ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

Renukacharya Jayanti

ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚರ‍್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮಕ್ಕೆ (Renukacharya Jayanti) ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ […]

ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

Youth Consultant

ಯುವ (Youth) ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ […]

ನೋಂದಣಿ ಆಗದಿರುವ ಹೋಂಸ್ಟೇ ಹೆಸರು ನೋಂದಾಯಿಸಿ: ವೆಂಕಟ್ ರಾಜಾ

Kodagu DC

ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ (Homestay) ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಬುಧವಾರ ನಡೆದ […]

ಕೊಡಗಿನ ಹಲವೆಡೆ ಲಘು ಭೂಕಂಪನ ಅನುಭವ!

Mild Earthquake

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಳಿ ಮಂಗಳವಾರ ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ. ಮಡಿಕೇರಿಯ (Madikeri) ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 10:49:05 ಕ್ಕೆ ಸಂಭವಿಸಿದೆ. ಭೂಕಂಪ ಆಗಲು ಬೇರೆ ಬೇರೆ ಕಾರಣಗಳಿವೆ. ಭೂಕಂಪಗಳನ್ನು […]

ಕಾರ್ಯಗಾರ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ

Workshop

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ (Women) ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ (Workshop) ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ […]

ಯುವಜನರ ಗಮನಕ್ಕೆ: ಮಾಸಿಕ Rs.3000 ಯುವನಿಧಿಗೆ ಅರ್ಜಿ ಆಹ್ವಾನ

Yuva Nidhi Scheme

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ (Yuva Nidhi) ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ. 2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ […]

ವಿನೂತನ ಕಾರ್ಯಕ್ರಮ: ನಮ್ಮ ನಡಿಗೆ ಸಮುದಾಯದ ಕಡೆಗೆ

innovative program

ವಿರಾಜಪೇಟೆಯ (Virajpet) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಎಸ್.ಸಿ, ಎಸ್.ಟಿ ಸಮಿತಿಯ ವತಿಯಿಂದ ನಮ್ಮ ನಡಿಗೆ ಸಮುದಾಯದ ಕಡೆಗೆ ಶೀರ್ಷಿಸಿಕೆಯಡಿಯಲ್ಲಿ ತಿತಿಮತಿ ಗ್ರಾಮ ಪಂಚಾಯಿತಿಯ ಮರಪಾಲ ಹಾಡಿಯಲ್ಲಿ ಹಾಡಿ ಜನರಿಗಾಗಿ ವಿಶೇಷ ಉಪನ್ಯಾಸ, ಹಾಡಿ ಬೇಟಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು (program) ಸೋಮವಾರ ಮರಪಾಲ ಅಂಗನವಾಡಿಯಲ್ಲಿ ನಡೆಯಿತು. ಗ್ರಾಮ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾದ ರಾಮು.ಪಿ.ಸಿ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಭಿತ್ತಿಪತ್ರವನ್ನು ಬಿಡುಗಡೆ ಮಾಡಿ ಇಂದಿನ […]

ಕೊಡವ ಕೂಟಾಳಿಯಡ ಕೂಟದಿಂದ ತಾತಂಡ ಜ್ಯೋತಿ ಪ್ರಕಾಶ್‌ಗೆ ಸನ್ಮಾನ

Jyoti Prakash

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದಿಂದ (Kodava Kutaliyada Koota) ಬಾಸ್ಕೆಟ್ ಬಾಲ್ ಆಟಗಾರ್ತಿ ತಾತಂಡ ಜ್ಯೋತಿ ಪ್ರಕಾಶ್ (Jyoti Prakash) ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ಜೂನಿಯರ್ ಕಾಲೇಜ್ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುವ ಜೊತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿಯೂ ಗುರುತಿಸಿ ಕೊಂಡಿರುವ ತಾತಂಡ ಜ್ಯೋತಿ ಪ್ರಕಾಶ್ ಅವರ ಸಾಧನೆಯನ್ನು ಪರಿಗಣಿಸಿ ಕೊಡವ ಕೂಟಾಳಿಯಡ ಕೂಟದ ಸದಸ್ಯರು ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅವರ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದರು. ಜ್ಯೋತಿ […]

ಭಾರತೀಯ ನೌಕಾಪಡೆಯ ಕಮಾಂಡಿಂಗ್ ಆಫೀಸರ್ ಆಗಿ ಕೊಡಗಿನ ನಿತಿನ್ ಕಾರ್ಯಪ್ಪ ನೇಮಕ

Commanding Officer of Indian Navy

ಕೊಡಗು ಮೂಲದ ಕ್ಯಾಪ್ಟನ್ ಮಾಳೇಟಿರ ನಿತಿನ್ ಕಾರ್ಯಪ್ಪ ಭಾರತೀಯ ನೌಕಾಪಡೆಯ (Indian Navy) ಕಮಾಡಿಂಗ್ ಆಫೀಸರ್ ಆಗಿ ಕಲ್ಕತ್ತದ ಐಎನ್ಎಸ್ ನಲ್ಲಿ ನೇಮಕಗೊಂಡಿದ್ದಾರೆ. ಕ್ಯಾಪ್ಟನ್ ನಿತಿನ್ ಕಾರ್ಯಪ್ಪ ಮೈಸೂರಿನ ಸೇಂಟ್ ಜೋಸೆಫ್ ಶಾಲಾ ವಿದ್ಯಾಭ್ಯಾಸದ ನಂತರ ರಾಷ್ಟ್ರೀಯ ಭಾರತೀಯ ಸೇನಾ ಕಾಲೇಜ್ ಡೆಹರಾಡೂನ್ ನಲ್ಲಿ ತರಬೇತಿ ಹೊಂದಿ ಡಿಫೆನ್ಸ್ ಅಕಾಡೆಮಿಗೆ ಸೇರ್ಪಡೆಗೊಂಡರು. ಈ ಹಿಂದೆ ಐಎನ್ಎಸ್ ಅಜಯ್, ಐಎನ್ಎಸ್ ಕಡ್ಮಟ್ ನಲ್ಲಿ ಕಮಾಂಡರ್ ಆಗಿ ಸೇವಿಸಲಿಸಿದ್ದರು. ಇಸ್ಲಾಂಮಬಾದ್ ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಸಲಹೆಗಾರರಾಗಿ ಕೂಡ ಸೇವೆ […]

ವಿರಾಜಪೇಟೆ ಮಲೆ ತಿರಿಕೆ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸುವಲ್ಲಿ ಯಶಸ್ವಿ

Virajpet Male Tirike Hill

ವಿರಾಜಪೇಟೆ: ನಗರದ ಮಲೆ ತಿರಿಕೆ ಬೆಟ್ಟದಲ್ಲಿ ಸೋಮವಾರ ಮಧ್ಯಾಹ್ನ 2:30 ವೇಳೆಯಲ್ಲಿ ವ್ಯೂ ಪಾಯಿಂಟ್ ಸಮೀಪ ರಸ್ತೆ ಬದಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯ ನಿವಾಸಿಗಳು ವಿರಾಜಪೇಟೆ (Virajpet) ಪೊಲೀಸ್ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸ್ ಇಲಾಖೆ ಅಗ್ನಿಶಾಮಕ ದಳಕ್ಕೆ ಈ ಕುರಿತ ಮಾಹಿತಿಯನ್ನು ರವಾನಿಸಿದ್ದ, ಕೆಲವೇ ಕ್ಷಣದಲ್ಲಿ ಸ್ಥಳಕ್ಕೆ ಅಗ್ನಿಶಾಮಕದಳ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದರು. ಈ ಬೆಂಕಿಯ ಕೆನ್ನಾಲಿಗೆ […]