ಯುವ ಸಮೂಹದಲ್ಲಿ ಕ್ಷೀಣಿಸುತ್ತಿರುವ ಪತ್ರಿಕೆ, ಪುಸ್ತಕ ಓದು – ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ – ಜಗದೀಶ್‌ ಜೋಡುಬೀಟಿ ಕಳವಳ

ಗೋಣಿಕೊಪ್ಪ : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪ ಕಾವೇರಿ ಕಾಲೇಜು ಎನ್‌ಎಸ್‌ಎಸ್‌ ಘಟಕ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದರು. ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದೆ. ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ […]

ಒಂದು ಬಾರಿ ರಕ್ತದಾನ – ಬೆಳಗಲಿಗೆ ಮೂವರ ಜೀವನ – ಮಾಧ್ಯಮ ಸ್ಪಂದನ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಗೋಣಿಕೊಪ್ಪ : ಒಬ್ಬರ ರಕ್ತದಿಂದ ಮೂವರ ಜೀವ ಉಳಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮನವಿ ಮಾಡಿಕೊಂಡರು. ಮಾಧ್ಯಮ ಸ್ಪಂದನ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ರೋಟರಿ ಸಹಯೋಗದಲ್ಲಿ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಒಬ್ಬರು ನೀಡುವ ರಕ್ತದಿಂದ […]

ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಭಿನ್ನಾಭಿಪ್ರಾಯವಿಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಸಮರಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಇಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಉಪಹಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಗೊಂದಲ ತಾತ್ಕಾಲಿಕವಾಗಿ ಬಗೆಹರಿದಿರುವ ಬಗ್ಗೆ ಸ್ಪಷ್ಟಪಡಿಸಿದರು. ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದೆಯೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ ಎಂದರು. 2023ರ ಚುನಾವಣೆಯಲ್ಲಿ ನಾವಿಬ್ಬರು ಹೇಗೆ ಜೊತೆಗೆ ಹೋಗಿದ್ದೆವೋ ಅದೇ ರೀತಿ 2028ರ […]

ಮೂರ್ನಾಡು : ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ – 200ಕ್ಕೂ ಅಧಿಕ ಮಂದಿಯ ತಪಾಸಣೆ

ಮೂರ್ನಾಡು : ಕಾಂತೂರು-ಮೂರ್ನಾಡು ಹಾಗೂ ಹೊದ್ದೂರು ಪಂಚಾಯಿತಿ, ಕಂದಾಯ ಇಲಾಖೆ ನೇತೃತ್ವದಲ್ಲಿ ಮೈಸೂರಿನ ಬೃಂದಾವನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಮೂರ್ನಾಡುವಿನ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಿಬಿರದಲ್ಲಿ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಮಧುಮೇಹ, ನೇತ್ರ, ಮೂಳೆ&ಕೀಲು, ನರರೋಗ, ಕಿವಿ-ಮೂಗು, ಗಂಟಲು, ಸ್ತ್ರೀರೋಗ ಮುಂತಾದ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು. ಶಾಲೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನೂ ಈ ಸಂದರ್ಭ ಮಾಡಲಾಯಿತು. ಬೃಂದಾವನ ಆಸ್ಪತ್ರೆಯ ನಿರ್ದೇಶಕ […]

ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ

ಕುಶಾಲನಗರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance ಅಡಿ Incubation ಯೋಜನೆ ಕುರಿತು ಬುಧವಾರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಒ ಎಂಎಸ್‌ಎಂಇ ನಿವೃತ್ತ ಉಪ […]

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ – ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗಿ

ಮಡಿಕೇರಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್‌ ರೈ ಪುನರಾಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್‌ ರೈ ನೇತೃತ್ವದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಗದೀಶ್‌ ರೈ, ಜಾಗತಿಕ ಬಂಟರ ಒಕ್ಕೂಟದಲ್ಲಿ ಕೊಡಗು ಜಿಲ್ಲೆಗೂ ಸ್ಥಾನ ಸಿಕ್ಕಿದೆ. ಇದರಿದಾಗಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯ […]

ವೇಗವಾಗಿ ಬಂದು ರಸ್ತೆ ಮಧ್ಯೆ ಎರಡು ಪಲ್ಟಿಯಾದ ಪಿಕಪ್..!‌ Video ನೋಡಿ

ಸೋಮವಾರಪೇಟೆ :  ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ನಗರೂರು ಬಳಿ ತಿರುವಿನಲ್ಲಿ ಪಿಕಪ್‌ ವಾಹನವೊಂದು ಚಾಲಕನ ನಿಯಂತ್ರಣ ಸಿಗದೆ ರಸ್ತೆಯಲ್ಲಿ ಪಲ್ಟಿಯಾಗಿದೆ. ಅದರ ಹಿಂಬದಿ ಇದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈ ಘಟನೆ ಇಂದು(ನ.25ರಂದು) ಮಧ್ಯಾಹ್ನ ಸಂಭವಿಸಿದ್ದು, ಆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಕಳುಹಿಸಿಕೊಟ್ಟವರು – ಅವಿಲಾಶ್‌ ಕಾಜೂರು.

ಅಕ್ರಮ ಆಸ್ತಿ ಗಳಿಕೆ ಆರೋಪ : PWD AEE ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!

ಮಡಿಕೇರಿ : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಮಡಿಕೇರಿಯಲ್ಲೂ ಕೂಡಾ ಪಿಡಬ್ಲ್ಯೂಡಿ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್‌ ಗಿರೀಶ್‌ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಡಿಕೇರಿಯಲ್ಲಿನ‌ ಕಚೇರಿ, ಕುಶಾಲನಗರ, ಮೈಸೂರಿನ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆಂದು ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿಯಾಗಿದೆ.

ಪೊನ್ನಂಪೇಟೆ : ಕೆರೆಗೆ ಹಾರಿ ಆತ್ಮಹ*ತ್ಯೆಗೆ ಶರಣಾದ ಮಹಿಳೆ..!

ಗೋಣಿಕೊಪ್ಪ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೂಚಮಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್ ಎಂಬವರ ಪತ್ನಿ ಸುಮಿತಾ(48) ಆತ್ಮಹ*ತ್ಯೆಗೆ ಶರಣಾದವರು. ಇಂದು(ಸೋಮವಾರ) ಬೆಳಗ್ಗೆ ಮನೆ ಬಳಿಯ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಿತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಮೀನು ಮಾರಾಟ ʼದ್ವಿಚಕ್ರ ವಾಹನʼ ಖರೀದಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪೊನ್ನಂಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಸದರಿ ವ್ಯಾಪ್ತಿಗೊಂಡಿರುವ ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ/ ಮೀನುಗಾರಿಕೆ ವೃತ್ತಿ ಅವಲಂಬಿಸಿರುವವರಿಗೆ ದ್ವಿಚಕ್ರ ಮೀನು ಮಾರಾಟ ವಾಹನ ಖರೀದಿಗೆ ಶೇ.90 ಆರ್ಥಿಕ ನೆರವು ನೀಡಲು ಒಂದು ಭೌತಿಕ ಗುರಿ ನಿಗದಿಪಡಿಸಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು […]