ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]
ಸುಂಟಿಕೊಪ್ಪ ಚಿನ್ನದ ಅಂಗಡಿಯಲ್ಲಿ ಚಿನ್ನದ ಸರ ಕಳವು – ಮೂವರು ಮಹಿಳೆಯರ ಬಂಧನ

ಮಡಿಕೇರಿ : ಸುಂಟಿಕೊಪ್ಪದ ಫ್ಯಾಷನ್ ಜ್ಯುವೆಲರಿಯಲ್ಲಿ ಸೆ.14 ರಂದು ನಡೆದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಅಲ್ಪನಾ(37), ಬಬಿತಾ(47), ಪೂಜಾ(29) ಬಂಧಿತರು. ಬಂಧಿತರಿಂದ 22.180 ಗ್ರಾಂ ತೂಕದ 2 ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಬಂದಿದ್ದ ಮೂವರು ಮಹಿಳೆಯರು, ಅಂಗಡಿಯವರ ಗಮನಕ್ಕೆ ಬಾರದಂತೆ 22 ಗ್ರಾಂ ತೂಕದ 2 ಚಿನ್ನದ ಸರಗಳನ್ನು ಕದ್ದೊಯ್ದಿದ್ದರು. ಈ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ […]
ಮಡಿಕೇರಿ ದಸರಾ ಜನೋತ್ಸವ 2025 – ಮಂಗಳವಾರದಿಂದ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು – ಇಲ್ಲಿದೆ ನೋಡಿ ಕಾರ್ಯಕ್ರಮಗಳ ಪಟ್ಟಿ

ಮಡಿಕೇರಿ : ಮಡಿಕೇರಿ ದಸರಾ- ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಲಿದೆ. ಮಡಿಕೇರಿ ನಗರ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ತಾ.23ರಿಂದ ಅಕ್ಟೋಬರ್ 2ರವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಜರುಗಲಿವೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ತಾ.23ರಂದು ಸಂಜೆ 6ಗಂಟೆಗೆ ಭಾಗಮಂಡಲ ಜಾನ್ ಡ್ಯಾನ್ಸ್ […]
ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ – ತಾಯಿ ಚಾಮುಂಡಿ ಬಗ್ಗೆ ಅವರು ಹೇಳಿದ್ದೇನು ಗೊತ್ತಾ..?

ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. […]
ಗೋಡಾ ಹೈ – ಮೈದಾನ್ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ : ದಸರಾ ವೇದಿಕೆಯಲ್ಲಿ ಸಿಎಂ ಬಹಿರಂಗ ಸವಾಲು..!

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ […]
ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ – ಆರತಿ ಸ್ವೀಕರಿಸಿ ಭಾವುಕರಾದ ಬಾನು ಮುಷ್ತಾಕ್..!

ಮೈಸೂರು : ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದಸರಾಗೆ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿದ ಬಾನು ಮುಷ್ತಾಕ್ ದೇವಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಂಗಳಾರತಿ ಸ್ವೀಕರಿಸಿದರು. ಇದರೊಂದಿಗೆ ದೇವಿಯ ಸೀರೆಯನ್ನೂ ಪಡೆದುಕೊಂಡರು. ಅರ್ಚಕರು ಹೂವಿನ ಹಾರ ನೀಡಿ ಗೌರವಿಸಿದರು. ಕೆಲ ಕ್ಷಣ ಅವರು ಭಾವುಕರಾದಂತೆ ಕಂಡುಬಂದರು. ಬಾನು ಮುಷ್ತಾಕ್ ದಸರಾ ಉದ್ಘಾಟಿಸುವದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ದೇವಿಜೆ ಪೂಜೆ ಮಾಡುತ್ತಾರಾ? […]
ವೇಶ್ಯಾವಾಟಿಕೆ ದಂಧೆ ಪ್ರಕರಣ – ಕೊಡಗಿನ ಒಬ್ಬ, ಕೇರಳದ ಮೂವರನ್ನು ಬಂಧಿಸಿದ ಕೊಡಗು ಪೊಲೀಸರು

