ಆಟವಾಡಲು ಕೆರೆಗೆ ಇಳಿದ ಬಾಲಕಿ ದುರ್ಮರಣ!

Ponnampete

Share this post :

ಆಟವಾಡಲೆಂದು ಕೆರೆಗೆ ಇಳಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ವಪ್ಪಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚನ್ನಂಗೊಲ್ಲಿ ಸಮೀಪದ ಈಸ್ಟ್ ವೇಸ್ಟ್ ಮಿಲ್ ಸಮೀಪದ ತೋಟದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಲಾವಣ್ಯ ಮೃತ ದುರ್ದೈವಿ

ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಇಳಿದಿದ್ದರು. ಆದರೆ ಕೆರೆಯಲ್ಲಿ ನೀರು ಬತ್ತಿ ಕೆಸರು ತುಂಬಿದ್ದರಿಂದ ಮೂವರು ಅದರೊಳಗೆ ಸಿಲುಕಿ ಕಿರುಚಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕಾರ್ಮಿಕರು ಇಬ್ಬರನ್ನು ರಕ್ಷಿಸಿದ್ದರು. ಈ ಬಾಲಕಿಯನ್ನು ಕೆಸರಿಂದ ಹೊರಕ್ಕೆ ತರುವ ಪ್ರಯತ್ನ ವಿಫಲವಾದ್ದರಿಂದ ಆಕೆ ಮೃತಪಟ್ಟಿದೆ.

ಚೆನ್ನಂಗೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಗಿರುವ ಮೃತ ಬಾಲಕಿ ಇಂದು ವಾರ್ಷಿಕ ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಬಾಲಕಿಯು ವಿಧಿಯೊಡ್ಡಿದ ಪರೀಕ್ಷೆಗೆ ಬಲಿಯಾಗಿರುವುದು ದುರ್ದೈವದ ಸಂಗತಿ.