ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ

Summer camp

ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗದಾಮಪ್ಪ ಅವರು ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ ಶುಕ್ರವಾರ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ (Summer camp) ಉದ್ಘಾಟಿಸಿ […]

Power Cut: ಕೊಡಗಿನ ಜನರೇ… ನಾಳೆ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Power Cut

ಮಡಿಕೇರಿ:-ಶ್ರೀಮಂಗಲ (Srimangala) 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‍ಗಳಲ್ಲಿ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದ ನಿರ್ವಾಹಣೆ ಹಾಗೂ ಇತರೆ ಅಭಿವೃದ್ದಿ ಕಾಮಗಾರಿ ನಡೆಸಬೇಕಾಗಿರುವುದರಿಂದ, ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಲ್ಲೂರು, ನಾತಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಡ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಚೀಪೆಕೊಲ್ಲಿ, ಗುಡ್ಡಮಾಡು, ಬಿರುಗ, ಕೆ ಬಾಡಗ, ಶೆಟ್ಟಿಗೇರಿ, ಕುರ್ಚಿ, ಬಿರುನಾಣಿ, ವೆಸ್ಟ್ ನೆಮ್ಮಲೆ, ತೆರಾಲು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power […]

ಕೊಡಗು ಕಲಾವಿದರ ಸಂಘದಿಂದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

Chekkara Thyagaraja

ಮಡಿಕೇರಿ: ಕೊಡಗಿನ ಖ್ಯಾತ ಸಂಗೀತ ಕಲಾವಿದ ಹಾಗೂ ಸಾಹಿತಿ ಚೆಕ್ಕೆರ ತ್ಯಾಗರಾಜ ಅಪ್ಪಯ್ಯ ಅವರನ್ನು ಕೊಡಗು ಕಲಾವಿದರ ಸಂಘದ ವತಿಯಿಂದ ಮೇ ೨೦ ರಂದು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಕಲಾವಿದರ ಸಂಘ ಹಿರಿಯ ಕಲಾವಿದರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ೨೦೦ಕ್ಕೂ ಅಧಿಕ ಕಲಾವಿದರಿದ್ದು, ಪ್ರಸ್ತುತ ಚೆಕ್ಕೆರ ತ್ಯಾಗರಾಜ ಅವರನ್ನು ಸನ್ಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಮೇ ೨೦ ರಂದು ಮಧ್ಯಾಹ್ನ […]

ಯುವಜನತೆಗೆ ಸುವರ್ಣವಕಾಶ: ರೆಗ್ಯುಲರ್ ಕೋರ್ಸ್ ಬ್ಯಾಚ್‌ನ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸಿದ ಟೊಯೋಟಾ

Toyota Technical Training Institute

ಕೌಶಲ್ಯ ಅಭಿವೃದ್ಧಿ ಮತ್ತು ಸಮುದಾಯ ಸಬಲೀಕರಣಕ್ಕೆ ಬದ್ಧವಾಗಿರುವ ಟೊಯೋಟಾ ಟೆಕ್ನಿಕಲ್ ಟ್ರೇನಿಂಗ್ ಇನ್‌ಸ್ಟಿಟ್ಯೂಟ್ (ಟಿಟಿಟಿಐ) ತನ್ನ 2025-2028ನೇ ಸಾಲಿನ ಟಿಟಿಟಿಐ ರೆಗ್ಯುಲರ್ ಕೋರ್ಸ್ ಬ್ಯಾಚ್‌ ನ ಪ್ರವೇಶ ಪ್ರಕ್ರಿಯೆಯನ್ನು ಇಂದು ಪ್ರಾರಂಭಿಸಿದೆ. ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಪ್ರಾಯೋಜಿತ ಈ ಕೋರ್ಸು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಯುವ ಸಮೂಹಕ್ಕೆ ಶೈಕ್ಷಣಿಕ ತರಬೇತಿ, ಉದ್ಯಮಕ್ಕೆ ಸಂಬಂಧಿತ ತರಬೇತಿ ಒದಗಿಸಿ ಅವರನ್ನು ಜಾಗತಿಕ ಮಟ್ಟದ ಅತ್ಯುತ್ತಮ ತಂತ್ರಜ್ಞರನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ. 2007ರಲ್ಲಿ ಸ್ಥಾಪನೆಯಾದ ಟಿಟಿಟಿಐ ಭಾರತದಲ್ಲಿ ವೃತ್ತಿಪರ […]

