ನವೋದಯ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಾರ್ಯಾಗಾರ – ಅನಂತಶಯನ, ಜಿ.ವಿ. ರವಿ ಕುಮಾರ್‌ ಅವರಿಂದ ಮಾರ್ಗದರ್ಶನ

ಮಡಿಕೇರಿ : ವಿದ್ಯಾರ್ಥಿಗಳು ಸೂಕ್ತ ಸಮಯದಲ್ಲಿ ಭವಿಷ್ಯ ರೂಪಿಸಲು ಸರಿಯಾದ ಆಯ್ಕೆ ಮಾಡಿಕೊಳ್ಳಬೇಕೆಂದು ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಕರೆ ನೀಡಿದರು. ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ(Navodaaya vidyalaya) ನಡೆದ ಪಿಎಂ ಶ್ರೀ ಪತ್ರಿಕೋದ್ಯಮದ(journalism) ಕುರಿತ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಯ ತುಂಬಾ ಅಮೂಲ್ಯವಾಗಿದ್ದು, ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಆ ಆಯ್ಕೆ ಬೇರೆಯವರ ಪಾಲಾಗಬಹುದು ಎಂದು ಕಿವಿಮಾತು ಹೇಳಿದರು. ಒಬ್ಬ ಪತ್ರಕರ್ತ(journalist) ಸಮಾಜಕ್ಕೆ ಎಷ್ಟು ಅಗತ್ಯ ಮತ್ತು ಪತ್ರಕರ್ತರ ಜವಾಬ್ದಾರಿಗಳೊಂದಿಗೆ ಸಮಾಜ […]

ಆರೋಗ್ಯ ಇಲಾಖೆ ಚಾಲಕ ಪಿ. ಆನಂದ ನಿಧನ

ಮಡಿಕೇರಿ : ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿದ್ದ ಪಿ. ಆನಂದ(೫೨) ನಿಧನರಾಗಿದ್ದಾರೆ. ಸುಂಟಿಕೊಪ್ಪ(suntikoppa) ಟಿ.ಸಿ.ಎಲ್. ರಸ್ತೆಯ ನಿವಾಸಿ, ವರ್ತಕ ಪಳನಿ ಸ್ವಾಮಿ ಅವರ ಪುತ್ರರಾಗಿರುವ ಆನಂದ ಮಡಿಕೇರಿಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ ಮಡಿಕೇರಿಯ(madikeri) ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂತಿಮ ದರ್ಶನಕ್ಕಾಗಿ ಸುಂಟಿಕೊಪ್ಪದ ಸ್ವಗೃಹದಲ್ಲಿ ಇರಿಸಲಾಗಿದ್ದು, ಇಂದು ಸಂಜೆ ಸುಂಟಿಕೊಪ್ಪ ಹಿಂದೂ(hindu) ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ತಲಕಾವೇರಿಗೆ ಭೇಟಿ ನೀಡಲಿದ್ದಾರೆ ಡಿಸಿಎಂ ಡಿ.ಕೆ. ಶಿವಕುಮಾರ್‌ – ಕಾರಣ ಏನು ಗೊತ್ತಾ..?

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಮಾರ್ಚ್ 21ರಂದು ತಲಕಾವೇರಿಗೆ(thalakaveri) ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿಗೆ ಆಗಮಿಸಿದ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಭಾಗಮಂಡಲಕ್ಕೆ ಆಗಮಿಸಲಿರುವ ಡಿಕೆಶಿ, ಬಳಿಕ ರಸ್ತೆ ಮಾರ್ಗ ಮೂಲಕ ಜೀವನದಿ ಉಗಮ ಸ್ಥಾನಕ್ಕ ತೆರಳಲಿದ್ದಾರೆ. ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ, ಬಳಿಕ ಬೆಂಗಳೂರಿನಲ್ಲಿ ನಡೆಯಲಿರುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಕಾವೇರಿ ತೀರ್ಥ ಸಂಗ್ರಹಿಸಿ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನಲಾಗಿದೆ. ಶಿವಕುಮಾರ್‌ ಅವರಿಗೆ […]

ಸಚಿವರಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಗತಿ ಪರಿಶೀಲನಾ ಸಭೆ – ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಸೆಂಟರ್‌ ಆರಂಭ..?

