ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜನವರಿ, 24 ರಿಂದ 26 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ.
ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಆರ್.ಗಿರೀಶ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಾ.ಇಬ್ರಾಹಿಂ ಮೈಗೂರ್,
ಕೊಡಗು ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ಬೆಂಗಳೂರು ಲಾಲ್ಬಾಗ್ ಕ್ಷೇತ್ರ ಮತ್ತು ನರ್ಸರಿ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಕೆ.ಎಂ.ಪರಶಿವಮೂರ್ತಿ, ತೋಟಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕರಾದ ಡಾ.ಪ್ರಕಾಶ್ ಎಂ.ಸೊಬರದ, ಬೆಂಗಳೂರು ಲಾಲ್ಬಾಗ್ ಕಾರ್ಯನಿರ್ವಾಹಕ ನಿರ್ದೇಶಕರಾದ(ಕರಾತೋಮಿಏ) ಡಾ.ಕೆ.ಬಿ.ದುಂಡಿ, ಲಾಲ್ಬಾಗ್ ತೋಟಗಾರಿಕೆ ಅಪರ ನಿರ್ದೇಶಕರಾದ(ತಾಳೆ ಬೆಳೆ) ಡಾ.ಎಸ್.ನಂದ, ತೋಟಗಾರಿಕೆ ಅಪರ ನಿರ್ದೇಶಕರಾದ (ಹನಿ ನೀರಾವರಿ) ಕದಿರೇಗೌಡ, ಲಾಲ್ಬಾಗ್ ಪಾಕ್ರ್ಸ್ ಮತ್ತು ಗಾರ್ಡನ್ ತೋಟಗಾರಿಕೆ ಅಪರ ನಿರ್ದೇಶಕರಾದ ಡಾ.ಎಂ.ಜಗದೀಶ್, ಲಾಲ್ಬಾಗ್ ತೋಟಗಾರಿಕೆ ಅಪರ ನಿರ್ದೇಶಕರಾದ (ಯೋಜನೆ) ಎಚ್.ಎಂ.ಕೃಷ್ಣಮೂರ್ತಿ, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಆರ್.ಎನ್., ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತೋಟಗಾರಿಕೆ ಉಪ ನಿರ್ದೇಶಕರಾದ ಶಶಿಧರ್ ಎಚ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.



