KSRTC ನೌಕರರು ಹಠ ಮಾಡೋದ್ರಲ್ಲಿ ಅರ್ಥ ಇಲ್ಲ, ಸರ್ಕಾರದ ಪರಿಸ್ಥಿತಿ ಅರ್ಥ ಮಾಡ್ಕೊಳ್ಳಿ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಹಲವು ಬೇಡಿಕೆಗಳನ್ನ ಮುಂದಿಟ್ಟು ಕೆಎಸ್ಆರ್ಟಿಸಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದಾರೆ. ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್ ಸೂಚಿಸಿತ್ತು. ಆದ್ರೆ ಅದನ್ನೂ ಲೆಕ್ಕಿಸದೆ ನೌಕರರು ಮುಷ್ಕರ ಶುರುಮಾಡಿದ್ದಾರೆ. ಮುಷ್ಕರದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅವರ ಬೇಡಿಕೆಗಳನ್ನ ನಮ್ಮ ಮುಂದಿಡುವುದು ತಪ್ಪಲ್ಲ. ಆದ್ರೆ ಅವ್ರು ಸರ್ಕಾರದ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳಬೇಕು. ಆಗದಿರೋದನ್ನ ಮಾಡಿ ಅಂತ ಹೇಳೋದಲ್ಲ ಎಂದಿದ್ದಾರೆ. ನಮಗೆ ನಾಗರಿಕರು ಇಂಪಾರ್ಟೆಂಟ್. ಜನರಿಗೆ ಯಾರೂ ತೊಂದರೆ ಕೊಡಬೇಡಿ. ಕೆಲವು ಚಾಲಕರು, ನಿರ್ವಾಹಕರು ಕರ್ತವ್ಯಕ್ಕೆ […]
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ʼಬಾಲಗೋಕುಲ ಮಡಿಕೇರಿʼ ವತಿಯಿಂದ ಛದ್ಮವೇಷ ಸ್ಪರ್ಧೆ…

ಮಡಿಕೇರಿ : ʼಬಾಲಗೋಕುಲ ಮಡಿಕೇರಿʼ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.೧೭ರಂದು ʼಶ್ರೀ ಕೃಷ್ಣ, ಬಲರಾಮ, ರುಕ್ಮಣಿ, ರಾಧೆ, ದೇವಕಿ, ಯಶೋದೆ, ವಸುದೇವ ಹಾಗೂ ಕುಚೇಲರ ಛದ್ಮವೇಷʼ ಸಮಾಗಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲಾ ಛದ್ಮವೇಷದಧಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ ಉಡುಗೊರೆ ನೀಡಲಾಗುವುದು. ಭಾಗವಹಿಸಲು ಇಚ್ಚಿಸುವವರು 09-08-2025 ರೊಳಗೆ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಕೊಳ್ಳಬೇಕಿದೆ. ಮೊಬೈಲ್ ಸಂಖ್ಯೆ: 9448541328, 9740131805
Ind Vs Eng ಕೊನೆಯ ಟೆಸ್ಟ್ ಪಂದ್ಯದಲ್ಲಿ ರೋಚಕವಾಗಿ ಗೆದ್ದು ಇತಿಹಾಸ ಬರೆದ ಟೀಂ ಇಂಡಿಯಾ..! – ಉಫ್..! ಎಂಥಾ ಮ್ಯಾಚ್ ಗರು..! ಎಂದ ಕ್ರಿಕೆಟ್ ಫ್ಯಾನ್ಸ್

ಇಂಗ್ಲೆಂಡ್ : ಇಂಗ್ಲೆಡ್ ವಿರುದ್ಧದ ಆಂಡರ್ಸನ್ ತೆಂಡೂಲ್ಕರ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 6 ರನ್ ಅಂತರದಿಂದ ರೋಚಕವಾಗಿ ಗೆಲುವು ಸಾಧಿಸಿದೆ. ಕೊನೆಯ ದಿನ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 35 ರನ್ ಅಗತ್ಯವಿತ್ತು. ಭಾರತ ಗೆಲ್ಲೋದಕ್ಕೆ 04 ವಿಕೆಟ್ ಕಬಳಿಸಬೇಕಿತ್ತು. ದಿನದ ಮೊದಲ ಸೆಷನ್ನ ಮೊದಲ ಓವರ್ನಲ್ಲಿ ಪ್ರಸಿದ್ಧ್ ಕೃಷ್ಣ ಓವರ್ನಲ್ಲಿ ಎರಡು ಬೌಂಡರಿ ಬಾರಿಸಿದ ಇಂಗ್ಲೀಷ್ ಬ್ಯಾಟರ್ಗಳು ಆತಂಕ ಹುಟ್ಟಿಸಿದರು. ಆದರೆ ಅದ್ಭುತ ಲಯದಲ್ಲಿರುವ ಸಿರಾಜ್ ತಮ್ಮ ಮೊನಚಿನ ಬೌಲಿಂಗ್ ದಾಳಿ ಸಂಘಟಿಸಿ […]
ನಾಳೆ ನಡೆಯುತ್ತಾ ಸಾರಿಗೆ ನೌಕರರ ಮುಷ್ಕರ..? – ಸಿಎಂ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ವಿಫಲ..!

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ(ಆ.05) ಮುಷ್ಕರ ನಡೆಸಲು ಮುಂದಾಗಿದ್ದಾರೆ. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದು, ಆ.04ರೊಳಗೆ ಈಡೇರಿಸುವಂತೆ ನೌಕರರ ಸಂಘಟನೆಗಳು ಆಗ್ರಹಿಸಿದ್ದವು. ಈಡೇರದಿದ್ದರೆ ನಾಳೆಯಿಂದ ಮುಷ್ಕರ ಕೈಗೊಳ್ಳುವುದಾಗಿ ಎಚ್ಚರಿಸಿವೆ. ಈ ಮಧ್ಯೆ ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಒಕ್ಕೂಟದೊಂದಿದೆ ವಿಧಾನದೌಧದ ಸಮಿತಿ ಕೊಠಡಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ […]
ನಾಪೋಕ್ಲುವಿನಲ್ಲಿ ಸಾಂಪ್ರದಾಯಿಕ ಬೊಡಿ ನಮ್ಮೆ ಆ.07ಕ್ಕೆ

ನಾಪೋಕ್ಲು : ನಾಲ್ನಾಡ್ ಪ್ಲಾಂಟರ್ಸ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ಬಿದ್ದಾಟಂಡ ಬುಟ್ಟಿ ಯಾಕ ತೆಂವಾದಲ್ಲಿ ಆಗಸ್ಟ್ 7 ಕ್ಕೆ ಸಾಂಪ್ರದಾಯಿಕ ಬೊಡಿ ನಮ್ಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯಲ್ಲಿ 0.22 ರೈಫಲ್ನಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವುದು(50 ಮೀಟರ್), 12 ಬೋರ್ ಕೋವಿಯಲ್ಲಿ ತೆಂಗಿನ ಕಾಯಿಗೆ ಗುಂಡು( 27 ಮೀಟರ್) ಹೊಡೆಯುವ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಟ್ರೋಫಿ ಮತ್ತು ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕರು […]
ಮರಗೋಡು : ಸ್ತನ್ಯಪಾನ ಸಪ್ತಾಹ, ನಿವೃತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ

ಮರಗೋಡು : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ನಿಔರತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ. ಸುಶೀಲಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮರಗೋಡು ವೃತ್ತಕ್ಕೆ ಸೇರಿದ […]
ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿಶ್

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ ಕಾವೇರಿಯ ಉಗಮ ಸ್ಥಳ ತಲಕಾವೇರಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ(Gowrish rai), ಅನಂತ್ ಭಾಗಮಂಡಲ, ಜಸ್ವಂತ್ ಭಾಗಮಂಡಲ, DCC ಸದಸ್ಯ ಸುನೀಲ್ ಪತ್ರವೊ, ಮೈಸೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್, […]
ಮೂರ್ನಾಡುವಿನಲ್ಲಿ ಸ್ತನ್ಯಪಾನ ಸಪ್ತಾಹ – LKG, UKG ಪ್ರಾರಂಭೋತ್ಸವ

