Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್ಗಳ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿಸೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಡಿಸೆಂಬರ್, 27 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, […]
ಕೆ.ಎಂ.ಎಸ್.ಎ. ವತಿಯಿಂದ ಶಾಲೆಗೆ ಕುರ್ಚಿ ವಿತರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವಿರಾಜಪೇಟೆ ಸಮೀಪದ ಕಂಡಂಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶುಕ್ರವಾರ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರು ಕುರ್ಚಿಗಳನ್ನು ಶಾಲಾ ಮುಖ್ಯ ಶಿಕ್ಷಕರಾದ ಪವೀನ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ರಶೀದ್, ಹಿಂದೆ ಗ್ರಾಮೀಣ ಪ್ರದೇಶದ ಜನರ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾಗಿದೆ. ಇಂದಿಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚು ಅನುಕೂಲಕರ […]
ಕೊಯನಾಡು ಗ್ರಾಮದಲ್ಲಿ ಜೇನು ಪೆಟ್ಟಿಗೆ ಹಾಗೂ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ವಿತರಿಸಿದ ಎ.ಎಸ್.ಪೊನ್ನಣ್ಣ

ತಾಲ್ಲೂಕಿನ ಕೊಯನಾಡು ವಲಯ ಅರಣ್ಯ ಕಚೇರಿ ಬಳಿ ನೂತನವಾಗಿ ನಿರ್ಮಿಸಿರುವ ಅಧಿಕಾರಿಗಳ ವಸತಿ ಗೃಹವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಉದ್ಘಾಟಿಸಿದರು. ಕೊಯನಾಡು ಬಳಿಯ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಸತಿ ಗೃಹ ಉದ್ಘಾಟಿಸಿ ಶಾಸಕರು ಮಾತನಾಡಿದರು. 30 ಜನ ಕೃಷಿಕರಿಗೆ ತಲಾ 2 ಜೇನು ಪೆಟ್ಟಿಗೆ, ಹಾಗೂ 6 ಜನ ಮಹಿಳೆಯರಿಗೆ ಹೊಲಿಗೆಯಂತ್ರ ಹಸ್ತಾಂತರಿಸಿದರು. ಜೊತೆಗೆ […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಡಿಸೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ, ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜೆಹನಕೋಡು, ಕಾಡುಮನೆ, ಚಿಕ್ಕತೊಳೂರು, ಕಾಗಡೀಕಟ್ಟೆ, ದೊಡ್ಡಮಳ್ತೆ, ಒಳಗುಂದ, ಸುಳಿಮಳ್ತೆ, ಹೊನ್ನಾವಳ್ಳಿ, ಕೂಗೆಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕಂಡಂಗಾಲದಲ್ಲಿ ಕೊಡವ ಮುಸ್ಲಿಮರ ಶೂಟಿಂಗ್ ಸ್ಪರ್ಧೆ

ಪೊನ್ನಂಪೇಟೆ: ಒಂದು ಕಾಲದಲ್ಲಿ ರಾಜ ಮನೆತನದವರ ಐಷಾರಾಮಿ ಕ್ರೀಡೆಯಾಗಿದ್ದ ಶೂಟಿಂಗ್ ಇಂದು ಜನಸಾಮಾನ್ಯರ ಕ್ರೀಡೆಯಾಗಿ ಮಾರ್ಪಟ್ಟಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಶೂಟಿಂಗ್ಸ್ ಸ್ಪರ್ಧೆಗಳು ಇತ್ತೀಚಿಗೆ ವ್ಯಾಪಕವಾಗಿ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಕಾರಣದಿಂದ ಕೊಡಗಿನಿಂದ ಮತ್ತಷ್ಟು ಶೂಟರ್ಸ್ ಗಳು ಉದಯಿಸುವ ಭರವಸೆಯಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಬಿಟ್ಟಂಗಾಲ ಸಮೀಪದ ಕಂಡಂಗಾಲದ ಜಿಎಂಪಿ ಶಾಲಾ ಮೈದಾನದಲ್ಲಿ […]
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದು ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹೇಳಿದರು. ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ […]
ಪ್ರಧಾನಿ ಮೋದಿ ಬಗ್ಗೆ ಯುವಕರಿಂದ ಅವಹೇಳನ – ಬಿಜೆಪಿಗರು ಬಹಿರಂಗವಾಗಿ ಕ್ಷಮೆ ಯಾಚಿಸಲಿ – ತೆನ್ನೀರ ಮೈನಾ ಆಗ್ರಹ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನ ಮಾಡಿ ಬಂಧಿತರಾಗಿರುವ ಕಿಡಿಗೇಡಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿ ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. […]
ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಸ್ಪೈಸಸ್ ಅಂಗಡಿಯ ಮೂವರನ್ನು ಬಂಧಿಸಿದ ಪೊಲೀಸರು

ಮಡಿಕೇರಿ : ಸ್ಪೈಸಸ್ ಅಂಗಡಿಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ರಾಣಿಪೇಟೆ ನಿವಾಸಿ ಫಹಾದ್ ಎಮ್.ಇ(31), ತ್ಯಾಗರಾಜ ಕಾಲನಿಯ ನಿವಾಸಿ ಬಾಸಿಲ್ ಎಂ.ಎಚ್.(29), ತ್ಯಾಗರಾಜ ಕಾಲೋನಿ ನಿವಾಸಿ ಸಮೀರ್ ಎಂ.ಎಂ.(31) ಬಂಧಿತರು. ಯುವಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಕೀಳುಮಟ್ಟದ ಭಾಷೆ ಬಳಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅವರ ವಿರುದ್ಧ […]
ಕುರುಳಿ ಅಂಬಲಮಂದ್ನಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ್

ಮಡಿಕೇರಿ : ಕಡಗದಾಳುವಿನ ಕುರುಳಿ ಅಂಬಲ ಮಂದ್ನಲ್ಲಿ ಪುತ್ತರಿ ಕೋಲಾಟ್ ಸಾಂಪ್ರದಾಯಿಕವಾಗಿ ಮಂಗಳವಾರ ನಡೆಯಿತು. ಡಿಸೆಂಬರ್ 03ರ ಸಂಜೆ ಈಡ್, ಡಿ.7 ಭಾನುವಾರ ಮುಂಜಾನೆ ಮಂದ್ ತೊರ್ಪ, ಡಿ 9ರ ಮಂಗಳವಾರ ಊರಿನವರು ಮಂದ್ನಲ್ಲಿ ಸೇರಿ ಮಧ್ಯಾಹ್ನ 12 ಗಂಟೆಗೆ ಊರ್ ತಕ್ಕರ ಮನೆಗೆ ತೆರಳಿ ಫಲಹಾರ ಊಟೋಪಚಾರದ ನಂತರ ತಳಿಯಕ್ಕಿ ಬೊಳ್ಚ, ದುಡಿಕೊಟ್ಟ್ ಪಾಟ್, ಒಡ್ಡೋಲಗದೊಂದಿಗೆ ಊರ್ ತಕ್ಕರನ್ನು ಮಂದ್ಗೆ ಕರೆ ತಂದರು. ನಂತರ ಊರ್ ಕೋಲ್ ನಡೆಯಿತು. 3 ಗಂಟೆಗೆ ದೇಶ ತಕ್ಕರನ್ನು ಹಾಗು […]
ಡಿ.11ರಂದು ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಇದೇ ತಿಂಗಳ 11ರಂದು ಗುರುವಾರ ಉದ್ಘಾಟನೆಗೊಳ್ಳಲಿದೆ. ಮಡಿಕೇರಿ ತಾಲೂಕಿನ ಕಕ್ಕಬ್ಬೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಯೊಂದಕ್ಕೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವ ಮೂಲಕ ಕೆ.ಎಂ.ಎಸ್.ಎ.ಯನ್ನು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಲೀರ ರಶೀದ್ ತಿಳಿಸಿದ್ದಾರೆ. ಈ ಕುರಿತು ವಿರಾಜಪೇಟೆಯಲ್ಲಿ ನಡೆದ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯ […]