ಕುಶಾಲನಗರ : ಮೂರು ದಿನದಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಚೆಟ್ಟಳ್ಳಿ ನಿವಾಸಿಯಾದ ನಿವಾಸಿಯಾದ ಗಿರೀಶ್ (46) ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಕುಶಾಲನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಮೂರು ದಿನದಿಂದ ನಿರಂತರ ಹುಡುಕಾಟ ನಡೆಸಿದ್ದರು.
ನಿಸರ್ಗಧಾಮ ಬಳಿಯ ಕಾವೇರಿ ನದಿಯಲ್ಲಿ ಮೃತದೇಹವೊಂದು ತೇಲಿ ಹೋಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತವಾದ ತಂಡ ಕೊಪ್ಪ ಸೇತುವೆ ಬಳಿಯಿಂದ ಕಾರ್ಯಾಚರಣೆ ನಡೆಸಿತು. ಈ ವೇಳೆ ಗಿರೀಶ್ ಅವರ ಮೃತದೇಹ ಪತ್ತೆಯಾಗಿದೆ.