾರ ಹಿರಿಕರ ರವಿ ಆಯ್ಕೆಯಾಗಿದ್ದಾರೆ. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ […]
ʼಮನೆಯಂಗಳದಲ್ಲಿ ಮನದುಂಬಿʼ ಚಿ.ನಾ. ಸೋಮೇಶ್ ಅವರಿಗೆ ಸನ್ಮಾನ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿರುವ ಸೋಮೇಶ್ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸೋಮೇಶ್ ಅವರು, ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾರ್ಯನಿರತ ಪತ್ರಕರ್ತರ ಸಂಘ ಇಂದಿಗೂ ಗಟ್ಟಿಯಾಗಿ ನೆಲೆಯೂರಿದೆ. ಈ ಸಂಘದ […]