ಪೊದಕೋಟೆಯಲ್ಲಿ ಮಳೆಯಿಂದ ಮನೆಗೆ ಹಾನಿ

ವಿರಾಜಪೇಟೆ (virajpet)ಹೋಬಳಿ ಪೊದಕೋಟೆ ಗ್ರಾಮದ ನಿವಾಸಿಯಾದ ಹೆಚ್ ಕೆ ಬಾಬು ಅವರ ವಾಸದ ಮನೆಯು ಇಂದು ಮಳೆಯಿಂದಾಗಿ ಭಾಗಶಃ ಹಾನಿಯಾಗಿದೆ. ಈ ಸಂಬಂಧ ಕಂದಾಯ ಪರಿವೀಕ್ಷಕರು,ಸಹಾಯಕ ಅಭಿಯಂತರರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರುಗಳು, ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 31.52 ಮಿ.ಮೀ. ಮಳೆಯಾಗಿದೆ (Average rainfall) . ಕಳೆದ ವರ್ಷ ಇದೇ ದಿನ 30.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1173.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 559.82 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 29.37 ಮಿ.ಮೀ. ಕಳೆದ ವರ್ಷ ಇದೇ ದಿನ 51.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ […]
ಇಂತಹ ಪಡಿತರ ಚೀಟಿದಾರರಿಗೆ ಶಾಕ್ : ಇವರದ್ದು ರೇಷನ್ ಕಾರ್ಡ್ ರದ್ದು!

ರಾಜ್ಯದಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು (BPL Card ) ರದ್ದುಗೊಳಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದವರು ಎಪಿಎಲ್ಗೆ ವರ್ಗಾಯಿಸಲ್ಪಟ್ಟಿದ್ದು, ಈ ಕ್ರಮದ ಪರಿಣಾಮವಾಗಿ ನಿಜವಾಗಿ ಬಡವರಾಗಿ ಪರಿಗಣಿಸಲ್ಪಟ್ಟಿದ್ದ ಹಲವರ ಕಾರ್ಡ್ಗಳು ಕೂಡ ರದ್ದಾದವು. ಇದರಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಪ್ರತಿಭಟನೆಗಳಿಗೆ ಕಾರಣವಾಯಿತು. ಈ ಸಮಸ್ಯೆ ಅರಿತ ಸರ್ಕಾರ, ತಪ್ಪುಗಳನ್ನು ತಿದ್ದುಕೊಳ್ಳುವ ಭರವಸೆ ನೀಡಿತ್ತು. ಇದರ ಜೊತೆಗೆ ಇನ್ನೊಂದು ಒಂದೇ ಮನೆಗೆ ಸೇರಿರುವ ಸದಸ್ಯರು ವಿಭಿನ್ನ ಹೆಸರುಗಳಲ್ಲಿ ಎರಡು […]
ವಿರಾಜಪೇಟೆ: ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (Agriculture Extension Sub-Mission) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ( post of Taluk Technical Manager )ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 2 […]
ಅರಣ್ಯ ಹಕ್ಕು ಪತ್ರದ ಪ್ರಕ್ರಿಯೆಗೆ ವೇಗ: ಮಡಿಕೇರಿಯಲ್ಲಿ ಡಿಜಿಟಲ್ ಸಹಾಯ ಕೋಶ ಆರಂಭ

ಮಡಿಕೇರಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (Department of Integrated Tribal Development Planning) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ (Forest Rights Cell) ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah )ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ […]
ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (kodagu)ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.
ಇಂದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟ!!

ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ (Assembly By-Election) ಫಲಿತಾಂಶ. ಪಶ್ಚಿಮ ಬಂಗಾಳ, ಪಂಜಾಬ್, ಕೇರಳ ಮತ್ತು ಗುಜರಾತ್ ಈ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಣೆ ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್ ಹಾಗೂ ಗುಜರಾತ್ನ ವಿಸಾವದರ್ನಲ್ಲಿ ಆಪ್ ಶಾಸಕ ಭೂಪೇಂದ್ರಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಭಾರತದ ನಾಲ್ಕು […]
ಮೊದಲ ಬಾರಿ ಯೋಗ ಮಾಡ್ತಾ ಇದ್ದೀರಾ..? ಹಾಗಿದ್ರೆ ಈ ಬಗ್ಗೆ ಗಮನವಿರಲಿ..!

Coorg buzz health tips : ಯೋಗ (Yoga) ಮಾಡುವುದರಿಂದ ನಾವು ದೈಹಿಕ ಆರೋಗ್ಯ ಕಾಪಾಡಿಕೊಳ್ಳಬಹುದು. ಯೋಗವು ದೇಹ ಮತ್ತು ಮನಸನ್ನು ಶಾಂತಗೊಳಿಸಲು, ದೈಹಿಕ ಮಾನಸಿಕ ಸಮತೋಲನವನ್ನು ನಿರ್ವಹಿಸುತ್ತದೆ. ಆಧುನಿಕ ಯುಗದಲ್ಲಿ ಮನುಷ್ಯನಿಗೆ ಒತ್ತಡ ಹೆಚ್ಚಾಗಿದೆ. ಹೀಗಾಗಿ 20 ರಿಂದ 30 ನಿಮಿಷಗಳ ಕಾಲ ಯೋಗ ಮಾಡುವ ಮೂಲಕ ನೀವು ನಿಮ್ಮ ಜೀವನವನ್ನು ಉತ್ತಮಗೊಳಿಸಬಹುದು. ಬೆಳಗ್ಗೆ ಎದ್ದು ಯೋಗಾಭ್ಯಾಸ (Yoga practice) ಮಾಡುವುದರಿಂದ ಹಲವಾರು ರೀತಿಯ ಕಾಯಿಲೆಗಳನ್ನು ತಪ್ಪಿಸಬಹುದು. ಯೋಗ ಮಾಡುವಾಗ ನಾವು ಹಲವು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. […]