ಮೂರ್ನಾಡು : ಎಂ ಬಾಡಗ -1 ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾಂತರೂ ಮುರ್ನಾಡು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ನೆರವೇರಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾದಂಡ ಸವಿತಾ ಕೀರ್ತನ್ ಎದೆ ಹಾಲಿನ ಮಹತ್ವದ ಬಗ್ಗೆ ಮಾತನಾಡಿದರು. 2025ರ ಸ್ತನ್ಯಪಾನ ಸಪ್ತಾಹದ ಘೋಷವಾಕ್ಯ “ಸ್ತನ್ಯಪಾನಕ್ಕೆ ಆದ್ಯತೆ ನೀಡಿ ಸುಸ್ಥಿರ ಬೆಂಬಲ ವ್ಯವಸ್ಥೆಗಳನ್ನು ರಚಿಸಿ” ಎಂಬುದಾಗಿದೆ. ಮಹಿಳಾ […]
ಕೊಡಗಿನ ಪಾಲಂಗಾಲದಲ್ಲಿ ಭೂಕುಸಿತ – ಕೊಚ್ಚಿ ಹೋದ ಎಕ್ರೆಗಟ್ಟಲೆ ಅರಣ್ಯ ಪ್ರದೇಶ..!

ವೀರಾಜಪೇಟೆ : ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನಲ್ಲಿ ಭಾರಿ ಪ್ರಮಾಣದ ಭೂ ಕುಸಿತವಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ವಿರಾಜಪೇಟೆ ಹೋಬಳಿಯ ಪಾಲಂಗಾಲ ಗ್ರಾಮದ ಸ.ನಂ 171/11P2 ರಲ್ಲಿ ಈ ಭೂಕುಸಿತ ಸಂಭವಿಸಿದೆ. 341.00 ಎಕ್ರೆ ಅರಣ್ಯ ಪ್ರದೇಶದ ಕೊಡಗು ಮತ್ತು ಕೇರಳ ಗಡಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಎತ್ತರದ ಪ್ರದೇಶದಿಂದ ಕುಸಿತ ಸಂಭವಿಸಿ, ನೂರಾರು ಮೀಟರ್ಗಳ ಉದ್ದಕ್ಕೆ ಸಾಗಿದೆ. ಅರಣ್ಯ ಪ್ರದೇಶದೊಳಗೇ ವ್ಯಾಪ್ತಿ ಇದ್ದುದ್ದರಿಂದ ಹೆಚ್ಚಿನ ಹಾನಿಯಾಗಿಲ್ಲ. ಈ ಭೂಕುಸಿತ ಜಾಗದಿಂದ ಅಂದಾಜು 15KM ಆ […]
ಧರ್ಮಸ್ಥಳದಲ್ಲಿ ಶ*ವ ಹೂತ ಪ್ರಕರಣ – 06ನೇ ಪಾಯಿಂಟ್ನಲ್ಲಿ ಪತ್ತೆಯಾಯಿತು ಮೂಳೆ..!

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನ ಹೂತಿದ್ದೇನೆಂದು ವ್ಯಕ್ತಿಯೊಬ್ಬ ಹೇಳಿದ ಕೇಸ್ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮೂರು ದಿನದಿಂದ ನಡೆಯುತ್ತಿದ್ದ ಉತ್ಕನನದಲ್ಲಿ ಇಂದು ಆರನೇ ಪಾಯಿಂಟ್ನಲ್ಲಿ ಮೂಳೆ ಪತ್ತೆಯಾಗಿದೆ. ಮೊನ್ನೆಯಿಂದ ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಎಸ್ಐಟಿ ಶೋಧ ಕಾರ್ಯ ನಡೆಸಿತ್ತು. ಸಣ್ಣ ಹಿಟಾಚಿಯನ್ನೂ ಬಳಸಲಾಗಿತ್ತು. ಇಂದು ನೇತ್ರಾವತಿ ನದಿ ತೀರದಲ್ಲಿ ಗುರುತಿಸಿದ್ದ ಪಾಯಿಂಟ್ ನಂಬರ್ ಆರರಲ್ಲಿ ಕಳೇಬರದ ಕುರುಹು ಪತ್ತೆಯಾಗಿದೆ. ಅದು ಮನುಷ್ಯನದ್ದಾ, ಪ್ರಾಣಿಯದ್ದಾ ಎಂಬ ಬಗ್ಗೆ ತಿಳಿಯಲು ಅದನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ, ಅಲ್ಲಿಂದ ವರದಿ ಬಂದ […]