‘ಸು ಫ್ರಮ್ ಸೋ’ ಬಾಕ್ಸಾಫೀಸ್ ಕಲೆಕ್ಷನ್ ಎಷ್ಟು ಕೋಟಿ?

ಕನ್ನಡ ಚಿತ್ರರಂಗದಲ್ಲಿ ಕೆಲವರು ಇನ್ನೂ ಕೂಡ KGF ಚಿತ್ರದ ಗುಂಗಿನಲ್ಲಿದ್ದಾರೆ. ಪ್ಯಾನ್ ಇಂಡಿಯಾ ಎಂಬ ಭ್ರಮಾ ಲೋಕದ ಬೆನ್ನತ್ತಿದ್ದಾರೆ. ಆದರೆ ಇನ್ನು ಕೆಲವರು ಹೊಸ ಬಗೆಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೊಸ ಹೊಸ ಆಲೋಚನೆಗಳಿಂದ ಎಲ್ಲರನ್ನು ನಿಬ್ಬೇರಗಾಗಿಸುತ್ತಿದ್ದಾರೆ. ಹೊಸಬರ ಸಿನಿಮಾವೊಂದು ಕರ್ನಾಟಕದಲ್ಲಿ ಸಂಚಲನವನ್ನು ಸೃಷ್ಟಿಸುತ್ತಿದೆ. ”ಸು ಫ್ರಮ್ ಸೋ” (Su From So) ಚಿತ್ರ ಕನ್ನಡ ಚಿತ್ರರಂಗದ ಸದ್ಯದ ಉತ್ತಮ ಉದಹಾರಣೆ. ಅಬ್ಬರದ ಪ್ರಚಾರ ಇಲ್ಲ.. ಚಿತ್ರದಲ್ಲಿ ಹೇಳಿಕೊಳ್ಳುವಂತಹ ಯಾವುದೇ ದೊಡ್ಡ ಸ್ಟಾರ್ ಇಲ್ಲ. ಆದರೂ ಇವತ್ತು ಎಲ್ಲರ […]
ಹೊಸ ಬ್ಯುಸಿನೆಸ್ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಭಾರತೀಯ ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಇದೀಗ ನಟಿ ರಶ್ಮಿಕಾ ಬ್ಯುಸಿನೆಸ್ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಈ ಬಗ್ಗೆ ರಶ್ಮಿಕಾ, ತಮ್ಮ ತಾಯಿ ಅವರೊಂದಿಗಿನ ವಿಡಿಯೋ ಕಾಲ್ನ ಸಂಭಾಷಣೆ ಮೂಲಕ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಹೊಸ ಬ್ಯುಸಿನೆಸ್ ಶುರು ಮಾಡಿದ್ದಾರೆ. […]
ಕೊಡಗಿನ ಹುಡುಗನ ಜೊತೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್!

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ (Anchor Anushree) ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಕೇಳುಬರುತ್ತಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ. ಮಂಗಳೂರಿನ ಸುರತ್ಕಲ್ ಮೂಲದ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಬಿಗ್ ಬಾಸ್ […]
ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದಿದ್ದೇಕೆ ‘ಸಂಜು ವೆಡ್ಸ್ ಗೀತಾ’ ಟೀಂ?

ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಆದರೆ ರಚಿತಾ ರಾಮ್ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ಇದರ ನಿರ್ಮಾಪಕ ಛಲವಾದಿ ಕುಮಾರ್ ರಚಿತಾ ರಾಮ್ (Rachitha ram) ವಿರುದ್ದ ದೂರು ನೀಡಿದ್ದಾರೆ, ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ […]
ಡೈರೆಕ್ಟರ್ ಕ್ಯಾಪ್ ತೊಟ್ಟ ನಟಿ ಹರ್ಷಿಕಾ ಪೂಣಚ್ಚ – ಚಿ. ಸೌಜನ್ಯ ಪೋಸ್ಟರ್ ಬಿಡುಗಡೆ ಮಾಡಿದ ಕೊಡಗಿನ ಕುವರಿ… ಮೊದಲ ನಿರ್ದೇಶನದಲ್ಲೇ ಸಖತ್ ಸದ್ದು ಮಾಡಿದ ಹರ್ಷಿಕಾ..!

ಮಡಿಕೇರಿ : ರಾಜ್ಯದಲ್ಲಿ ಈಗ ಧರ್ಮಸ್ಥಳದ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದೆ. ದೌರ್ಜನ್ಯಕ್ಕೊಳಗಾಗಿ ಪ್ರಾಣ ಕಳೆದುಕೊಂಡ ಯುವತಿಗೆ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಕೂಡಾ ನಡೆಯುತ್ತಿದೆ. ಈ ನಡುವೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಚಿ. ಸೌಜನ್ಯ ಎಂಬ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ತಾಯ್ತನದ ಸಂಭ್ರಮದಲ್ಲಿದ್ದ ಹರ್ಷಿಕಾ ಪೂಣಚ್ಚ ಮತ್ತೆ ಫೀಲ್ಡ್ಗೆ ರೀ ಎಂಟ್ರಿಯಾಗಿದ್ದಾರೆ. ಅದು ಕೂಡಾ ಡೈರೆಕ್ಟರ್ ಕ್ಯಾಪ್ ತೊಡುವ ಮೂಲಕ. ಮೊದಲ ಬಾರಿಗೆ ಡೈರೆಕ್ಷನ್ಗೆ […]
ರಶ್ಮಿಕಾಗೆ ಸೂಕ್ತ ಭದ್ರತೆ ನೀಡಲು ಕೊಡವ ಕೌನ್ಸಿಲ್ ಒತ್ತಾಯ: ಕೊಡಗಿನ ಬೆಡಗಿ ಪರ ನಿಂತ ಖ್ಯಾತ ನಟಿಯರು

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೊಡಗಿನ ಬೆಡಗಿ. ಇವರು ಅಭಿನಯಿಸಿದ ಮೊದಲ ಚಿತ್ರ ಕನ್ನಡದ್ದು. ಆದರೆ ರಶ್ಮಿಕಾ ಕನ್ನಡ ಸರಿಯಾಗಿ ಮಾತಾಡಲ್ಲ, ಹೈದರಾಬಾದ್ ನನ್ನ ಊರು ಅಂತ ಹೇಳಿದ್ದಕ್ಕೆ ವಿಪರೀತ ಟ್ರೋಲ್ಗೆ ಗುರಿಯಾಗುತ್ತಿದ್ದಾರೆ. ಶಾಸಕ ರವಿಕುಮಾರ್ ಅವರಂತೂ ರಶ್ಮಿಕಾ ಮಂದಣ್ಣಗೆ ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಬೆದರಿಕೆ ಧ್ವನಿಯಲ್ಲಿ ಹೇಳಿದ್ದರು. ಇದೀಗ ರಶ್ಮಿಕಾ ಮಂದಣ್ಣ ಬೆಂಬಲಕ್ಕೆ ನಿಂತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ರಶ್ಮಿಕಾಗೆ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. […]
Govinda: ಬಾಲಿವುಡ್ ನಟ ಗೋವಿಂದ ಡಿವೋರ್ಸ್ ಕೇಸ್ಗೆ ಹೊಸ ಟ್ವಿಸ್ಟ್

ಬಾಲಿವುಡ್ ಸ್ಟಾರ್ ನಟ ಗೋವಿಂದ (Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ 37 ವರ್ಷಗಳ ದಾಂಪತ್ಯ ಕೊನೆಗೊಳಿಸುವ ವಿಚಾರ ಎಲ್ಲೆಡೆ ವೈರಲ್ ಆಗಿತ್ತು. ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ದಾಂಪತ್ಯದಲ್ಲಿ ಬಿರುಕು ಸುದ್ದಿ ಬಿಟೌನ್ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಕುಟುಂಬದ ಆಪ್ತ ಮೂಲವೊಂದು ಸುನೀತಾ ಕೆಲವು ತಿಂಗಳ ಹಿಂದೆಯೇ ಗೋವಿಂದ ಅವರಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ಸ್ಟಾರ್ ನಟ ಮತ್ತು ಸುನೀತಾ ಅವರು 1987ರ ಮಾರ್ಚ್ನಲ್ಲಿ ಮದುವೆಯಾಗಿದ್ದರು. […]
ಗಂಗಾ ಪುಣ್ಯ ಸ್ನಾನ ಮಾಡಿ, ಸೇವೆ ಮಾಡುವ ಭಾಗ್ಯ ನನಸು ಮಾಡಿಕೊಂಡ ನಟಿ ಕಾರುಣ್ಯ ರಾಮ್

ಮಹಾಕುಂಭ ಮೇಳಕ್ಕೆ ಪ್ರತಿದಿನವೂ ಹಲವಾರು ಜನರು ಆಗಮಿಸುತ್ತಿದ್ದಾರೆ. ಪ್ರಯಾಗ್ ರಾಜ್ನ್ನು ಭೇಟಿಯಾಗಿ ತ್ರಿವೇಣಿ ಸಂಗಮದಲ್ಲಿ ನುಗ್ಗಿ, ನಮ್ಮ ಜನ್ಮ ಪಾವನವಾಯಿತು ಎಂದು ಸಾರ್ಥಕ ಭಾವನೆಯನ್ನು ಹೊಂದಿ ಮನೆ ಕಡೆ ಹಿಂತಿರುಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸುಮಾರು 50 ಕೋಟಿ ಹೆಚ್ಚಿನ ಭಕ್ತರು ಮಹಾಕುಂಭ ಮೇಳಕ್ಕೆ ಬೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಹಾಕುಂಭ ಮೇಳದ ವಿಶೇಷವಾದ ಸಂಗತಿ ಎಂದರೆ, ಈ ಬಾರಿ ಪುಣ್ಯಸ್ನಾನವು ಕೇವಲ ಜನಸಾಮಾನ್ಯರಷ್ಟೇ ಮಾಡುತ್ತಿಲ್ಲ. ಚಿತ್ರರಂಗದಲ್ಲಿ ಹೆಸರಾಗಿದ್ದ ಹಲವರು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. […]