ಬೆಂಗಳೂರು : ಸೈನಿಕರು, ನಿವೃತ್ತ ಸೈನಿಕರಿಗೆ ಆರ್ಮಿ ಕ್ಯಾಂಟೀನ್ನಿಂದ (Army Canteen)ದೊರೆಯುವ ಮದ್ಯಕ್ಕೆ ಸುಂಕ ವಿಧಿಸುವ ವಿಚಾರ ಕೆಲವು ದಿನದಿಂದ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದು, ಯೋಧರ ಕ್ಯಾಂಟೀನ್ಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಅವರು ಈ ವಿಚಾರ ಪ್ರಸ್ತಾಪಿಸಿದರು. ಸುಂಕ ವಿಧಿಸಲು ಮುಂದಾಗಿದ್ದ ಸರ್ಕಾರದ ಕ್ರಮಕ್ಕೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಆ ಗೊಂದಲಕ್ಕೆ ಸಿಎಂ ತೆರೆ ಎಳೆದಿದ್ದಾರೆ.
