ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್‌ ಶಾ

Amit Shah

Share this post :

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ. ಕಾಲ್ನಡಿಗೆ ಅಥವಾ ಕುದುರೆ ಮೂಲಕ ತೆರಳಬೇಕಾದ ಬೈಸರಾನ್ ಕಣಿವೆ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಪಹಲ್ಗಾಮ್‌ನ ಬೈಸರನ್ ಕಣಿವೆಯನ್ನು “ಮಿನಿ-ಸ್ವಿಟ್ಜರ್ಲೆಂಡ್” ಎಂದು ಕರೆಯುತ್ತಾರೆ. ಇದು ತುಂಬಾ ಸುಂದರವಾದ ಸ್ಥಳ.

ಒರಟಾದ ಭೂಪ್ರದೇಶದಿಂದಾಗಿ ಗಾಯಾಳುಗಳನ್ನು ಕರೆದೊಯ್ಯಲು ಹೆಲಿಕಾಪ್ಟರ್‌ಗಳು ಮತ್ತು ಕುದುರೆಗಳನ್ನು ಬಳಸಲಾಯಿತು. ಗಾಯಾಳುಗಳನ್ನು ಅನಂತನಾಗ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಗ್ರರು 50ಕ್ಕೂ ಹೆಚ್ಚು ಗುಂಡುಗಳನ್ನು ಹಾರಿಸಿದರು. ಗುಂಡಿನ ದಾಳಿ 3 ರಿಂದ 5 ನಿಮಿಷಗಳವರೆಗೆ ನಡೆಯಿತು. ಹೆಚ್ಚಿನವರಿಗೆ ಹತ್ತಿರದಿಂದ ಗುಂಡು ಹಾರಿಸಲಾಯಿತು ಎಂದು ವರದಿಯಾಗಿದೆ.