ಅ.12ರಂದು ಕೆ. ಎಂ. ಎ. ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ

KMA

ವಿರಾಜಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಇದೇ ತಿಂಗಳ 12ರಂದು ಭಾನುವಾರ ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದ್ದಾರೆ. ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10:30 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ಅರಮೇರಿ ಶ್ರೀ ಕಳಂಚೇರಿ ಮಠದ […]

ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

NSS student

ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ ಸ್ವಚ್ಛತೆ ಎಂಬುದು ಪ್ರತಿಯೊಬ್ಬರನ್ನು ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂಡಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಲಂಚಕ್ಕೆ ಕೈವೊಡ್ಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ..!

ಶನಿವಾರಸಂತೆ : ಲೋಕಾಯುಕ್ತ ಬಲೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಿದ್ದಿದ್ದಾರೆ. ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಪಂ ಅಧ್ಯಕ್ಷೆ ಸುಧಾ ಹಿರೇಶ್‌ ಎಂಬವರೇ ಲಂಚ ಸ್ವೀಕಾರ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಜನಪ್ರತಿನಿಧಿ. ಕಾಮಗಾರಿಯೊಂದರ ಸಂಬಂಧ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಗುತ್ತಿಗೆದಾರ ಭರತ್‌ ಎಂಬವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 25 ಸಾವಿರ ರೂ. ಲಂಚ ಪಡೆಯುವ ವೇಳೆ ಅಧ್ಯಕ್ಷೆಯನ್ನು ರೆಡ್‌ ಹ್ಯಾಂಡ್‌ ಆಗಿ […]

ಎಳೆಯ ಮಕ್ಕಳನ್ನು ಬಳಸಿ ಭಿಕ್ಷಾಟನೆ – ಕ್ರಮಕ್ಕೆ ಸಾರ್ವಜನಿಕರ ಆಗ್ರಹ…

ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಎಳೆಯ ಮಕ್ಕಳನ್ನು ಬಳಸಿಕೊಂಡು ಕೆಲವು ಮಹಿಳೆಯರ ತಂಡ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಕೆಲವು ದಿನದಿಂದ ಇಂಥ ಚಟುವಟಿಕೆ ಹೆಚ್ಚಾಗಿದ್ದು, ಮಹಿಳೆಯರ ತಂಡ ವಿವಿಧ ಕಡೆಗಳಲ್ಲಿ ತೆರಳಿ ಭಿಕ್ಷಾಟಣೆಯಲ್ಲಿ ತೊಡಗಿದೆ. ಮಹಿಳೆಯರ ಪೂರ್ವಾಪರದ ಬಗ್ಗೆ ಕೆಲವರು ವಿಚಾರಿಸಲು ಮುಂದಾದಾಗ ತಪ್ಪಿಸಿಕೊಂಡು ಓಡಿದ್ದಾರೆ. ಹಲವು ಮಹಿಳೆಯರು ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಿಸಿಲಿನಲ್ಲಿ ತಿರುಗಾಡುತ್ತಿದ್ದಾರೆ. ಅವರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಹೀಗಾಗಿ ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ಬಿಗ್‌ಬಾಸ್‌ಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ – 12ನೇ ಆವೃತ್ತಿಯ ದೊಡ್ಡ ಮನೆಗೆ ಬೀಗ ಜಡಿದ ಜಿಲ್ಲಾಡಳಿತ..!

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್ 12ನೇ ಆವೃತ್ತಿ‌ ಆರಂಭವಾದ ಎರಡನೇ ವಾರದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಇಂದು ಸಂಜೆ ಆಗಮಿಸಿದ ಅಧಿಕಾರಿಗಳು ಪೊಲೀಸ್‌ ಭದ್ರತೆಯಲ್ಲಿ ಬೀಗ ಹಾಕಿದ್ದಾರೆ. ಜೊತೆಗೆ 7 ಗಂಟೆಯೊಳಗೆ ಒಳಗಿರುವ ಎಲ್ಲರನ್ನೂ ಖಾಲಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಬಿಗ್‌ಬಾಸ್‌ ಟೀಂ ಎಲ್ಲಾ ಸ್ಪರ್ಧಿಗಳ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕಾರಣ ಏನು..? ಬಿಗ್‌ಬಾಸ್‌ ಶೂಟಿಂಗ್‌ ಆಗುತ್ತಿರುವ […]

