ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

Youth Consultant

Share this post :

ಯುವ (Youth) ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡ ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊಂದಿಗೆ ಮಾರ್ಚ್ 25 ರಂದು ನೇರ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂರವಾಣಿ ಸಂಖ್ಯೆ: ಆನಂದ್:9632104204 ಹಾಗೂ ಲಕ್ಷ್ಮಿ-7204363367 ಇವರನ್ನು ಸಂಪರ್ಕಿಸಬಹುದಾಗಿದೆ. ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.