ಯಲಹಂಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾದ ಮಾಹೆ ಬೆಂಗಳೂರು

Bangalore

ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು (Bangalore) ಕ್ಯಾಂಪಸ್, ಯಲಹಂಕದಲ್ಲಿನ ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಆವಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಹುಪಯೋಗಿ ಸಭಾಂಗಣವನ್ನು ಯಲಹಂಕ ಶಾಸಕ ಶ್ರೀ ಎಸ್.ಆರ್. ವಿಶ್ವನಾಥ್ ಅವರು ಮತ್ತು ಮಾಹೆ ಬೆಂಗಳೂರಿನ ಹೆಚ್ಚುವರಿ ರಿಜಿಸ್ಟ್ರಾರ್ ಶ್ರೀ ರಾಘವೇಂದ್ರ ಪ್ರಭು ಪಿ. ಉದ್ಘಾಟಿಸಿದರು. ಯಲಹಂಕದ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ ಸುಧಾರಿಸುವುದು ಮತ್ತು ಸಮುದಾಯ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ […]

ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ಮಾಹಿತಿ

Rainfall Kodagu

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1009.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.78 ಮಿ.ಮೀ. ಕಳೆದ ವರ್ಷ ಇದೇ ದಿನ 20.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2344.34 ಮಿ.ಮೀ, ಕಳೆದ ವರ್ಷ ಇದೇ […]

ಜನ್ಮದಿನದಂದು ಶಾಸಕ ಪೊನ್ನಣ್ಣ ಶ್ರೀ ಭಗಂಡೇಶ್ವರ – ತಲಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ

MLA Ponnanna

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.    

ಕೊಡಗಿನ ಯುವ ಫುಟ್‌ಬಾಲ್ ಆಟಗಾರ ಆತ್ಮಹತ್ಯೆ

Football player

ಸುಂಟಿಕೊಪ್ಪ: ಕೊಡಗು (Kodagu) ಜಿಲ್ಲೆಯ ಉದಯೋನ್ಮುಖ ಯುವ ಫುಟ್ ಬಾಲ್ (Football) ಆಟಗಾರ(ಗೋಲ್ ಕೀಪರ್) ಕಿರಣ ಸುಂಟಿಕೊಪ್ಪದ ಬೆಟ್ಟಗೇರಿ ತೋಟದ ಲೈನ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಪ್ರತಿಷ್ಠಿತ ಫುಟ್ ಬಾಲ್ ತಂಡಗಳಲ್ಲಿ ಗೋಲ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಕಿರಣ ಎಲ್ಲರ ಫೇವರೇಟ್ ಗೋಲ್ ಕೀಪರ್ ಆಗಿ ಹಲವು ಪ್ರಶಸ್ತಿಯನ್ನು ಜಯಿಸಿದ್ದಾನೆ.

ಪೊಲೀಸರ ಭರ್ಜರಿ ಕಾರ್ಯಚರಣೆ : ಜಾನುವರು ಕಳ್ಳರ‌‌ ಬಂಧನ

Cow thieves

ಜೂ.24 ರಂದು ನೋಕ್ಯ ಗ್ರಾಮದ ನಿವಾಸಿ ಆನಂದ ಎ.ಎಸ್ ಅವರ ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು ಹಾಗೂ ಭದ್ರಗೋಳ ಗ್ರಾಮದ ನಿವಾಸಿ ಪಿ.ಪಿ. ಮುತ್ತಣ್ಣ, ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 01 ಎಮ್ಮೆಯನ್ನು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡರು ಎರಡು ಪ್ರಕರಣಗಳ ಆರೋಪಿ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿಎಸ್ಪಿ, ವಿರಾಜಪೇಟೆ ಉಪವಿಭಾಗ, ಶಿವರಾಜ ಆರ್.ಮುಧೋಳ್, ಸಿಪಿಐ, ಗೋಣಿಕೊಪ್ಪ ವೃತ್ತ, […]

ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿಗಳಿಗೆ ಸಾಮಗ್ರಿಗಳ ವಿತರಣೆ

Anganwadis

ಮೂರ್ನಾಡು: ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ (Anganwadis) ಗ್ರಾಮ ಪಂಚಾಯಿತಿ ವತಿಯಿಂದ ಬಕೆಟ್‌, ಮಗ್‌, ಹ್ಯಾಂಡ್ ವಾಶ್, ಬ್ಲೀಚಿಂಗ್ ಪೌಡರ್, ಚಾಪೆ, ಕೌದಿ, ಕಂಬಳಿ, ಪಿನಾಯಿಲ್, ಪೊರಕೆಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಸುಜಾತ, ವಿಜಯಲಕ್ಷ್ಮಿ, ಮೂಡೇರ ಅಶೋಕ, ಅಯ್ಯಪ್ಪ, ಈರ ಸುಬ್ಬಯ್ಯ, ಅಪ್ಪಚಂಡ ಮೀನಾಕ್ಷಿ ದೇವಯ್ಯ, ಅವರೇಮಾದಂಡ ಅನಿಲ್, ಪುಷ್ಪಲತಾ, ಪುಷ್ಪ, ಸೋಮಣ್ಣ, ದಿವ್ಯ, ನಿಂಗಪ್ಪ, ಕೃಷ್ಣಪ್ಪ, ಯಶ್ವಿನ್ ಪೊನ್ನಪ್ಪ, ರಾಜೇಶ್, ರೀತ, […]

ವಿಮಾ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ತರಾಟೆ – ೩೫ ಸಾವಿರ ದಂಡ ವಿಧಿಸಿ ಆದೇಶ..! – ಕಾರಣ ಏನು? ಇಲ್ಲಿದೆ ಮಾಹಿತಿ

ಮಡಿಕೇರಿ : ಆರೋಗ್ಯ ವಿಮೆಯ ಹಣವನ್ನು ನೀಡಲು ನಿರಾಕರಿಸಿದ ಹೆಲ್ತ್‌ ಇನ್ಶೂರೆನ್ಸ್‌ ಸಂಸ್ಥೆಗೆ ವಿಮಾ ಮೊತ್ತದ ಜೊತೆಗೆ ೩೫ ಸಾವಿರ ರೂ. ದಂಡ ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಮಡಿಕೇರಿ ನಿವಾಸಿ ಜೈರಸ್ ಥಾಮಸ್ ಅಲೆಕ್ಸಾಂಡರ್ ಮತ್ತು ಅವರ ಪತ್ನಿ ಶಾಲಿನಿ ಅವರು ತಮ್ಮ ಕುಟುಂಬದ ಸದಸ್ಯರ ಹೆಸರಿನಲ್ಲಿ ಕೇರ್ ಹೆಲ್ತ್ ಇನ್ಸೂರೆನ್ಸ್ ಲಿಮಿಟೆಡ್‌ನಲ್ಲಿ ಆರೋಗ್ಯ ವಿಮಾ ಖಾತೆ ಹೊಂದಿರು. ಇದರ ಪ್ರೀಮಿಯಂ ಮೊತ್ತ ೫ ಲಕ್ಷ ರೂ. ಗಳಾಗಿದ್ದು, ೨೦೨೩ನೇ ಇಸವಿಯಲ್ಲಿ […]

ಎಫ್‌ಡಿ ಖಾತೆ ಹಣ ನೀಡಲು ವಿಳಂಬ – ವೀರಾಜಪೇಟೆಯ ಸಹಕಾರ ಸಂಘಕ್ಕೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ..!

ವೀರಾಜಪೇಟೆ : ಎಫ್‌ಡಿ ಖಾತೆಯ ಹಣವನ್ನು ನೀಡಲು ವಿಳಂಬ ಮಾಡಿದ ಸಹಕಾರ ಸಂಘಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ೨೦ ಸಾವಿರ ರೂ ದಂಡ ವಿಧಿಸಿದೆ. ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದ ನಿವಾಸಿ ಎಂ.ಡಿ. ಕಾರಿಯಪ್ಪ ಅವರು ೨೦೨೩ನೇ ಸಾಲಿನಲ್ಲಿ ವಿರಾಜಪೇಟೆಯಲ್ಲಿರುವ ವಿವಿಧೋದ್ದೇಶ ಗ್ರಾಮೀಣ ಮಹಿಳಾ ಸಹಕಾರ ಸಂಘದಲ್ಲಿ ರೂ.೧೦ ಲಕ್ಷ ರೂಪಾಯಿಗಳಿಗೆ ಒಂದು ವರ್ಷಕ್ಕೆ ಶೇ.೯ ಬಡ್ಡಿಯನ್ನು ಒಳಗೊಂಡಿರುವ ನಿಶ್ಚಿತ ಠೇವಣಿ (ಎಫ್.ಡಿ) ಖಾತೆಯನ್ನು ಮಾಡಿದ್ದರು. ಈ ಖಾತೆಯು ೨೦೨೪ನೇ ಇಸವಿಯಲ್ಲಿ ಮುಕ್ತಾಯಗೊಂಡಿದ್ದು, ತಮ್ಮ […]

ಸಾಂತ್ವನ ಮಹಿಳಾ ಸಹಾಯವಾಣಿ ವತಿಯಿಂದ ಈವರೆಗೆ ಇತ್ಯರ್ಥವಾದ ಪ್ರಕರಣಗಳು ಎಷ್ಟು ಗೊತ್ತಾ..? ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾಗಿ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೫೦೨ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೪೭೮ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. ೨೦೨೫-೨೬ನೇ ಆರ್ಥಿಕ ಸಾಲಿನಲ್ಲಿ ೮೩ ಪ್ರಕರಣಗಳು ದಾಖಲಾಗಿ ೬೫ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು […]

ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಿಂದ ಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ತಿಲಕ್‌ನಗರ ಮೈಸೂರು ಇಲ್ಲಿ ೨ ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಈ ವಿಶೇಷ ಡಿ.ಎಡ್ ತರಬೇತಿಯು ಸಾಮಾನ್ಯ ಡಿ.ಎಡ್‌ಗೆ ಸಮಾನಾವಾಗಿವೆ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.೫೦(ಎಸ್.ಸಿ/ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.೪೫ ಅಂಕಗಳೊಂದಿಗೆ ತೇರ್ಗಡೆಯಾದ ಆಸಕ್ತ ವಿದ್ಯಾರ್ಥಿಗಳು ಜುಲೈ, ೧೨ ರೊಳಗೆ ಅರ್ಜಿ ಸಲ್ಲಿಸಬಹುದು. ಈ ತರಬೇತಿಗೆ ಸಂಬಂಧಿಸಿದ ವಿವರವಾದ ಮಾಹಿತಿ ಹಾಗೂ ಅರ್ಜಿ ನಮೂನೆ ಮೈಸೂರು ಜಿಲ್ಲಾ ವೆಬ್‌ಸೈಟ್ hಣಣಠಿs://ಟಿbeಡಿ-ಡಿehಚಿbಛಿouಟಿಛಿiಟ.gov.i ನಲ್ಲಿ […]