ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್ನಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ.
ಕುಶಾಲನಗರ 220/66/11 ಕೆ.ವಿ ಮತ್ತು ಸುಂಟಿಕೊಪ್ಪ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಮಲ್ಲೇನಹಳ್ಳಿ, ಭುವನಗಿರಿ, ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನಬೈಲು, ಅಂದಗೋವೆ, ನಾಕೂರು, ಹಾದ್ರ ಹೆರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್ಮಂಗಲ, ನಾಕೂರು, ಶಿರಮಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಆಲೂರು ಸಿದ್ದಾಪುರ 66/11 ಕೆ.ವಿ ಮತ್ತು ಸೋಮವಾರಪೇಟೆ 66/11ಕೆ.ವಿ ಹಾಗೂ ಸೋಮವಾರಪೇಟೆ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರಸ್ತುತ ಸಾಲಿನ ಮೊದಲ ತ್ರೈಮಾಸಿಕ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗದಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಕೂಡು ರಸ್ತೆ, ಮಾಲಂಬಿ, ಹೊಸಗುತ್ತಿ, ಗಾರೆಗಟ್ಟ, ಬಡುವನಹಳ್ಳಿ, ಹೊನ್ನೆಕೊಪ್ಪಲು, ಗೋಣಿಮರೂರು, ನಾಗವಾಲ, ಉಂಜಿಗನಹಳ್ಳಿ, ಬಾಣವಾರ, ಕಣಗಾಲು, ಆಲೂರು ಸಿದ್ದಾಪುರ, ಕಂತೆಬಸವನಹಳ್ಳಿ, ಸೀಗೆಮರೂರು, ಪಳ್ಳಂಗೋಟು, ಸೋಮವಾರಪೇಟೆ ಟೌನ್, ಹಾನಗಲ್ಲು, ನಗರೂರು, ದುದ್ದಗಲ್ಲು, ಗಾಂಧಿನಗರ, ಬಸವೇಶ್ವರ ರಸತೆ, ಐಗೂರು, ಸಜ್ಜಳ್ಳಿ, ಹೊಸತೋಟ, ಗರಗಂದೂರು, ಕಾಜೂರು, ಗಿರಿವ್ಯಾಲಿ, ಅಬ್ಬೂರು ಕಟ್ಟೆ, ತಣ್ಣೀರು ಹಳ್ಳಿ, ನೇಗಳ್ಳಿ, ಕರ್ಕಳ್ಳಿ, ನೇರುಗಳಲೆ, ಒಳಗುಂದ, ಮೋರಿಕಲ್ಲು, ಎಲಕನೂರು, ಹೊಸಳ್ಳಿ. ದೊಡ್ಡಮಳ್ತೆ, ಹಣಕೋಡು, ಗೆಜ್ಜೆಹಣಕೋಡು, ಚಿಕ್ಕತೊಳೂರು, ಕೂಗೆಕೋಡಿ, ಯಡೂರು, ಕಿರಗಂದೂರು, ತಾಕೇರಿ, ಕೂತಿ, ಹೊಸಬಿಡು, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹರಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.