Fact check: ಕೊಡಗಿನಲ್ಲಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದವನು ಈತ ಅಲ್ಲ: ಶಂಭು ಕೊಲೆ ಸೆರೆಗಾಗಿ ಪೊಲೀಸರಿಂದ 2 ತಂಡ ರಚನೆ

Sampath

2022ರಲ್ಲಿ ಸಿಎಂ ಸಿದ್ದರಾಮಯ್ಯ ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದ್ರೆ ಈ ವರದಿ ತಪ್ಪಾಗಿದ್ದು, ಈ ಸಂಪತ್‌ (Sampath) ಬೇರೆ. ಅದ್ರೆ ಒಂದೆ ಹೆಸರು ಆಗಿರುವುದರಿಂದ ಗೊಂದಲ ಉಂಟಾಗಿದ್ದು ಎನ್ನಲಾಗಿದೆ. ಸಂಪತ್‌ ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿದೆ. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ತೀವ್ರ […]

ವಿಕೋಪ ನಿರ್ವಹಣೆ ಸಂಬಂಧ ಅಣಕು ಪ್ರದರ್ಶನ

Disaster management

ಮಡಿಕೇರಿ:- ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ, ಜನ, ಜಾನುವಾರು, ಹಾಗೂ ಆಸ್ತಿ-ಪಾಸ್ತಿ ರಕ್ಷಣೆ ಸಂಬಂಧ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವ ಬಗ್ಗೆ ಹಾರಂಗಿ ಜಲಾಶಯದಲ್ಲಿ ಗುರುವಾರ ಅಣಕು ಪ್ರದರ್ಶನ ನಡೆಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ನಡೆದ ಅಣಕು ಕಾರ್ಯಾಚರಣೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಡೆದ ವಿಕೋಪ ನಿರ್ವಹಣೆ ಸಂಬಂಧ ಅಣಕು ಪ್ರದರ್ಶನ (Disaster Management) ಸಂದರ್ಭದಲ್ಲಿ ಕಂದಾಯ, ಪೊಲೀಸ್, ಆರೋಗ್ಯ ಮತ್ತು […]

ಭಾರತಕ್ಕೆ ಬರುತ್ತಿವೆ ರೇ-ಬ್ಯಾನ್ ಮೆಟಾ ಗ್ಲಾಸ್‌ಗಳು: ಮೆಟಾ AI ಇಂಟಿಗ್ರೇಟೆಡ್ ಮತ್ತು ಬಹು ಶೈಲಿಗಳ ಕೊಡುಗೆ

Ray Ban Meta Glasses

ರೇ-ಬ್ಯಾನ್ ಮೆಟಾ ಗ್ಲಾಸ್‌ಗಳು ಈಗ ಭಾರತಕ್ಕೆ ಬರುತ್ತಿವೆ – ಐಕಾನಿಕ್ ಶೈಲಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಿ ಜನರು ಪ್ರಸ್ತುತವಾಗಿರಲು ಮತ್ತು ಅವರು ಯಾರು ಮತ್ತು ಅವರು ಹೆಚ್ಚು ಕಾಳಜಿ ವಹಿಸುತ್ತಾರೆ ಎಂಬುದರೊಂದಿಗೆ ಸಂಪರ್ಕದಲ್ಲಿರಲು ಅನುವು ಮಾಡಿಕೊಡುತ್ತದೆ. INR 29,900/- ರಿಂದ ಪ್ರಾರಂಭವಾಗುವ ಬೆಲೆಯಲ್ಲಿ, ಪೂರ್ವ-ಆರ್ಡರ್‌ಗಳು ಇಂದು Ray-Ban.com ನಲ್ಲಿ ಪ್ರಾರಂಭವಾಗುತ್ತವೆ ಮತ್ತು ಸಂಗ್ರಹವು ಮೇ 19 ರಿಂದ Ray-Ban.com ಮತ್ತು ದೇಶಾದ್ಯಂತದ ಪ್ರಮುಖ ಆಪ್ಟಿಕಲ್ ಮತ್ತು ಸನ್‌ಗ್ಲಾಸ್ ಅಂಗಡಿಗಳಲ್ಲಿ ಲಭ್ಯವಿರುತ್ತದೆ. ಮೆಟಾ AI ಇಂಟಿಗ್ರೇಟೆಡ್‌ನೊಂದಿಗೆ, ನೀವು […]

