ದುರಂತ ಅಂತ್ಯ ಕಂಡ ಏರ್​ ಇಂಡಿಯಾದ ಬೋಯಿಂಗ್-787 ವಿಶೇಷತೆ ಏನೇನು?

Air India Boeing 787 plane

ಗುರುವಾರದಂದು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ (Air India) ಬೋಯಿಂಗ್-787 ಡ್ರೀಮ್‌ಲೈನರ್ ವಿಮಾನ (Boeing 787 Dreamliner) ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿದೆ. 672 ಅಡಿ ಎತ್ತರದಿಂದ ಮೆಡಿಕಲ್​​​​​​​​ ಹಾಸ್ಟೆಲ್​​​ ಮೇಲೆ ಬಂದು ಅಪ್ಪಳಿಸಿದೆ. ಈ ಅಪಘಾತದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 241 ಜನರು ಸಾವನ್ನಪ್ಪಿದ್ದಾರೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಮಧ್ಯಾಹ್ನ 1:38ಕ್ಕೆ ಟೇಕ್​ಆಫ್​ ಆದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿತು. ಪೈಲಟ್ “ಮೇಡೇ” […]

ಅಹಮದಾಬಾದ್‌ ವಿಮಾನ ದುರಂತ – ವಿಮಾನ ಬೆಂಕಿಗಾಹುತಿಯಾದರೂ ಗ್ರೇಟ್‌ ಎಸ್ಕೇಪ್‌ ಆದ ಏಕಮಾತ್ರ ವ್ಯಕ್ತಿ..!

ಅಹಮದಾಬಾದ್‌ : ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ೨೪‌೧ ಮಂದಿ ಮೃತಪಟ್ಟಿದ್ದಾರೆ. ಆದರೆ ಪವಾಡಸದೃಶ ರೀತಿಯಲ್ಲಿ ವ್ಯಕ್ತಿಯೊಬ್ಬರು ಪಾರಾಗಿದ್ದಾರೆ. ರಮೇಶ್‌ ವಿಶ್ವಕುಮಾರ್‌ ಮಹಾದುರಂತದಲ್ಲಿ ಬದುಕುಳಿದ ವ್ಯಕ್ತಿ. ಭಾರತ ಮೂಲದ ರಮೇಶ್‌ ತನ್ನ ಕುಟುಂಬದೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ಕೆಲವು ದಿನದ ಹಿಂದೆ ಭಾರತಕ್ಕೆ ಬಂದಿದ್ದ ಅವರು, ಇಂದು ತನ್ನ ಸಹೋದರನೊಂದಿಗೆ ಲಂಡನ್‌ಗೆ ಮರಳುತ್ತಿದ್ದರು. ವಿಮಾನದ ಸೀಟ್‌ ೧೧(ಎ)ನಲ್ಲಿ ರಮೇಶ್‌ ವಿಶ್ವಕುಮಾರ್‌ ಕುಳಿತಿದ್ದರು. ಪಕ್ಕದಲ್ಲಿ ಅವರ ಸಹೋದರ ಇದ್ದರು. ಏರ್‌ ಇಂಡಿಯಾದ ಬೋಯಿಂಗ್‌ ವಿಮಾನ ಟೇಕ್‌ […]

ಅಹಮದಾಬಾದ್‌ ವಿಮಾನ ದುರಂತ – ಮಂಗಳೂರು ಮೂಲದ ಸಹಾಯಕ ಪೈಲಟ್‌ ದುರ್ಮರಣ..!

ಗುಜರಾತ್ : ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 200ಕ್ಕೂ ಅಧಿಕ ಮಂದಿ ದುರಂತ ಅಂತ್ಯ ಕಂಡಿದ್ದಾರೆ.  ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಲು ಹೊರಟಿದ್ದ ವಿಮಾನ ಟೇಕಾಫ್‌ ಆದ ಕೆಲವೇ ನಿಮಿಷಗಳಲ್ಲಿ ನೆಲಕ್ಕೆ ಅಪ್ಪಳಿಸಿದೆ.  ಈ ದುರಂತದಲ್ಲಿ ಕರ್ನಾಟಕ ಮೂಲದ ಸಹಾಯಕ ಪೈಲಟ್‌ ಕೂಡಾ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ದುರಂತ ಅಂತ್ಯ ಕಂಡವರಾಗಿದ್ದಾರೆ.  ಈ ಘಟನೆಯಲ್ಲಿ ವಿದೇಶಿ ನಾಗರೀಕರು ಸೇರಿದಂತೆ ಬಹುತೇಕ ಎಲ್ಲರೂ ದುರಂತ ಅಂತ್ಯ ಕಂಡಿದ್ದಾರೆಂದು ಗುಜರಾತ್‌ನ ಮಾಧ್ಯಮಗಳು […]

‌Big Breaking : ಅಹಮದಾಬಾದ್‌ನಲ್ಲಿ ವಿಮಾನ ಪತನ – ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ನೆಲಕ್ಕಪ್ಪಳಿಸಿದ ಏರ್‌ ಇಂಡಿಯಾ ಫ್ಲೈಟ್..!

ಬೆಂಗಳೂರು : ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿಮಾನ ಅಪಘಾತ ಸಂಭವಿಸಿದೆ.  ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 240ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಇದಾಗಿದ್ದು, ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಅಪಘಾತಕ್ಕೀಡಾಗಿದೆ. ಏರ್‌ಪೋರ್ಟ್‌ನ ಕೆಲವೇ ಅಂತರದಲ್ಲಿ ದುರಂತ ಸಂಭವಿಸಿದ್ದು, ವಿಮಾನದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು,  ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗುಜರಾತ್‌ನ ಮಾಜಿ […]

Operation Sindoor: ಪಾಕ್​ ಒಳಗೆ ನುಗ್ಗಿ ಹೊಡೆದ ಬಗ್ಗೆ ಪಿನ್‌ ಟು ಪಿನ್ ಡೀಟೇಲ್ಸ್ ಬಿಚ್ಚಿಟ್ಟ ಸೇನೆ

Operation Sindoor

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಲು ಸಿದ್ಧ ಎಂಬುದನ್ನು ಭಾರತೀಯ ಸೇನೆ ನಿರೂಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (PoK) ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ (Operation Sindoor) ಅಡಿಯಲ್ಲಿ ನಿಖರವಾದ ದಾಳಿ ನಡೆಸಿದೆ. ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಹಂಚಿಕೊಂಡ ಮಾಹಿತಿ ಪ್ರಕಾರ, ಈ […]

ಪಶ್ಚಿಮಘಟ್ಟ ಉಳಿಸಿಕೊಳ್ಳಲು ವರದಿ ಸಲ್ಲಿಸಿದ್ದ ಕೆ ಕಸ್ತೂರಿರಂಗನ್ ನಿಧನ

Kasturirangan

ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಕೆ.ಕಸ್ತೂರಿರಂಗನ್ (Kasturirangan) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷಗಳಾಗಿತ್ತು. ಬಾಹ್ಯಾಕಾಶ ವಿಜ್ಞಾನಿಯಾಗಿದ್ದ ಅವರು, ಭಾರತೀಯ ಭಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಬರೋಬ್ಬರಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1994 ರಿಂದ ಆಗಸ್ಟ್ 27, 2003ವರೆಗೆ ಇಸ್ರೋದ ಅಧ್ಯಕ್ಷರಾಗಿದ್ದರು. ರಾಜ್ಯಸಭೆ ಸದಸ್ಯ, ಭಾರತ ಸರ್ಕಾರದ ಯೋಜನಾ ಆಯೋಗದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಕೆ.ಕಸ್ತೂರಿ ರಂಗನ್ ಅವರ ಸಾಧನೆಗೆ ಭಾರತ ಸರ್ಕಾರ, ದೇಶದ […]

Jammu and Kashmir: ಭಾರತೀಯ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ… ಓರ್ವ ಯೋಧ ಹುತಾತ್ಮ

Jammu and Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಉಗ್ರರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಭಾರತೀಯ ಸೇನೆ ಮುಂದಾಗಿದೆ. ಇದೀಗ ಭಯೋತ್ಪಾದಕರನ್ನು ಸದೆಬಡೆಯಲು ಕಾಲ ಕೂಡಿ ಬಂದಿದೆ. ಇಂದು ಉಧಂಪೂರ್ ಬಳಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪಿನ ನಡುವೆ ಘರ್ಷಣೆ ಪ್ರಾರಂಭವಾಗಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ (Soldier) ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ (ಏ.24) ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ […]

ಸಹಾಯವಾಣಿ ಆರಂಭಿಸಿ ಸರ್ಕಾರ: ಜಮ್ಮು ಕಾಶ್ಮೀರ ಪ್ರವಾಸ ತೆರಳಿರುವ ವಿವರ ಇಲ್ಲಿ ಹಂಚಿಕೊಳ್ಳಿ

Kashmir

ಕಾಶ್ಮೀರದ ಪಹಲ್‍ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ (Kashmir) ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಫರೇಟರ್ಸ್ ಮತ್ತು ಟ್ರಾವಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ (Helpline) ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ 080-43344334, […]

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಪ್ರತೀಕಾರದ ಭರವಸೆ ನೀಡಿದ ಅಮಿತ್‌ ಶಾ

Amit Shah

ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಪಹಲ್ಗಾಮ್ (Pahalgam) ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯ ಸಂತ್ರಸ್ತರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕಳೆಬರಹಗಳಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ ನಂತರ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಮಂಗಳವಾರ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ನಾಗರಿಕರು, ಬಹುತೇಕ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಇದು […]

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

Isha Ambani

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]