ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಮನೆಗೆ ಭೇಟಿ ನೀಡಿದ ಪ್ರತಾಪ್ ಸಿಂಹ, ಕುಟುಂಬಸ್ಥರಿಗೆ ಸಾಂತ್ವನ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿದೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ತಿರುವು ಪಡೆದುಕೊಂಡು ಕಾಂಗ್ರೆಸ್ ವರ್ಸಸ್ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ವಾಟ್ಸಪ್ ಪೋಸ್ಟ್ ಮಾಡಿ ಬಳಿಕ ಬೆಂಗಳೂರಿನ ನಾಗವಾರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಿಜೆಪಿ ಕಾರ್ಯಕರ್ತವಿನಯ್ ಸೋಮಯ್ಯ ಮನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ […]
ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ದೆಖೋ ಅಪ್ನ ದೇಶ್ ಫೋಟೋ ಕಂಟೆಸ್ಟ್-2025’ ಸ್ವರ್ಧೆ ಏರ್ಪಡಿಸಲಾಗಿದ್ದು, ಕೊಡಗು ಜಿಲ್ಲೆಯ ಪ್ರಮುಖ ಕಲೆ, ಸಂಸ್ಕøತಿ, ಬೆಳೆ, ಧಾರ್ಮಿಕ, ಸಾಂಸ್ಕøತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಪ್ರವಾಸಿ ತಾಣಗಳ ಆತ್ಯಾಕರ್ಷಕ ಛಾಯಾಚಿತ್ರಗಳನ್ನು ಸೆರೆಹಿಡಿದು ಪ್ರವಾಸಿ ತಾಣಗಳ ಕಿರು ವಿವರಣೆಯೊಂದಿಗೆ dekhoapnadeshphotos@gmail.com ಇ-ಮೇಲ್ಗೆ ನೇರವಾಗಿ ಕಳುಹಿಸಿಕೊಡಬಹುದು. ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಎಲ್ಲಾ ವರ್ಗಗಳ ಅಂದರೆ, ಧಾರ್ಮಿಕ, ಸಾಂಸ್ಕಂತಿಕ, […]
ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕೊಡಗಿನ ಶಾಸಕರ ವಿರುದ್ಧ ದೂರು!

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) (Vinay Somaiah) ಆತ್ಮಹತ್ಯೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಪೊನ್ನಣ್ಣ ಅವರತ್ತ ಬಿಜೆಪಿ ನಾಯಕರು ಬೊಟ್ಟು ಮಾಡುತ್ತಿದ್ದಾರೆ ಮತ್ತು ತನಿಖೆಗೆ ಆಗ್ರಹಿಸಿದ್ದಾರೆ. ಆತ್ಮಹತ್ಯೆಗೆ ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಕಾರಣ ಎಂದು ಅವರು ಡೆತ್ ನೋಟ್ನಲ್ಲಿ ಆರೋಪಿಸಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ ಮೃತನ ಸಹೋದರ ಜೀವನ್ […]
ಇಂದಿನಿಂದ ಅಭ್ಯತ್ ಮಂಗಳ ಕ್ರಿಕೆಟ್ ಪ್ರೀಮಿಯರ್ ಲೀಗ್

