ಆಧುನಿಕತೆಯ ಬರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತಿರುವುದು ವಿಷಾದನೀಯ: ವಿನೋದ್ ಮೂಡಗದ್ದೆ

ವಿರಾಜಪೇಟೆ: ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ದತಿಯು ಕಣ್ಮರೆಯಾಗುತಿರುವುದನ್ನು ನಾವು ಮನಕಾಣುತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ, ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೦೬ ದಿನಕಾಲ ವಾರ್ಷಿಕ ವಿಶೇಷ […]
ಶೈಕ್ಷಣಿಕ ಲೋಕದ ಧ್ರುವತಾರೆಗಳು: ಕಾವೇರಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳ ಕ್ರೀಡಾಕೂಟ

ಕ್ರೀಡೆ ಕೇವಲ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ನಮ್ಮಲ್ಲಿ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದ ನಡುವೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆಯು ಬಹಳ ಸಹಕಾರಿಯಾಗಿದೆ .ಕ್ರೀಡೆಯೂ ನಮ್ಮನ್ನೆಲ್ಲಾ ಒಂದೆಡೆ […]
BSc in ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ಲಾರ್ಡ್ಸ್ ಮೋಟಾರ್ ಡ್ರೈವಿಂಗ್ ಶಾಲೆಯ […]
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಫೀಕ್ ಎ ಎ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ನಡೆಯುತ್ತಿದ್ದು ಅದರ ಪ್ರಯುಕ್ತ ಜರುಗಿದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಸ್ವಯಂ ಸೇವಾ ವಿದ್ಯಾರ್ಥಿಗಳನ್ನು […]
ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವಿರಾಜಪೇಟೆ: ವಿರಾಜಪೇಟೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ರಾಷ್ಟ್ರೀಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ನಿಶಾ ರವರು ಮಾತನಾಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಇಂದು ವಿದ್ಯಾರ್ಥಿಗಳು […]
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ

ವಿರಾಜಪೇಟೆ : ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ […]
ಕುಟ್ಟ ಪೊಲೀಸ್ ಠಾಣಾ ಸಿಬ್ಬಂದಿ ಎ.ಟಿ.ಮಂಜುನಾಥ್ ಅವರ ಚೊಚ್ಚಲ ಕೃತಿ ಲೋಕಾರ್ಪಣೆ

ಕುಟ್ಟ ಪೊಲೀಸ್ ಠಾಣೆ ಸಿಬ್ಬಂದಿ ಎ.ಟಿ.ಮಂಜುನಾಥ್ ರಚಿತ ಚೊಚ್ಚಲ ಕೃತಿ “ಕಾಣದ ಕಾಡಲು” ಲೋಕಾರ್ಪಣೆ ಗೊಂಡಿದೆ. ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಹಾಗೂ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಗೋಣಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಆವರಣದಲ್ಲಿ ನಡೆದ ದಿ.ಗಂಗಾಧರ್ ಶೆಟ್, ಸುಲೋಚನಾ ದತ್ತಿ ಮತ್ತು ದಿ.ಎನ್ ಮಹಾಬಲೇಶ್ವರ ಭಟ್ ದತ್ತಿ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಕಾಣದ ಕಾಡಲು ಕಥಾ ಸಂಕಲನವನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭ ಮಾತನಾಡಿದ ಕೃತಿಯ ಲೇಖಕ ಮಂಜುನಾಥ್, ಕೆಲಸದ […]
ರಾಜ್ಯ ಮಟ್ಟದ 5ಎ ಸೈಡ್ ರಿಂಕ್ ಹಾಕಿ ಪಂದ್ಯಾಟ: ಕಾವೇರಿ ಕಾಲೇಜು ಗೋಣಿಕೊಪ್ಪಲು ಚಾಂಪಿಯನ್

ವಿರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದಿಂದ ಆಯೋಜಿಸಲಾಗಿದ್ದ ಎರಡು ದಿನದ ರಾಜ್ಯ ಮಟ್ಟದ 5ಎ ಸೈಡ್ ರಿಂಗ್ ಹಾಕಿ ಪಂದ್ಯಾಟ ಸಮಾರೋಪ ಸಮಾರಂಭಕ್ಕೆ ಆಗಮಿಸಿ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಹಿಂದಿನ ಕಾಲದಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕೊಡಗು ಜಿಲ್ಲೆಗೆ ವಿಶೇಷವಾದ ಸ್ಥಾನವಿದೆ. ಅದರಲ್ಲಿಯು ಸೇನೆ ಹಾಗೂ ಹಾಕಿ ಪಂದ್ಯಾಟಕ್ಕೆ ಕೊಡಗು ಜಿಲ್ಲೆಯ ಕೊಡುಗೆ ಅಪಾರ. ನಮ್ಮ ಪೂರ್ವಜರು ಎಲ್ಲಾ ಕ್ಷೇತ್ರಗಳನ್ನು […]
ಕುಪ್ಪೋಡಂಡ ಎ. ರಫೀಕ್ ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಬಡ್ತಿ

ಪೊನ್ನಂಪೇಟೆ: ಕೊಡಗು ಮೂಲದ ಕುಪ್ಪೋಡಂಡ ಎ. ರಫೀಕ್ ಅವರು ರಾಜ್ಯ ಪೊಲೀಸ್ ಇಲಾಖೆಯ ಅಧೀನದ ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಆಗಿ ಮುಂಬಡ್ತಿ ಹೊಂದಿದ್ದಾರೆ. ಇದುವರೆಗೂ ಬೆಂಗಳೂರಿನ ಸಿಐಡಿ ಘಟಕದಲ್ಲಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (ಡಿ.ಎಸ್.ಐ.) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಪ್ಪೋಡಂಡ ಎ. ರಫೀಕ್ ಅವರಿಗೆ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ನೀಡಿ ಸಿಐಡಿ ಘಟಕದಲ್ಲೇ ಮುಂದುವರಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಅನುಮೋದನೆಯೊಂದಿಗೆ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಆಡಿಷನಲ್ ಡೈರೆಕ್ಟರ್ ಜನರಲ್ ಆಫ್ […]
ರಸ್ತೆ ದುಸ್ಥಿತಿ: ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದ ಯುವಕರು

ನಾಪೋಕ್ಲು: ನಾಪೋಕ್ಲು- ಭಾಗಮಂಡಲ ರಸ್ತೆ ದುಸ್ಥಿತಿಯ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಆಟೋ ಚಾಲಕರು , ಸಾರ್ವಜನಿಕರು ಭಾನುವಾರ ಸಂಜೆ ಎಮ್ಮೆ ಮಾಡು – ಚೋ ನಕೆರೆ ರಸ್ತೆಯಲ್ಲಿ ಒಂದುವರೆ ಕಿಲೋಮೀಟರ್ ದೂರ ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು. ಹಳೆ ತಾಲೂಕಿನಿಂದ ಎಮ್ಮೆ ಮಾಡು ಜಂಕ್ಷನ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ ಈ ರಸ್ತೆಯಲ್ಲಿ ಸಂಚರಿಸುವ ಸಾಧ್ಯವೇ ಆಗುತ್ತಿಲ್ಲ. ಆಟೋ ಚಾಲಕರು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರು […]