Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕಾವೇರಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಪೊನ್ನಣ್ಣ ಮನವಿ

1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜ್ ಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜು ಸಂಸ್ಥೆಗಳನ್ನು ವಿಶೇಷ ಪ್ರಕರಣವೆಂದು […]
ಮಡಿಕೇರಿಯಲ್ಲಿ ಮಾ.08 ರಂದು ಉದ್ಯೋಗ ಮೇಳ

ಮಡಿಕೇರಿ : ಸಂಜೀವಿನಿ ಕೆಎಸ್ಆರ್ಎಲ್ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ (Job Fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ […]
‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮ

ಮಡಿಕೇರಿ: ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ […]
ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಗೇಶ್ ಕಾಲೂರ್ ಆಯ್ಕೆ

ಪುರುಷ ಸಾಹಿತಿಗಳಿಗೆ ಮೀಸಲಿಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು (Nagesh kaloor) ರವರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣ ರವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ […]
ಮಾ.4 ರಿಂದ ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್ಎಸ್ಎಸ್ ಶಿಬಿರ

ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. […]
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಗಾಳಿಬೀಡಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೆಟ್ಟತ್ತೂರು ನಿವಾಸಿ ಜಿ.ಆರ್. ಕಿರಣ್ ಕುಮಾರ್ (35) ಎಂಬಾತ ಬಂಧಿಸಲ್ಪಟ್ಟಿರುವ ಆರೋಪಿಯಾಗಿದ್ದಾನೆ. ಆರೋಪಿ ದಿನಾಂಕ 28-02-2025 ರಂದು ಗಾಳಿಬೀಡು ಗ್ರಾಮದ ಗಣಪತಿ ದೇವಾಲಯದ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಸರಬರಾಜು ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 43 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡು […]
ಡ್ರಿಂಕ್ & ಡ್ರೈವ್ ಮತ್ತಿತರ ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಚಾಲಕನಿಗೆ 60 ಸಾವಿರ !

ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಲೇ ಇರುತ್ತದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ಬರೋಬ್ಬರಿ 60 ಸಾವಿರ ದಂಡ ವಿಧಿಸಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ (Traffic Police) ಠಾಣಾ ಪೊಲೀಸರು ಕೊಪ್ಪ ಗೇಟ್ ಬಳಿ ದಿನಾಂಕ 28/02/2025 ರಂದು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ […]
ಕೊಡಗು ವಿವಿ ಮುಚ್ಚುವ ಕ್ರಮ ಖಂಡಿಸಿ ಬಿಜೆಪಿ, ಎಬಿವಿಪಿಯಿಂದ ಪಾದಯಾತ್ರೆ: ಸಂಸದ ಭಾಗಿ

ಕೊಡಗು ವಿವಿ (Kodagu University) ಮುಚ್ಚಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಳುವಾರ ಗ್ರಾಮದಿಂದ ಕುಶಾಲನಗರದ ವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ (Yaduveer Wadiyar) ಪಾಲ್ಗೊಂಡರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಎಂಎಲ್ಸಿ ಸುಜಾಕುಶಾಲಪ್ಪ, ಭಾರತೀಶ್ ಮತ್ತಿತರರು ಭಾಗಿ. ನೂರಾರು ವಿದ್ಯಾರ್ಥಿಗಳುˌ ಕಾರ್ಯಕರ್ತರು ಹಾಗೂ ಯುವಜನತೆಯೊಂದಿಗೆ ಹೆಜ್ಜೆ ಹಾಕಿದರು. ಎರಡು ವರ್ಷಗಳ ಹಿಂದೆ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ […]
ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಕಂಬಗಳು ಕಂಡುಬಂದರೆ ದೂರು ನೀಡಿ

ಮಡಿಕೇರಿ:-ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು (Power lines) ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 […]