ಬೆಂಗಳೂರು : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆಯಿತು. ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟಿಲ್ ಕಾಲೇಜಿನ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಕಾಲೇಜಿನಲ್ಲಿ ಖಾಲಿಯಿರುವ ನರ್ಸಿಂಗ್ ಆಫಿಸರ‍್ಸ್ ಮತ್ತು ವೈದ್ಯರ ಹುದ್ದೆಯನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡುವಂತೆ ಸಚಿವರು ಸೂಚಿಸಿದರು. ಕಾರ್ಡಿಯಾಲಜಿ ಕೇಂದ್ರ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಶಾಸಕ ಡಾ. ಮಂಥರ್ ಗೌಡ ಹಾಗೂ ಅಧೀಕ್ಷಕ […]

ಪಡಿಯಾಣಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಟಿವಿ ಕೊಡುಗೆ

ನಾಪೋಕ್ಲು : ಪಡಿಯಾಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳು ಟಿವಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಹಳೆ ವಿದ್ಯಾರ್ಥಿಗಳು ಸೇರಿ ಹಣ ಕ್ರೋಢೀಕರಿಸಿ ಟಿವಿಯನ್ನು ನೀಡಿದ್ದಾರೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಶಿಕ್ಷಕರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಲೆಯ ಪರವಾಗಿ ಮುಖ್ಯ ಶಿಕ್ಷಕ ಕೆ.ಸಿ. ದಮೇಂದ್ರ ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕಿಯರಾದ ಶ್ರೀಮತಿ ಎಂ.ಬಿ. ಭಾರತಿ, ಕೆ.ಎ. ಹೇಮಾಮಾಲಿನಿ, ಕೆ.ಜೆ. ರಾಧಾ ಹಾಜರಿದ್ದರು.

ಮಾ.23 ರಂದು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಉದ್ಘಾಟನೆ – 35 ಕವಿಗಳಿಂದ ಕವನ ವಾಚನ..!

ಮಡಿಕೇರಿ  : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.೨೩ ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ […]

ಸ್ಮಶಾನದಲ್ಲಿ ಗಾಂಜಾ ಬೆಳೆದ ಚಾಲಾಕಿ ಪೊಲೀಸರ ಬಲೆಗೆ..!

ಕುಶಾಲನಗರ : ಸ್ಮಶಾನ ಜಾಗದಲ್ಲಿ ಗಾಂಜಾ ಗಿಡ ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್(29) ಬಂಧಿತ ಆರೋಪಿ. ಕುಶಾಲನಗರ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನ ಜಾಗದಲ್ಲಿ ಈತ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಈತನಿಂದ 1 ಕೆ.ಜಿ. 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಡಿ.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಪಕ […]

ಕೊಡಗು ವಿಶ್ವವಿದ್ಯಾಲಯ ಉಳಿವಿಗಾಗಿ ಮಾನವ ಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಿದ ಮುಖಂಡರು..!

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ನೀಡಲಾಯಿತು. ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ಶ್ರೀಮತಿ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು. ವಿವಿ ಹಿತ ರಕ್ಷಣಾ […]

ವೀರಾಜಪೇಟೆ ನೆಹರು ನಗರ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು – ಆತಂಕದಲ್ಲಿ ಅಕ್ಕಪಕ್ಕದ ನಿವಾಸಿಗಳು..!

ವೀರಾಜಪೇಟೆ : ಕೊಡಗು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಆದ್ರೆ ಈ ನಡುವೆ ಅಲ್ಲಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಬಿಸಿಲಿನ ಬೇಗೆಯ ಮಧ್ಯೆ ಆತಂಕ ಹೆಚ್ಚಿಸುತ್ತಿದೆ. ವಿರಾಜಪೇಟೆಯಲ್ಲಿ ಇಂದು ಮತ್ತೆ ಬೆಂಕಿ ಹೊತ್ತಿಕೊಂಡಿದೆ. ನೆಹರು ನಗರ ಬಳಿಯ ಕಾಡಿನಲ್ಲಿ ಬೆಂಕಿ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿದೆ. ಅಕ್ಕಪಕ್ಕದಲ್ಲಿ ಮನೆಗಳಿದ್ದು, ಬೆಂಕಿ ವ್ಯಾಪಿಸಿದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ಅರಿತ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಅಗ್ನಿಶಾಮಕ ದಳಕ್ಕೆ […]

ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಜಿ. ವಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಆಯ್ಕೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕ್ಷೇಮಾಭಿವೃದ್ಧಿ ಸಮಿತಿಯ ೨೦೨೫-೨೭ರ ಸಾಲಿನ ಅಧ್ಯಕ್ಷರಾಗಿ ಜಿ.ವಿ. ರವಿ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎ. ಮುರಳೀಧರ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಪ್ರಸಾದ್ ಸಂಪಿಗೆ ಕಟ್ಟೆ ಹಾಗೂ ಟಿ .ಜೆ. ಪ್ರವೀಣ್ ಕುಮಾರ್, ಸೋಮವಾರಪೇಟೆ ತಾಲ್ಲೂಕು […]