ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್‌ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.

ನೂತನ ಎಎಸ್‌ಪಿಯಾಗಿ ಬಾರಿಕೆ ದಿನೇಶ್ ಕುಮಾರ್ ನೇಮಕ

Barike Dinesh Kumar

ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ (ASP) ಸುಂದರರಾಜ್ ರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೊಡಗು ಮೂಲದ ಬಾರಿಕೆ ದಿನೇಶ್ ಕುಮಾರ್ (Dinesh Kumar) ನೇಮಕ. 2 ವರ್ಷಗಳ ಹಿಂದೆ ಡಿ ವೈ ಎಸ್ ಪಿ ಆಗಿ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

Cooperative sector awareness

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]

2nd PUC Result: ನಾಳೆ ದ್ವಿತೀಯ ಪಿಯು ಫಲಿತಾಂಶ: ನೋಡುವುದು ಹೇಗೆ?

2nd PUC Result

ದ್ವಿತೀಯ ಪಿಯು (2nd PUC) ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್. ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 8ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ […]

ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀರಾಮ ನವಮಿ ಆಚರಣೆ

ಮಡಿಕೇರಿ : ಕತ್ತಲೆಕಾಡು ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮನವಮಿಯನ್ನು ಸಂಭ್ರಮದಿಂದ‌ ಆಚರಿಸಲಾಯಿತು. ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು. ಮಹಿಳೆಯರು ಆವರಣದಲ್ಲಿ ದೀಪ ಬೆಳಗಿದರು. ಬಳಿಕ ಶ್ರೀರಾಮನಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಸುರೇಶ್ ಮಾವಟ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ‌ ಮಾಡಿದರು. ರಾಮನವಮಿಯನ್ನು ದೇಶದೆಲ್ಲೆಡೆ ಹಿಂದುಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಮರ್ಯಾದ […]

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಹಾಗೂ ಸಂಬಂಧಿಸಿದ ಕಾಯ್ದೆ ಕಾರ್ಯಾಗಾರ

Karnataka Land Grabbing Prohibition Act

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ (Karnataka Land Grabbing Prohibition Act) ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಇವರ […]

ಮನೆ ಯಜಮಾನಿಯರ ಗಮನಕ್ಕೆ: ಗೃಹಲಕ್ಷ್ಮೀ ಯೋಜನೆ ಹೊಸ ಅಪ್ಡೇಟ್

Gruha Lakshmi Scheme

ಸೋಮವಾರಪೇಟೆ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂದಿಸಿದ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು […]

ಮಡಿಕೇರಿ ಗಾಂಧಿ ಭವನದಲ್ಲಿ ಡಾ. ಬಾಬು ಜಗಜೀವನ್‍ರಾಂ ಜಯಂತಿ

Babu Jagjivanram

ಬಾಬು ಜಗಜೀವನ್ ರಾಮ್ ಅವರು ಹಸಿರು ಕ್ರಾಂತಿಯ ಹರಿಕಾರರಾಗಿ, ರಕ್ಷಣಾ ಸಚಿವರಾಗಿ ಉತ್ತಮ ಕೆಲಸ, ಕಾರ್ಮಿಕ ಸಚಿವರಾಗಿ ದುಡಿಯುವ ವರ್ಗದ ಹಿತರಕ್ಷಣೆ, ಸಮಾಜದ ಶೋಷಿತ ಸಮುದಾಯಗಳ ಧ್ವನಿಯಾಗಿದ್ದ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಜೀವನ ಸಾಧನೆಗಳನ್ನು ಪ್ರತಿಯೊಬ್ಬರೂ ಸ್ಮರಿಸುವಂತಾಗಬೇಕು ಎಂದು ಡಾ.ಮಂತರ್‍ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ಶನಿವಾರ ನಡೆದ ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ (Dr. Babu […]

ಕೊಡಗಿನ ಶಾಸಕರ ವಿರುದ್ಧ FIR ದಾಖಲಿಸುವಂತೆ ವಿಜಯೇಂದ್ರ ಒತ್ತಾಯ: ಬೃಹತ್ ಪ್ರತಿಭಟನೆ

vijayendra

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಕುಶಾಲನಗರದಲ್ಲಿ ವಿನಯ್ ಸೋಮಯ್ಯ(Vinay Somaiah) ಅವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಮಾತನಾಡಿ, ಇಬ್ಬರು ಶಾಸಕರ ಕಿರುಕುಳದಿಂದಾಗಿ ವಿನಯ್ ಎಂಬ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಯಾರೆಂದು ಅವರು ತಮ್ಮ ಡೆತ್ ನೋಟ್‌ನಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಆದರೆ, ಬೆಂಗಳೂರಿನಲ್ಲಿ ದಾಖಲಾದ FIR ನಲ್ಲಿ ಶಾಸಕರ ಹೆಸರುಗಳನ್ನು ಸೇರಿಸಿಲ್ಲ. ಇದು ಅಕ್ಷಮ್ಯ ಅಪರಾಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರ ಮೇಲೆ ಒತ್ತಡಕ್ಕೆ ಇದೇ ಸ್ಪಷ್ಟ ಸಾಕ್ಷಿ, ವ್ಯಾಟ್ಸಾಪ್ ಗ್ರೂಪ್ […]

ಮಕ್ಕಳ ಪೋಷಣೆ ಮತ್ತು ರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಆರ್.ಐಶ್ವರ್ಯ

R. Aishwarya

ಮಕ್ಕಳ ಪೋಷಣೆ ಮತ್ತು ರಕ್ಷಣೆ(ಬಾಲ ನ್ಯಾಯ ಕಾಯ್ದೆ) ಸಂಬಂಧಿಸಿದಂತೆ ಮಾಹಿತಿ ಶಿಕ್ಷಣ, ಮಾರ್ಗದರ್ಶನದ ಮೂಲಕ ಹೆಚ್ಚಿನ ಜಾಗೃತಿ ಮೂಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ (R. Aishwarya) ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಾಡಿಗಳಲ್ಲಿ, ಲೈನ್ ಮನೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]