ಮಡಿಕೇರಿ: ನ್ಯೂ ಫ್ರೆಂಡ್ಸ್ ಅಭ್ಯತ್ ಮಂಗಳ ಇವರ ವತಿಯಿಂದ ನಾಲ್ಕನೇ ವರ್ಷದ ಕ್ರಿಕೆಟ್ ಪ್ರೀಮಿಯರ್ ಲೀಗ್ (Cricket Premier League) ಪಂದ್ಯವು ಏಪ್ರಿಲ್ 4,5,6, ರಂದು ಚೆಟ್ಟಳ್ಳಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಲಿದೆ. ಒಟ್ಟು 9 ಮಾಲೀಕತ್ವದ 9 ತಂಡಗಳು ಪಾಲ್ಗೊಳ್ಳಲಿದ್ದು ಸ್ಟಾರ್ ಬಾಯ್ಸ್ ಅಭ್ಯತ್ ಮಂಗಳ, ಜೆ. ಪಿ. ಫ್ರೆಂಡ್ಸ್, ಎಂ. ಜೆ. ಬ್ರದರ್ಸ್, ಸಗಮ್ ಜ್ಯೋತಿನಗರ, ಟೀಮ್ ಕೊಂಬನ್, ಎಂ, ಎಸ್, ಡಿ, ಅರೆಕಾಡ್, ಪೋಶಿತ್ ಫ್ರೆಂಡ್ಸ್, ಕೆ,ಯು, ಫ್ರೆಂಡ್ಸ್, ವಿಕ್ಟರಿ ಹಂಟರ್ಸ್, ತಂಡಗಳ […]
ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ – ಮೂವರ ಬಂಧನಕ್ಕೆ ಆಗ್ರಹಿಸಿದ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ…

ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ, ಕಾಂಗ್ರೆಸ್ ಮುಖಂಡ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹಿಸಿದ್ದಾರೆ. ಡೆತ್ ನೋಟ್ ಬರೆದಿಟ್ಟು ಬಿಜೆಪಿ ಕಾರ್ಯಕರ್ತವಿನಯ್ ಆತ್ಮಹತ್ಯೆಗೆ ಶರಣಾದ ವಿಚಾರಕ್ಕೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಕೆ.ಜಿ ಬೋಪಯ್ಯ, ಕೊಡಗು ಜಿಲ್ಲಾ ಪೊಲೀಸರು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ವಿನಯ್ ವಿರುದ್ದ ರೌಡಿ ಶೀಟ್ ಓಪನ್ ಮಾಡಲು ತಯಾರಿ ನಡೆದಿತ್ತು. ವಿನಯ್ ಬಂಧನಕ್ಕೂ ಪೊಲೀಸರು […]
ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ’ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ, 31 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮ ವಿವರ, ಸೌಲಭ್ಯ ಪಡೆಯಲು ಇರಬೇಕಾದ […]
ಮುದ್ದಂಡ ಕಪ್ ಹಾಕಿ ಉತ್ಸವ: ಏ.3ರ ಹಾಕಿ ಪಂದ್ಯಾವಳಿಯ ವಿಜೇತ ತಂಡಗಳ ಮಾಹಿತಿ

ಮೈದಾನ 1: ಕುಂದಿರ ಮತ್ತು ಪೊನ್ನಿಮಾಡ ತಂಡಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪೊನ್ನಿಮಾಡ ತಂಡ ಗೆಲುವು ದಾಖಲಿಸಿತು. ಪೊನ್ನಿಮಾಡ ಪರ ಸಂತೋಷ್ ಪೂವಯ್ಯ ಹಾಗೂ ನಾಚಪ್ಪ ತಲಾ 1 ಗೋಲು ದಾಖಲಿಸಿದರು. ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚಟ್ಟಂಗಡ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಪಂದ್ಯದಲ್ಲಿ ಕುಟ್ಟಂಡ ತಂಡ 3-0 ಗೋಲುಗಳ ಅಂತರದಲ್ಲಿ ಜಯಸಾಧಿಸಿತು. ಕುಟ್ಟಂಡ ತಂಡದ ರಜೀನ ಬಿದ್ದಪ್ಪ 2 ಹಾಗೂ ಸಂದೀಪ್ ಬಿದ್ದಪ್ಪ 1 ಗೋಲು ದಾಖಲಿಸಿದರು. […]
ಕೊಡಗಿನಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸ್ತೀರಾ ಹುಷಾರು: ಸವಾರನಿಗೆ ಹಾಕಿರುವ ದಂಡವೆಷ್ಟು ಗೊತ್ತಾ?

ವಾಹನ ಸವಾರರು ಎಚ್ಚಕೆಯಿಂದ ವಾಹನ ಓಡಿಸಬೇಕು. ಏಕೆಂದರೆ ಈಗ ಪೊಲೀಸ್ ತಪಾಸಣೆ ಚುರುಕುಗೊಂಡಿದೆ. ಪೊಲೀಸರ ಜೊತೆ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ವಾಹನಗಳ ನಿಗಾ ಇಡುವ ಸಿಸ್ಟಂ ಬಂದಿದೆ. ಇದಲ್ಲದೇ ಬೇಕಾಬಿಟ್ಟಿ ವಾಹನ ಓಡಿಸುವವರಿಗೆ ಈಗ ದಂಡ ಪ್ರಮಾಣವೂ ಮೂರ್ನಾಲ್ಕು ಪಟ್ಟು ಹೆಚ್ಚಿದೆ. ಒಮ್ಮೆ ಹೀಗೆ ಏನಾದರೂ ಸಿಲುಕಿಕೊಂಡರೆ ಭಾರೀ ಪ್ರಮಾಣದಲ್ಲಿಯೇ ದಂಡ ತೆರಬೇಕಾಗುತ್ತದೆ. ಇಂತಹದ್ದೇ ಘಟನೆಯೊಂದು ಕೊಡಗಿನ ಸೋಮವಾರಪೇಟೆಯಲ್ಲಿ ವರದಿಯಾಗಿದೆ. ಹೆಲ್ಮೆಟ್ ಧರಿಸಿಲ್ಲ, ಅತಿವೇಗವಾಗಿ, ಜೋರಾಗಿ ಶಬ್ದ ಮಾಡುತ್ತಾ, ಅಜಾಗೃತೆಯಿಂದ ಬೈಕ್ ಓಡಿಸುತ್ತಿದ್ದ ಸವಾರನೊಬ್ಬನ ಪ್ರಕರಣ ಗಂಭೀರವಾಗಿ […]
Power Cut: ಕೊಡಗಿನ ಈ ಪ್ರದೇಶಗಳಲ್ಲಿ ಏ.05 ರಂದು ಕರೆಂಟ್ ಇರಲ್ಲ

ಏಪ್ರಿಲ್, 05 ರಂದು ಬೆಳಗ್ಗೆ 09 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ ಸೇರಿದಂತೆ ಕಾಕೋಟುಪರಂಬು, ಕದನೂರು, ಕೆದಮುಳ್ಳೂರು, ಬೇಟೋಳಿ, ಆರ್ಜಿ, ಬಿ.ಶೆಟ್ಟಗೇರಿ, ಬಿಟ್ಟಂಗಾಲ, ಸಿದ್ದಾಪುರ, ಮಾಲ್ದಾರೆ, ಕರಡಿಗೋಡು, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಮೂರ್ನಾಡು, ಮರಗೋಡು, ಹೊದ್ದೂರು, ಹಾಕತ್ತೂರು, ಹೊಸ್ಕೇರಿ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.
ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 02 : Day 02 – ಪ್ರಗತಿ ಕ್ರಿಕೆಟರ್ಸ್ ಮತ್ತು ಎಂಟಿಬಿ ರಾಯಲ್ಸ್ಗೆ ಗೆಲುವು
ಮಡಿಕೇರಿ : ಕೂರ್ಗ್ ಕ್ರಿಕೆಟ್ ಫೌಂಡೇಶನ್(coorg foundation) ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್(cricket) ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 02ರ ಎರಡನೇ ದಿನದ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ಮತ್ತು ಎಂಟಿಬಿ ರಾಯಲ್ಸ್ ತಂಡ ಗೆಲುವು ದಾಖಲಿಸಿದವು. ಪ್ರಗತಿ ಕ್ರಿಕೆಟರ್ಸ್ ಮತ್ತು ಕೂರ್ಗ್ ಯುನೈಟೆಡ್ ತಂಡಗಳ ನಡುವೆ ನಡೆದ ದಿನದ ಮೊದಲ ಪಂದ್ಯದಲ್ಲಿ ಪ್ರಗತಿ ಕ್ರಿಕೆಟರ್ಸ್ ತಂಡ ೨೦ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೧೫೧ ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ […]