ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ವಿಷವಿಕ್ಕಿದ್ದ ಮಾದರಾಜು, ನಾಗರಾಜು ಇಬ್ಬರನ್ನು ಮೊದಲು ಬಂಧಿಸಲಾಗಿತ್ತು. ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಈತನನ್ನು ಮೃತ ಹಸುವಿನ ಮಾಲೀಕ ಎನ್ನಲಾಗಿದೆ. ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
