ಬೆಂಕಿ ಬ್ಯಾಟಿಂಗ್‌: ದಾಖಲೆಗಳೆಲ್ಲಾ ಉಡೀಸ್… ಇತಿಹಾಸ ನಿರ್ಮಿಸಿದ ಇಬ್ರಾಹಿಂ ಜದ್ರಾನ್

Ibrahim Zadran

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ (ICC Champions Trophy) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿ ಗುಂಪಿನ ಪಂದ್ಯದಲ್ಲಿ ಬುಧವಾರ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಬ್ಯಾಟರ್‌ ಇಬ್ರಾಹಿಂ ಜದ್ರಾನ್ ( Ibrahim Zadran) ಅವರ ಸ್ಫೋಟಕ ಬ್ಯಾಟಿಂಗ್‌ ನಡೆಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್​​ಗಳ ನೆರವಿನಿಂದ 177 ರನ್​​ಗಳಿಸಿದರು. ಈ 177 ರನ್​​ಗಳ ನೆರನಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ […]

Govinda: ಬಾಲಿವುಡ್ ನಟ ಗೋವಿಂದ ಡಿವೋರ್ಸ್​ ಕೇಸ್​ಗೆ ಹೊಸ ಟ್ವಿಸ್ಟ್​​​

Govinda

ಬಾಲಿವುಡ್​ ಸ್ಟಾರ್​ ನಟ ಗೋವಿಂದ (Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ 37 ವರ್ಷಗಳ ದಾಂಪತ್ಯ ಕೊನೆಗೊಳಿಸುವ ವಿಚಾರ ಎಲ್ಲೆಡೆ ವೈರಲ್ ಆಗಿತ್ತು. ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ದಾಂಪತ್ಯದಲ್ಲಿ ಬಿರುಕು ಸುದ್ದಿ ಬಿಟೌನ್​ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಕುಟುಂಬದ ಆಪ್ತ ಮೂಲವೊಂದು ಸುನೀತಾ ಕೆಲವು ತಿಂಗಳ ಹಿಂದೆಯೇ ಗೋವಿಂದ ಅವರಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್​ ಸ್ಟಾರ್​ ನಟ ಮತ್ತು ಸುನೀತಾ ಅವರು 1987ರ ಮಾರ್ಚ್‌ನಲ್ಲಿ ಮದುವೆಯಾಗಿದ್ದರು. […]

ಶುಗರ್ ಇರುವವರು ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳು

health tips

ಮಧುಮೇಹ (Diabetes) ಎನ್ನುವುದು ಸಾಮಾನ್ಯವಾದ ಆರೋಗ್ಯ (Health) ಸಮಸ್ಯೆಗಳಲ್ಲಿ ಒಂದು. ಮಧುಮೇಹಕ್ಕೂ ಹೃದಯದ ಆರೋಗ್ಯಕ್ಕೂ ನಿಕಟ ಸಂಬಂಧ ಇದೆ. ಆದರೆ ಈ ವಿಚಾರವನ್ನು ಬಹುತೇಕರು ಕಡೆಗಣಿಸಿರುತ್ತಾರೆ. ಅದು ಸಲ್ಲದು. ಯಾಕೆಂದರೆ ಈ ಕಡೆಗಣನೆಯಿಂದ ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಗಾಢ ಪರಿಣಾಮ ಉಂಟಾಗಬಹುದು. ಹಾಗಾಗಿ ಈ ಕುರಿತು ಹೆಚ್ಚಿನ ಮಾಹಿತಿ ಹೊಂದುವುದು ಅವಶ್ಯ. ವ್ಯಕ್ತಿಗಳ ರಕ್ತದ ಸಕ್ಕರೆಯ ಮಟ್ಟ ಜಾಸ್ತಿ ಆದಾಗ ಅದು ಗ್ಲೂಕೋಸ್‌ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ, ಜೊತೆಗೆ ಹೃದಯದ ಕೆಲಸದ ಮೇಲೆ ಮತ್ತು […]

ಮಿಸ್ & ಮಿಸೆಸ್ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಮಿಂಚಿದ ಆಸ್ಟ್ರಲ್ ಪೇಜೆಂಟ್ಸ್‌

Miss And Misses

ಮಿಸ್‌ & ಮಿಸೆಸ್‌ ಇಂಡಿಪೆಂಡೆಂಟ್‌ ಇಂಟರ್‌ನ್ಯಾಷನಲ್ ಸ್ಪರ್ಧೆಯಲ್ಲಿ ಮೂವರು ವೈದ್ಯೆಯರು ಅತ್ಯುನ್ನತ ಗೌರವ ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಫಿಲಿಫೈನ್ಸ್‌ನ ಮನಿಲಾದಲ್ಲಿ ಫೆ 16 ರಿಂದ 22ರ ವರೆಗೆ ನಡೆದ ಈ ಸ್ಪರ್ಧೆಯಲ್ಲಿ ಪ್ರಪಂಚದಾದ್ಯಂತ 50 ವರ್ಷದೊಳಗಿನ ಪ್ರಿ-ಟೀನ್‌, ಟೀನ್‌, ಮಿಸ್‌, ಮಿಸೆಸ್‌ ಮತ್ತು ಮತ್ತು 40 ವರ್ಷ ಮೇಲ್ಪಟ್ಟ ಎಲೈಟ್‌ ಮಿಸೆಸ್‌ ವಿಭಾಗಗಳಲ್ಲಿ ಪಾಲ್ಗೊಂಡಿದ್ದರು. ಅಸ್ಟ್ರಲ್‌ ಪೇಜೆಂಟ್‌ ನ ಸಂಸ್ಥಾಪಕಿ ಪ್ರತಿಭಾ ಸೌಂಶಿಮಠ್‌, ಅಸ್ಟ್ರಲ್‌ ಪೇಜೆಂಟ್ಸ್‌ನ ಪ್ರತಿನಿಧಿಗಳು 40 ವರ್ಷದೊಳಗಿನ ಮಿಸ್‌, ಮಿಸೆಸ್‌ ಮತ್ತು […]

ಪುಂಡರಿಗೆ ಸೆಡ್ಡು: ಮಹಾರಾಷ್ಟ್ರದ ವಾಹನಗಳ ಚಾಲಕರಿಗೆ ಸಿಹಿ, ಗುಲಾಬಿ ನೀಡಿದ ಕರವೇ

karave activists

ಬೆಳಗಾವಿ ಗಡಿಭಾಗದಲ್ಲಿ ಮರಾಠಿ ಪುಂಡರ ಹಾವಳಿ ಮತ್ತಷ್ಟು ಮಿತಿ ಮೀರಿದ್ದರೆ‌, ಇತ್ತ ದೊಡ್ಡಬಳ್ಳಾಪುರದಲ್ಲಿ ಕನ್ನಡಪರ ಸಂಘಟನೆ ವತಿಯಿಂದ ಮಹಾರಾಷ್ಟ್ರದ ವಾಹನಗಳ ಚಾಲಕರನ್ನು ಸನ್ಮಾನಿಸಿ, ಸಿಹಿ ತಿನ್ನಿಸಿ, ಗುಲಾಬಿ ಹೂ ನೀಡಿ ಸೌಹಾರ್ದತೆ ಮೆರೆಯಲಾಗಿದೆ. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ವಾಹನಗಳನ್ನು ತಡೆದ ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ನೇತೃತ್ವದ ಕಾರ್ಯಕರ್ತರು. ಚಾಲಕ, ನಿರ್ವಾಹಕರನ್ನು ಗೌರವಿಸಿ, ಸಿಹಿ ನೀಡಿ‌‌, ಹೂ ನೀಡಿ ಭಾಷೆ ವಿಚಾರದಲ್ಲಿ ಕಿಡಿಗೇಡಿಗಳ ಕೃತ್ಯದಿಂದ ಭಾವೋದ್ವೇಕಕ್ಕೆ ಒಳಗಾಗದೆ ಶಾಂತಿ […]

ಕಾವೇರಿ ಪದವಿ ಕಾಲೇಜು ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ

Cauvery College Virajpet NSS Camp

ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ . ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದ್ದನ್ನು ಇತರ ಸಹಾಯಕ್ಕೆ ದಾನ ನೀಡಿ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಣವ್ ಎಂ ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು . ಬಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ […]

ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

Railway Barricade In Virajpet

ವಿರಾಜಪೇಟೆಯ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ […]

ಸ್ಕೂಟರ್ ಹಾಗೂ ಖಾಸಗಿ ಬಸ್ ಡಿಕ್ಕಿ: ಸ್ಕೂಟರ್ ಸವಾರ ಸಾವು

Bus scooter

ಸ್ಕೂಟರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ ಪೈಪ್ ಅಳವಡಿಸಲು ಕಾಲರ್ ತರಲೆಂದು ತಮ್ಮ ಸ್ಕೂಟಿಯಲ್ಲಿ ಹೆಬ್ಬಾಲೆ ಕಡೆ ತೆರಳುವಾಗ ಸಿದ್ದಲಿಂಗಪುರದ ನಾಪಂಡ ಮುತ್ತಪ್ಪ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ಘಟನೆ ಜರುಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸರು […]

ಬಜಾಜ್ ಅಲಾಯನ್ಸ್ ಜನರಲ್ ಇನ್ಶೂರೆನ್ಸ್‌ನಿಂದ ಪ್ರಶಸ್ತಿ ಘೋಷಣೆ

Global Insurance Excellence Awards

ಭಾರತದ ಪ್ರಮುಖ ಖಾಸಗಿ ಜನರಲ್ ಇನ್ಶೂರರ್‌ಗಳಲ್ಲಿ ಒಂದಾದ ಬಜಾಜ್ ಅಲಾಯನ್ಸ್ ಜನರಲ್ ಇನ್ಶೂರೆನ್ಸ್, ಏಷ್ಯಾ, ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದಾದ್ಯಂತ ಜನರಲ್ ಇನ್ಶೂರೆನ್ಸ್ ಮತ್ತು ಹೆಲ್ತ್ ಇನ್ಶೂರೆನ್ಸ್ ಸಲಹೆಗಾರರ ಅತ್ಯುತ್ತಮ ಕೊಡುಗೆಗಳನ್ನು ಆಚರಿಸುವ ಮತ್ತು ಗೌರವಿಸುವ ಗುರಿಯನ್ನು ಹೊಂದಿರುವ ಗ್ಲೋಬಲ್ ಇನ್ಶೂರೆನ್ಸ್ ಎಕ್ಸಲೆನ್ಸ್ ಪ್ರಶಸ್ತಿಗಳು (ಜಿಐಇಎ) ಅನ್ನು ಘೋಷಿಸಿದೆ. ಉದ್ಯಮದಲ್ಲಿ ವಿಶ್ವಾಸಾರ್ಹ ಹೆಸರಾಗಿರುವ ಏಷ್ಯಾ ಇನ್ಶೂರೆನ್ಸ್ ರಿವ್ಯೂ (ಎಐಆರ್) ಅನ್ನು 2025 ರ ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನಿರ್ವಹಿಸಲು ಆಯ್ಕೆ ಮಾಡಲಾಗಿದೆ. ಬಜಾಜ್ […]

ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಆಟೋ ಚಾಲಕ!

Auto Driver

ಆಟೋ ಚಾಲಕ ಮಂಜುನಾಥ್ (50) ಅವರು ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಸಿದ್ದಲಿಂಗಪುರ ನಿವಾಸಿ, ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ವಾಸವಿದ್ದ ಅವರು ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು, ಆದರೆ ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ. ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ಆಟೋ ಚಾಲಕ ವೃತ್ತಿಯಲ್ಲಿ ಇದ್ದರು. ಈ […]