ಮೇ 16 ರಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ

summer camp

ಮಡಿಕೇರಿ:- ಪ್ರಸಕ್ತ (2025-26) ಸಾಲಿನಲ್ಲಿ ಜಿಲ್ಲಾ ಮಟ್ಟದ ಉಚಿತ ಬೇಸಿಗೆ ಶಿಬಿರವು ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮೇ, 16 ರಿಂದ 30 ರವರೆಗೆ “ಯುವಜನ ಕ್ರೀಡಾ ಸಬಲೀಕರಣ ಇಲಾಖಾ ವ್ಯಾಪ್ತಿಯ ಯೋಗ ತರಭೇತಿಯ ಸಭಾಂಗಣ”ದಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ 05 ರಿಂದ 16 ವರ್ಷದ ಮಕ್ಕಳು ಭಾಗವಹಿಸಿ ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು […]

ಹಾಕಿ ವೀಕ್ಷಕ ವಿವರಣೆಗೆ ಭರವಸೆಯ ಧ್ವನಿ, ಚೈಯ್ಯಂಡ ʼಬನಿʼ

Cheyyanda Bani

✍️ ಬರಹ – ಕಿಶೋರ್‌ ರೈ ಕತ್ತಲೆಕಾಡು ಕೊಡಗು ಜಿಲ್ಲೆಯಲ್ಲಿ ಹಾಕಿ ಕ್ರೀಡೆಯ ಇತಿಹಾಸದಲ್ಲಿ ಅನೇಕ ಖ್ಯಾತನಾಮರು ತಮ್ಮ ಛಾಪು ಮೂಡಿಸಿದ್ದಾರೆ. ಇಂದಿಗೂ ಹಲವು ಉದಯೋನ್ಮುಖ ಪ್ರತಿಭೆಗಳು ಹಾಕಿ (Hockey) ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕೊಡಗಿನ ಕ್ರೀಡಾ ಗತವೈಭವದ ಉಳಿವಿಗಾಗಿ ಕೊಡುಗೆ ನೀಡುತ್ತಿದ್ದಾರೆ. ಕ್ರೀಡಾಪಟುಗಳಂತೆಯೇ ಕ್ರೀಡಾ ವೀಕ್ಷಕ ವಿವರಣೆಗಾರರಿಗೂ ಇಂದಿನ ದಿನದಲ್ಲಿ ಹೆಚ್ಚಿನ ಬೇಡಿಕೆಯಿದೆ. ಮೈದಾನದಲ್ಲಿ ಆಟಗಾರರು ಆಡಿ ರಂಜಿಸಿದರೆ, ಆಟದ ವೈಭವ ಮತ್ತು ಅದರ ಸೊಗಡನ್ನು ತಮ್ಮ ಮಾತಿನ ಕೌಶಲ್ಯದಿಂದ ಮತ್ತಷ್ಟು ಕೌತುಕಭರಿತವಾಗಿ ಪ್ರೇಕ್ಷಕರಿಗೆ […]

ಸಕಾಲ ಕಾಯ್ದೆಯಡಿ ಅರ್ಜಿ ಕಾಲಮಿತಿಯಲ್ಲಿ ಮಾಹಿತಿ ನೀಡಿ: ವೆಂಕಟ್ ರಾಜಾ

Sakala

ಮಡಿಕೇರಿ:- ವಿವಿಧ ಇಲಾಖೆಗೆ ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಸತಾಯಿಸುವುದು […]