ಹಾತೂರುವಿನಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತದಲ್ಲಿ (Road accident) ತಾಯಿ ಮಗ ಸಾವನಪ್ಪಿದ್ದಾರೆ. ಬಿ.ಶೆಟ್ಟಿಗೇರಿ ಅರ್ಚಕರ ಕುಟುಂಬದ ಸುದರ್ಶನ ಬೆಂಗಳೂರುವಿನಲ್ಲಿ ಉದ್ಯಗೋದಲ್ಲಿ ಇದ್ದು ತಾಯಿಯೊಂದಿಗೆ ಗೋಣಿಕೊಪ್ಪಲಿನಿಂದ ಮನೆಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ತನ್ನ ಓಮ್ನಿ ಕಾರಿನಲ್ಲಿ ಹೋಗುತ್ತಿದ್ದಾಗ ಸಂದರ್ಭ ಈ ಘಟನೆ ನಡೆದಿದೆ. ಕೇರಳ ರಾಜ್ಯದ ಲಾರಿ ಮೈಸೂರಿನತ್ತ ತರಕಾರಿ ಸಾಗಾಟ ಮಾಡಲು ತೆರಳುತ್ತಿತ್ತು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುದರ್ಶನ (42) ಹಾಗೂ ತಾಯಿ ಲಲಿತಾ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓಮಿನಿ ವ್ಯಾನ್ ಸಂಪೂರ್ಣವಾಗಿ […]
ಸೆಸ್ಕ್ ಸಹಾಯಕ ಇಂಜಿನಿಯರ್ ಎ.ಆರ್. ಸಂಪತ್ ಕುಮಾರ್ ಅವರಿಗೆ ಬೀಳ್ಕೊಡುಗೆ

ಮಡಿಕೇರಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ (Cesc) ಸಹಾಯಕ ಇಂಜಿನಿಯ್ ಆಗಿದ್ದು ವರ್ಗಾವಣೆಯಾದ ಎ.ಆರ್. ಸಂಪತ್ ಅವರಿಗೆ ಗ್ರೀನ್ ಸಿಟಿ ಫೋರಂ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು. 2015ರಿಂದ ಸುದೀರ್ಘ ಅವಧಿವರೆಗೆ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ಸಂಪತ್ ಅವರು ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಅವರು ಲೈನ್ಮನ್ಗಳ ಮೂಲಕ ಶಾಲು ಹೊಸಿದಿ ಫಲ ತಾಂಬೂಲ ನೀಡಿ ಗೌರವಿಸಿದರು. ಸಂಪತ್ […]
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ (State Government) ನೌಕರರ ಕ್ರೀಡಾಕೂಟ (Sports) ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ […]
ಮುದ್ದಂಡ ಹಾಕಿ ನಮ್ಮೆ: ಬೆಳ್ಳಿ ಹಬ್ಬಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ

ಮಡಿಕೇರಿ : ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ (Muddanda Hockey Festival) ಇಂದು ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು ಹಾಕಿ (Hockey) ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು. ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ನಡೆದ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾನವನ ವಿಶ್ವಾಸ, ನಂಬಿಕೆಗೆ ಅರ್ಹವಾದ ನಿಷ್ಠಾವಂತ ಸಾಕು ಪ್ರಾಣಿಗಳಲ್ಲಿ ಶ್ವಾನ ಅಗ್ರ ಸ್ಥಾನ ಪಡೆದಿದೆ. ಮನೆಯಲ್ಲಿ […]
ಬೆಂಗಳೂರಿನಲ್ಲಿ ಕೊಡಗಿನ ಪೊಲೀಸ್ ಅಧಿಕಾರಿಯ ಸಾಧನೆ

ಬೆಂಗಳೂರಿನ ಸಿದ್ದಾಪುರ ಪೊಲೀಸ್ (Police) ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಎಂಬುವವರೇ ಈ ಕಾರ್ಯಾಚರಣೆ ನಡೆಸಿ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೊಳಗಾದವರಾಗಿದ್ದಾರೆ. ಬೆಂಗಳೂರು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ದಿವಂಗತ ಲೋಕೇಶ್ ಎಂಬುವವರ ಪತ್ನಿ ಮಂಜುಳಾರವರು ದಿನಾಂಕ 24-11-2024 […]
ಏ.21 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 21 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ (Vaccination) ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಮೂರ್ನಾಡು (Murnad) 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಮುದ್ದಂಡ ಕಪ್ ಹಾಕಿ ನಮ್ಮೆ: ಮಹಿಳೆಯರ ಹಾಕಿ ಆಟದ ಜೋಶ್ ಏಪ್ರಿಲ್ 21ರಿಂದ – ಪ್ರಶಸ್ತಿಗಾಗಿ ಸೆಣಸಲಿವೆ 56 ತಂಡಗಳು..!

ಮಡಿಕೇರಿ : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.೨೧ ರಿಂದ ಮಹಿಳೆಯರ ೫ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. ಮುದ್ದಂಡ ಹಾಕಿ (Muddanda Hockey) ಉತ್ಸವದ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ […]
ಜಾತಿ ಗಣತಿ ವರದಿಗೆ ಕೊಡಗು ಒಕ್ಕಲಿಗರ ಸಂಘ ವಿರೋಧ – ನನ್ನ ಮನೆಗೆ ಯಾವುದೇ ಸಮೀಕ್ಷಾ ತಂಡ ಬಂದಿಲ್ಲ ಎಂದ ಪ್ರಮುಖರು..!

ಮಡಿಕೇರಿ : ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಗಣತಿ ವರದಿಯನ್ನು ಕೊಡಗು ಜಿಲ್ಲಾ ಒಕ್ಕಲಿಗರ (Kodagu Vokkaliga) ಸಂಘ ಹಾಗೂ ತಾಲ್ಲೂಕು ಸಂಘಗಳು ತೀವ್ರವಾಗಿ ವಿರೋಧಿಸಿವೆ. ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ವಿ.ಜಿ.ಮೋಹನ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗೂ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಎಂ.ಕೆ.ದಿನೇಶ್ ಅವರುಗಳು ಸಚಿವ ಸಂಪುಟದಲ್ಲಿ ಮಂಡನೆಯಾದ ವರದಿ ಅವೈಜ್ಞಾನಿಕ ಸಮೀಕ್ಷೆಯಿಂದ […]
ಜಾತಿ ಸಾಮಾಜಿಕ ಸಮೀಕ್ಷೆಯಿಂದ ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ […]