ರಶ್ಮಿಕಾ, ವಿಜಯ್ ದೇವರಕೊಂಡ ನಿಶ್ಚಿತಾರ್ಥ? – ಹೊಸ ಜೀವನದತ್ತ ಜೋಡಿಹಕ್ಕಿ ಹೆಜ್ಜೆ..!

ಬೆಂಗಳೂರು : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಹೊಸ ಜೀವನಕ್ಕೆ ಹೆಜ್ಜೆಯಿಡಲು ಕೊಡಗಿನ ಸುಂದರಿ ಸಿದ್ಧರಾಗುತ್ತಿದ್ದಾರೆಂಬ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರತಿಷ್ಠಿತ ಮಾಧ್ಯಮಗಳು ವರದಿ ಪ್ರಕಟಿಸಿದ್ದು, ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆಂದು ವರದಿ ಭಿತ್ತರಿಸಿದೆ. ಆದರೆ ಈ ಬಗ್ಗೆ ಇಬ್ಬರು ತಾರೆಯರ ಕಡೆಯವರು ಯಾರೂ ಕೂಡಾ ಅಧಿಕೃತ ಹೇಳಿಕೆ […]
ಮಿತ ಆಹಾರ ಸೇವನೆಯಿಂದ ಆರೋಗ್ಯಕರ ಜೀವನ ಸಾಧ್ಯ – ಮಂಜುನಾಥ್

ಮಡಿಕೇರಿ : ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಪಟ್ಟರು. ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮತೋಲನ ಆಹಾರದ ಕುರಿತು ಕಾರ್ಯಕ್ರಮಕ್ಕೆ ಸೀಮಿತವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು ಎಂದು ತಿಳಿಸಿದರು. ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಮಾತನಾಡಿ ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದ್ದು, […]
ಗರ್ಭದೊಳಗಿನ ಕಂದನಿಗೆ ಕಂಟಕವಾಗದಿರಲಿ ಅಬ್ಬರದ ಸಂಗೀತ..!

ವಿಶೇಷ ಲೇಖನ : ಡಾ. ಕೆ.ಬಿ. ಸೂರ್ಯಕುಮಾರ್ ಮಹಾಭಾರತದಲ್ಲಿ ಶ್ರೀಕೃಷ್ಣ ತನ್ನ ತಂಗಿ ಸುಭದ್ರೆಗೆ ಯುದ್ಧದಲ್ಲಿನ ಅಭೇದ್ಯವ್ಯೂಹಗಳ ಭೇದನೆಯನ್ನು ವಿವರಿಸುವಾಗ ಗರ್ಭದಲ್ಲಿದ್ದ ಅಭಿಮನ್ಯು ಅದನ್ನು ಕೇಳಿ ತಿಳಿದು, ಮುಂದೆ ಧನುರ್ವಿದ್ಯಾಪಾರಂಗತನಾದ. ವೈಜ್ಞಾನಿಕ ಸಂಶೋಧನೆಯ ಪ್ರಗತಿಯಿಂದ ಗರ್ಭಾಶಯವು ಶಬ್ದರಹಿತವಲ್ಲ ಎಂಬುದು ತಿಳಿದುಬಂದಿದೆ. ಗರ್ಭದೊಳಗಿನ ಮಗುವಿಗೆ ಹೊರ ಜಗತ್ತಿನಿಂದ ಬರುವ ಜೋರಾದ ಶಬ್ದಗಳು ಗರ್ಭರಸದ ( ಅಮ್ನಿಯೋಟಿಕ್ ಫ್ಲೂಯಿಡ್) ಮೂಲಕ ತಲುಪಬಹುದು ಮತ್ತು ನೇರವಾಗಿ ಹಾನಿಕರ ಪರಿಣಾಮ ಬೀರಬಹುದು ಎಂಬುದು ಸಾಬೀತಾಗಿದೆ. ಗರ್ಭದಲ್ಲಿ ಮಗು ಶಬ್ದವನ್ನು ಹೇಗೆ ಕೇಳುತ್ತದೆ?… […]
ಏನಿದು ಮೆದುಳು ತಿನ್ನುವ ಅಮೀಬಾ – ಡಾ. ಕೆ.ಬಿ. ಸೂರ್ಯಕುಮಾರ್ ಅವರ ಸಕಾಲಿಕ ಬರಹ

ಕೇರಳದಲ್ಲಿ ಕೆಲವರಿಗೆ ಮೆದುಳಿನಲ್ಲಿ ಅಮೀಬಾ ಸೋಂಕು ಪತ್ತೆಯಾಗಿದ್ದು, ಜನ ಆತಂಕಕ್ಕೀಡಾಗುಂತೆ ಮಾಡಿದೆ. ಇದರ ಆತಂಕ ನೆರೆಯ ರಾಜ್ಯಗಳಲ್ಲೂ ಮೂಡಿದೆ. ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಅವರು ಎರಡು ವರ್ಷದ ಹಿಂದೆ ಬರೆದ ಲೇಖನ ಸಕಾಲಿಕವಾಗಿದೆ. ಈ ಲೇಖನ ನಿಮ್ಮ ಮಾಹಿತಿಗಾಗಿ ಮಾತ್ರ. ಇದು ಅಪರೂಪದ ರೋಗವಾಗಿದ್ದು ಯಾವುದೋ ಒಂದು ಲಕ್ಷಣ ಕಂಡ ಕೂಡಲೇ ತನಗೆ ಆ ರೋಗವಿದೆ ಎಂದು ತಪ್ಪಾಗಿ ಯಾರೂ ತಿಳಿದುಕೊಳ್ಳಬೇಡಿ!. ಇತ್ತೀಚಿಗೆ ಕೇರಳದಿಂದ ಬಂದ ಒಂದು ವರದಿಯ ಪ್ರಕಾರ ಕಲುಷಿತ […]
ಅಂಗಾಂಗ ದಾನದ ನಾಯಕತ್ವದತ್ತ ಕರ್ನಾಟಕದ ಪಯಣ – ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನದಲ್ಲಿ ಭಾಗಿಯಾಗಿ…

ಲೇಖನ : ಡಾ. ಸುನೀಲ್ ಕಾರಂತ್, ಬೆಂಗಳೂರು ಅಂಗಾಂಗ ದಾನದ ಪ್ರತಿಜ್ಞೆ ಮಾಡುವಲ್ಲಿ ಕರ್ನಾಟಕವು ಈಗ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿಯಾಗಿದ್ದು, ಜೀವ ಉಳಿಸುವ ಈ ಕಾರ್ಯದ ಬಗ್ಗೆ ಜಾಗೃತಿ ನಿಧಾನವಾಗಿ ಬೆಳೆಯುತ್ತಿದೆ ಎಂಬುದನ್ನು ತೋರಿಸುತ್ತದೆ. ಆದರೆ, ಸಾಗಬೇಕಾದ ದಾರಿ ಇನ್ನೂ ಬಲು ದೂರವಿದೆ. ಪ್ರತಿದಿನ ನಮ್ಮ ಆಸ್ಪತ್ರೆಯಲ್ಲಿ ಹೃದಯ, ಯಕೃತ್ತು, ಮೂತ್ರಪಿಂಡ, ಶ್ವಾಸಕೋಶ ಅಥವಾ ಕರುಳು ಕಸಿಗಾಗಿ ರೋಗಿಗಳು ಹತಾಶೆಯಿಂದ ಕಾಯುತ್ತಿರುವುದನ್ನು ನಾವು ನೋಡುತ್ತೇವೆ. ಅವರಲ್ಲಿ ಅನೇಕರಿಗೆ ಬಹಳ ಸಮಯ ತಗಲುತ್ತದೆ. […]
ಕುಶಾಲನಗರದಲ್ಲಿ ಸ್ತನ್ಯಪಾನ ಸಪ್ತಾಹ – ಸೊಪ್ಪಿನ ರಸಗಳನ್ನು ಮಕ್ಕಳಿಗೆ ಕುಡಿಸಬೇಡಿ – ಕರೆ ನೀಡಿದ ಪ್ರಮುಖರು

ಕುಶಾಲನಗರ : ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರದ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಇಂದುಧರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ತಿಳಿದಿರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಿ ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸಲು ಮತ್ತು ತಾಯಿ ಮತ್ತು ಮಗುವಿಗೆ ಆಗುವ ಪ್ರಯೋಜನವನ್ನು ಉತ್ತೇಜಿಸಲು ಸಪ್ತಾಹವನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ವಾರದ ಆಚರಣೆಯಾಗಬಾರದು. ಪ್ರತಿ […]
ಮಡಿಕೇರಿಯಲ್ಲಿ ವಿಶ್ವ ಮೆದುಳು ದಿನಾಚರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಮೆದುಳು ದಿನಾಚರಣೆ ನಡೆಯಿತು. 2025 ನೇ ಸಾಲಿಗೆ ‘ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ’ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮೆದುಳು ಆರೋಗ್ಯ ಕಾರ್ಯಕ್ರಮದ ಅಧಿಕಾರಿಗಳಾದ ಡಾ.ಆನಂದ್ ಅವರು ಮತ್ತು […]
ಭಾಗಮಂಡಲ ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್ ಸೇವೆ ಆರಂಭ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ಗ್ರಾಮ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ನೂತನ ಆಂಬುಲೆನ್ಸ್ಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹ್ಯಾರಿಸ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಜಾನನ ಯುವಕ ಸಂಘ ಸಮಾಜಕ್ಕೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗ್ರಾಮಸ್ಥರು ಕೂಡಾ ಸಹಕಾರ ನೀಡಬೇಕೆಂದರು. ಸಂಘದ ಅಧ್ಯಕ್ಷ ಗೌರೀಶ್ ರೈ […]
ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ – ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ(ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ ೩೧ ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ […]
ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]