ಮೇ ತಿಂಗಳ 21ರಂದು ದೇವರಪುರ ಸಮೀಪದ ಕಾಡಾನೆ (Wild elephant) ತುಳಿತಗೊಳಕ್ಕಾಗಿ ಸಾವನ್ನಪ್ಪಿದ ಕೂಲಿ ಕಾರ್ಮಿಕ ಅಣ್ಣಯ್ಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ,ಎ.ಸಿ.ಎಫ್ ಗೋಪಾಲ್ ಹಾಗೂ ಅರಣ್ಯ ಇಲಾಖಾಧಿಕಾರಿಗಳು, ಬಾನಂಡ ಪೃಥ್ವಿ ಭಾಗಿಯಾಗಿದ್ದರು. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮೃತ ಅಣ್ಣಯ್ಯ ಮನೆಗೆ ಭೇಟಿ ನೀಡಿ ಶೀಘ್ರದಲ್ಲಿ ಎರಡನೇ ಹಂತದ 15 ಲಕ್ಷದ ಚೆಕ್ ಹಸ್ತಾಂತರಿಸಲಿದ್ದಾರೆ.