ತಲಕಾವೇರಿಗೆ ಭೇಟಿ ನೀಡಲಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್‌ – ಕಾರಣ ಏನು ಗೊತ್ತಾ..?

Share this post :

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಮಾರ್ಚ್ 21ರಂದು ತಲಕಾವೇರಿಗೆ(thalakaveri) ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿಗೆ ಆಗಮಿಸಿದ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಆಗಮಿಸಲಿರುವ ಡಿಕೆಶಿ, ಬಳಿಕ ರಸ್ತೆ ಮಾರ್ಗ ಮೂಲಕ ಜೀವನದಿ ಉಗಮ ಸ್ಥಾನಕ್ಕ ತೆರಳಲಿದ್ದಾರೆ. ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಕಾವೇರಿ ತೀರ್ಥ ಸಂಗ್ರಹಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ(AS Ponnanna) ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ(Mantar Gowda) ಸಾಥ್‌ ನೀಡಲಿದ್ದಾರೆ. ಅಂದೇ ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಭಾಗಿಯಾಗಲಿದ್ದಾರೆ.