ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

Horticulture training

Share this post :

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ (Horticulture) ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿಯನ್ನು ಬೆಳಗ್ಗೆ: 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದು.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಭಾಪಾಕಾಗದ, ತಂದೆ/ ತಾಯಿ/ ಪೆÇೀಷಕರ ಹೆಸರಿನಲ್ಲಿರುವ ಜಮೀನಿನ ಖಖಿಅ, ಜಾತಿ ಪ್ರಮಾಣ ಪತ್ರ, ಫೆÇೀಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು (ರಾಜ್ಯ ವಲಯ), ಮಡಿಕೇರಿ, ಕೊಡಗು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.