Breaking News : ಮನೆ ಮನೆ ಸಮೀಕ್ಷೆ – ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್‌ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ ಮಾಡಲಾಗಿದೆ. 19ರ ಒಳಗೆ ಸಮೀಕ್ಷೆ ಮುಗಿಯಲಿದೆ ಅಂತ ಶಿಕ್ಷಕರ ಸಂಘದವರು ತಿಳಿಸಿದ್ದಾರೆ. ಈ ಅವಧಿಯಲ್ಲಿ ನಷ್ಟವಾಗುವ ತರಗತಿಗಳನ್ನು ವಿಶೇಷ ಬೋಧನಾ ತರಗತಿಗಳ ಮೂಲಕ ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ […]

ಸೂರಿಗಾಗಿ ಮರವೇರಿ ಪ್ರತಿಭಟಿಸಿದ್ದ ಕೊಡಗಿನ ಆದಿವಾಸಿ ಮಹಿಳೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ..!

ಬೆಂಗಳೂರು : ಕೊಡಗಿನ ಆದಿವಾಸಿ ಮಹಿಳೆ ಜಿ.ಕೆ. ಮುತ್ತಮ್ಮ ಸೇರಿ ರಾಜ್ಯ ವಿವಿಧೆಡೆಯ 05 ಮಂದಿ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗಿನ ದಿಡ್ಡಳ್ಳಿಯಲ್ಲಿ ಆದಿವಾಸಿಗಳ ವಸತಿಗಾಗಿ ಹೋರಾಟದ ಸಂದರ್ಭ ಮುಂಚೂಣಿಯಲ್ಲಿದ್ದ ಮುತ್ತಮ್ಮ ವಿವಿಧ ರೀತಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವ್ಯವಸ್ಥೆ ವಿರುದ್ಧ ಮರವೇರಿ ಪ್ರತಿಭಟಿಸಿದ್ದು ಮಾತ್ರವಲ್ಲ, ಅರೆಬೆತ್ತಲೆ ಪ್ರತಿಭಟನೆ ಮಾಡಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ […]

KMA ವಿಶೇಷ ಪ್ರತಿಭಾ ಪುರಸ್ಕಾರ 2025 – ರೈಹಾನ, ದೇವಿಪ್ರಿಯ ಸೇರಿ ಆರು ವಿದ್ಯಾರ್ಥಿಗಳು ಆಯ್ಕೆ

ವಿರಾಜಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರ-2025ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ ಎಂದು ಕೆ.ಎಂ.ಎ. ತಿಳಿಸಿದೆ. ಕೆ.ಎಂ.ಎ. ಅಧ್ಯಕ್ಷ ಡಿ. ಹೆಚ್. ಸೂಫಿ ಹಾಜಿ ತಮ್ಮ ಪೋಷಕರಾದ ದಿವಂಗತ ಡಿ.ಪಿ. ಹುಸೈನಾರ್ ಹಾಜಿ ಮತ್ತು ಆಮೀನಾ ಸ್ಮರಣಾರ್ಥಕವಾಗಿ SSLC ಪರೀಕ್ಷೆಯಲ್ಲಿ ಸರಕಾರಿ ಶಾಲೆಯಲ್ಲಿ ಓದಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ […]

ಕಾವೇರಿ ಪಿಯು ಕಾಲೇಜು ವೀರಾಜಪೇಟೆ – ʼನಶಾ ಮುಕ್ತ ಭಾರತ ಅಭಿಯಾನʼ ವಿಶೇಷ ಶಿಬಿರ ಸಂಪನ್ನ

ವೀರಾಜಪೇಟೆ : ಇಲ್ಲಿನ ಕಾವೇರಿ ಪದವಿ ಪೂರ್ವ ಕಾಲೇಜು ವತಿಯಿಂದ ಎನ್‌ಎಸ್‌ಎಸ್‌ ವಿಶೇಷ ಶಿಬಿರ ಅಮ್ಮತ್ತಿಯಲ್ಲಿ ಇತ್ತೀಚೆಗೆ ನಡೆಯಿತು. ʼನಶಾ ಮುಕ್ತ ಭಾರತ ಅಭಿಯಾನʼ ಭಾಗವಾಗಿ ನಡೆದ ವಿಶೇಷ ಶಿಬಿರದಲ್ಲಿ ಕಾಲೇಜಿನ ಎನ್‌ಎಸ್‌ಎಸ್‌ ಘಟಕದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಶಿಬಿರದ ಸಮಾರೋಪ ಸಮಾರಂಭ ಅಮ್ಮತ್ತಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಎ.ಡಿ. ಅಕ್ಕಮ್ಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಕಾವೇರಿ ಎಜುಕೇಷನ್‌ ಸೊಸೈಟಿ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಶಿಸ್ತು, ಸಮಯ ಪಾಲನೆ, […]