ಕರ್ನಾಟಕ ಬಜೆಟ್ 2025: ಕೊಡಗಿಗೆ ಸಿಕ್ಕಿದ್ದೇನು?

Karnataka Budget 2025

ಸಿಎಂ ಸಿದ್ದರಾಮಯ್ಯನವರು (CM Siddaramaih) ದಾಖಲೆಯ 16ನೇ ಬಜೆಟ್ (Budget) ಅನ್ನು ಮಂಡಿಸಿದ್ದಾರೆ. ಬರೋಬ್ಬರಿ 4.09 ಲಕ್ಷ ಕೋಟಿಯ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಹಲವಾರು ಜಿಲ್ಲೆಗಳಿಗೆ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ. ಹಾಗಾದರೆ ಕೊಡಗು ಜೆಲ್ಲೆಗೆ (Kodagu) ಈ ಬಾರಿ ಬಜೆಟ್ ನಲ್ಲಿ ಸಿಕ್ಕ ಕೊಡುಗೆಗಳು ಏನು ಎಂದು ತಿಳಿಯೋಣ. * ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭಿಸಲಾಗುತ್ತದೆ. * ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು ಹಾಗೂ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ […]

ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ

fashion designing/tailoring training

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ […]

ಮಡಿಕೇರಿ ನಗರ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

General Thimmaiah Public School students

ಮಡಿಕೇರಿ (Madikeri) ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ (General Thimmaiah Public School) ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿದ್ದು ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್‌ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದವ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

Kodagu Bjp

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]

ಪೊಲೀಸ್ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಮಾ.09 ರಂದು ಮ್ಯಾರಥಾನ್

Marathon

ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್ 9 ರಂದು ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ […]

ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್‌ ಶಿಬಿರ ಉದ್ಘಾಟನಾ ಕಾರ್ಯಕ್ರಮ

St Annes College Virajpet NSS Camp

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕಾವೇರಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಪೊನ್ನಣ್ಣ ಮನವಿ

A S Ponnanna

1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜ್ ಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜು ಸಂಸ್ಥೆಗಳನ್ನು ವಿಶೇಷ ಪ್ರಕರಣವೆಂದು […]

ಮಡಿಕೇರಿಯಲ್ಲಿ ಮಾ.08 ರಂದು ಉದ್ಯೋಗ ಮೇಳ

Job opportunity

ಮಡಿಕೇರಿ : ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ (Job Fair) ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ […]

‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮ

FMC college Madikeri

ಮಡಿಕೇರಿ: ಯುವ ಜನರು ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ […]