ಪಂಚ ಗ್ಯಾರಂಟಿ ಯೋಜನೆಗೆ ಈವರೆಗೆ ಖರ್ಚಾಗಿದ್ದು 97,813 ಕೋಟಿ ರೂ..! – ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚಾಯ್ತು? ಇಲ್ಲಿದೆ ಮಾಹಿತಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ […]

ʼವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳುʼ – ಒಂದು ದಿನದ ಮಾಹಿತಿ ಕಾರ್ಯಾಗಾರ – ಹೆಸರು ನೋಂದಣಿಗೆ ಅವಕಾಶ

ಕುಶಾಲನಗರ : ದೊಡ್ಡ ಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಸೆ. 11ರಂದು ʼವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳುʼ ವಿಷಯದ ಬಗ್ಗೆ ಒಂದು ದಿನದ ತರಬೇತಿ ಆಯೋಜಿಸಲಾಗಿದೆ. ತರಬೇತಿಯಲ್ಲಿ ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆ, ಹಾವು ಬರದಂತೆ ತಡೆಯುವುದು, ಅಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ವಿಷಯ ತಜ್ಞರಿಂದ ಮಾಹಿತಿ ನೀಡಲಾಗುವುದು. ಆಸಕ್ತ ರೈತರು ಹಾಗೂ ಸಾರ್ವಜನಿಕರು ಮೊಬೈಲ್ ಸಂಖ್ಯೆ : 8880557766, […]

ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್‌ ಬುಕರ್‌ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]

ಹೀರೋ ಏಷ್ಯಾ ಕಪ್‌ ಹಾಕಿ ಟೂರ್ನಿ : ಚಾಂಪಿಯನ್‌ ಆಗಿ ಹೊರಹೊಮ್ಮಿದ ಟೀಂ ಇಂಡಿಯಾ – ವಿಶ್ವಕಪ್‌ಗೆ ಪ್ರವೇಶ ಪಡೆದ ಹರ್ಮನ್‌ಪ್ರೀತ್‌ ಪಡೆ…

ಒಡಿಸ್ಸಾ : ಅಮೋಘ ಪ್ರದರ್ಶನ ನೀಡಿದ ಭಾರತ ಹಾಕಿ ತಂಡ ಏಷ್ಯಾ ಕಪ್‌ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾತ್ರಿ ನಡೆದ ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆಗಿದ್ದ ಕೊರಿಯಾ ವಿರುದ್ಧ 4-1 ಗೋಲುಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ನಾಲ್ಕನೇ ಬಾರಿಗೆ ಭಾರತ ಏಷ್ಯಾ ಕಪ್‌ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಪಂದ್ಯದ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾದ ಟೀಂ ಇಂಡಿಯಾ ಆಟಗಾರರು ಕೊರಿಯಾ ಆಟಗಾರರಿಗೆ ಪಂದ್ಯದಲ್ಲಿ ಹಿಡಿತ ಸಾಧಿಸುವುದಕ್ಕೆ ಅವಕಾಶವನ್ನೇ ಕೊಡಲಿಲ್ಲ. ಪೆನಾಲ್ಟಿ ಕಾರ್ನರ್‌ ಅವಕಾಶದ […]

ವೀರಾಜಪೇಟೆ ಗಣೇಶೋತ್ಸವ – ನಿಯಮ ಮೀರಿ ಅಬ್ಬರದ ಸಂಗೀತ/ಡಿಜೆ ಬಳಕೆ – 16 ಪ್ರಕರಣ ದಾಖಲು

ವೀರಾಜಪೇಟೆ(Virajpet) : ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಸಾಮೂಹಿಕವಾಗಿ ಗಣೇಶೋತ್ಸವ ಆಚರಿಸಲಪಡುವ ವೀರಾಜಪೇಟೆಯಲ್ಲಿ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯ ಶನಿವಾರ(saturday) ರಾತ್ರಿ ವೈಭವದಿಂದ ನೆರವೇರಿದೆ. ಈ ನಡುವೆ ಕಾನೂನು ಉಲ್ಲಂಘನೆ ಸಂಬಂಧ ಪ್ರಕರಣ ಕೂಡಾ ದಾಖಲಾಗಿದೆ. ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸದಂತೆ ಜಿಲ್ಲಾ ಪೊಲೀಸ್‌ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ವೀರಾಜಪೇಟೆ ಗಣೇಶೋತ್ಸವ ಮೆರವಣಿಗೆಯಲ್ಲಿ ನಿಯಮ ಮೀರಿ ಅಬ್ಬರದ ಸಂಗೀತ ಬಳಸಲಾಗಿದ್ದು, ಈ ಸಂಬಂಧ 16 ಪ್ರಕರಣ ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ. ಗಣೇಶೋತ್ಸವ […]

ಸಮಾಜದಲ್ಲಿನ ಹಿರಿಯರನ್ನು ಪ್ರತಿಯೊಬ್ಬರು ಗೌರವಿಸಬೇಕು : ರೆ.ಫಾ. ಜೇಮ್ಸ್ ಡೊಮಿನಿಕ್

ವಿರಾಜಪೇಟೆ : ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್‌ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ದ್ವಿ-ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ. ಈ ಧರ್ಮಸಭೆಯನ್ನು ಹಿರಿಯರು ಕಟ್ಟಿ ಬೆಳೆಸಿರುತ್ತಾರೆ. ಧರ್ಮ ಕೇಂದ್ರದಲ್ಲಿ […]

ವಾಲಿಬಾಲ್‌ ಪಂದ್ಯಾವಳಿ – ಬೇಟೋಳಿ ಸ.ಹಿ.ಪ್ರಾ. ಶಾಲೆ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೀರಾಜಪೇಟೆ : ಗುಂಡಿಕೆರೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದೆ. ಮಾಯಮುಡಿಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀಮಂಗಳ ಸಮೀಪದ ಕಾಕೂರಿನ ಜೆ. ಸಿ. ಶಾಲಾ ತಂಡವನ್ನು 21-15 ಮತ್ತು 21-12 ನೇರ ಸೆಟ್ಟುಗಳಿಂದ ಸೋಲಿಸಿ ವಿನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸುವ ಮೂಲಕ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದೆ. […]

ಸೆ.07 ರಂದು ಚಂದ್ರಗ್ರಹಣ – ಈ ದೇವಾಲಯದಲ್ಲಿ ದೇವರ ದರ್ಶನ ಇರಲ್ಲ..!

ಮಡಿಕೇರಿ : ಸೆಪ್ಟೆಂಬರ್ ೦೭ ರಂದು ಸಂಭವಿಸುವ ಭಾದ್ರಪದ ಶುಕ್ಲ ಪೌರ್ಣಮಿ ರಾಹುಗ್ರಸ್ತ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ ೫ ಗಂಟೆಯಿಂದ ಭಕ್ತರಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದ್ದರಿಂದ ಭಕ್ತಾಧಿಕಾರಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ.

ಸೆ.12 ರವರೆಗೆ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ

ಮಡಿಕೇರಿ : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ೨೦೨೫-೨೬ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಷ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆಪ್ಟಂಬರ್ ೦೧ ರಿಂದ ೧೨ ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ. ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ […]

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್‌ ಸಿಂಹ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಾರೆಂದು ಸರ್ಕಾರ ಹೇಳಿದಾಗಿನಿಂದ ಮಾಜಿ ಸಂಸದ ಪ್ರತಾಪ್‌ ಸಿಂಹ ತಮ್ಮ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಇದೀಗ ಅವರಿಂದ ದಸರಾ ಉದ್ಘಾಟನೆಗೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ದಿನದ ಹಿಂದೆ ಸರ್ಕಾರ ಹಾಸನದ ಬಾನು ಮುಷ್ತಾಕ್‌ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿತ್ತು. […]