ವೀರಾಜಪೇಟೆ : ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾಲರ್ & ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪನ್ ಪಿ.ಪಿ, (48), ಕಲೇಶ್ ಕುಮಾರ್(45), ಶಾಜಿ(38), ವಿರಾಜಪೇಟೆ ತಾಲೂಕು ಅಮ್ಮತ್ತಿ ಗ್ರಾಮದ ನೆಲ್ಲಮಕ್ಕಡ ಎ. ಪೊನ್ನಣ್ಣ(48) ಬಂಧನಕ್ಕೊಳಗಾದವರು. ಖಚಿತ ಮಾಹಿತಿ ಮೇರೆಗೆ ಸೆ.18ರಂದು ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆದು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು. ಆರೋಪಿಗಳ ಪತ್ತೆಗಾಗಿ ಡಿವೈಎಸ್ಪಿ ಮಹೇಶ್ […]
ಕೊಡವರದ್ದು ಹಿಂದು ಧರ್ಮ – ಹಿಂದುಗಳನ್ನು ವಿಭಜಿಸುವ ಷಡ್ಯಂತ್ರಕ್ಕೆ ಬಲಿಯಾಗದಿರಿ : ನಾಪಂಡ ರವಿ ಕಾಳಪ್ಪ

ಮಡಿಕೇರಿ : ರಾಜ್ಯ ಸರ್ಕಾರ ಸೆ.22ರಿಂದ ನಡೆಸಲು ಉದ್ದೇಶಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಕೊಡವರು ಗೊಂದಲಕ್ಕೀಡಾಗಬಾರದು. ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಎಂದು ನಮೂದಿಸುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮನವಿ ಮಾಡಿದ್ದಾರೆ. ಕೆಲವು ಸಂಘಟನೆಗಳು ಕೊಡವ ಧರ್ಮ ಎಂದು ನಮೂದಿಸುವಂತೆ ಹೇಳಿಕೆ ನೀಡುತ್ತಿದೆ. ಇದರಿಂದ ಜನರಲ್ಲಿ ಗೊಂದಲ ಮೂಡುವಂತಾಗಿದೆ. ಹಿಂದಿನಿಂದಲೂ ಕೊಡವರು ಹಿಂದು ಧರ್ಮದ ಭಾಗವಾಗಿದ್ದಾರೆ. ಇದೀಗ ಕೊಡವ ಧರ್ಮ ಎಂದು ಹೇಳುವ ಮೂಲಕ ಹಿಂದು ಧರ್ಮವನ್ನು ಒಡೆಯುವ ಷಡ್ಯಂತ್ರ […]
ಮಿತ ಆಹಾರ ಸೇವನೆಯಿಂದ ಆರೋಗ್ಯಕರ ಜೀವನ ಸಾಧ್ಯ – ಮಂಜುನಾಥ್

ಮಡಿಕೇರಿ : ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಪಟ್ಟರು. ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮತೋಲನ ಆಹಾರದ ಕುರಿತು ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ತಿಳಿಸಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಮಾತನಾಡಿ ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು, […]
ಹೆಸರಿಗೆ ಬ್ಯೂಟಿ ಪಾರ್ಲರ್, ಮಸಾಜ್ ಸೆಂಟರ್ – ಆದ್ರೆ ಅಲ್ಲಿ ಆಗುತ್ತಿದ್ದ ಮಸಾಜ್ ಬೇರೆಯದ್ದೇ..!

ವೀರಾಜಪೇಟೆ : ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಪ್ರದೀಪನ್ ಮತ್ತು ಶಿಜು ಬಂಧಿತರು. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಿನಗರದಲ್ಲಿ ಖಾಸಗಿ ಕಟ್ಟಡವೊಂದನ್ನು ಬಾಡಿಗೆಗೆ ಪಡೆದಿದ್ದ ಇಬ್ಬರು ಆರೇಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಸೆಂಟರ್ ನಡೆಸುತಿದ್ದರು. ಆದರೆ ಅಲ್ಲಿ ಬೇರೆಯದ್ದೇ ಚಟುವಟಿಕೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಇತ್ತು. ಕೆಲವರು ಐಶಾರಾಮಿ ಕಾರಿನಲ್ಲಿ ಬಂದು […]