ಸ್ಕೂಟರ್ ಹಾಗೂ ಖಾಸಗಿ ಬಸ್ ಡಿಕ್ಕಿ: ಸ್ಕೂಟರ್ ಸವಾರ ಸಾವು

Bus scooter

ಸ್ಕೂಟರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ ಪೈಪ್ ಅಳವಡಿಸಲು ಕಾಲರ್ ತರಲೆಂದು ತಮ್ಮ ಸ್ಕೂಟಿಯಲ್ಲಿ ಹೆಬ್ಬಾಲೆ ಕಡೆ ತೆರಳುವಾಗ ಸಿದ್ದಲಿಂಗಪುರದ ನಾಪಂಡ ಮುತ್ತಪ್ಪ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ಘಟನೆ ಜರುಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸರು […]

ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಆಟೋ ಚಾಲಕ!

Auto Driver

ಆಟೋ ಚಾಲಕ ಮಂಜುನಾಥ್ (50) ಅವರು ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ಸಿದ್ದಲಿಂಗಪುರ ನಿವಾಸಿ, ಶನಿವಾರಸಂತೆ ಗುಂಡೂರಾವ್ ಬಡಾವಣೆಯಲ್ಲಿ ವಾಸವಿದ್ದ ಅವರು ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು, ಆದರೆ ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ. ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ಆಟೋ ಚಾಲಕ ವೃತ್ತಿಯಲ್ಲಿ ಇದ್ದರು. ಈ […]

ಕೊಡಗು ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ಕೆ. ಎಂ. ಎ. ತೀವ್ರ ವಿರೋಧ

Kodava Muslim Association

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುವ ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. ಕೊಡಗು ವಿಶ್ವವಿದ್ಯಾಲಯವನ್ನು ಸ್ಥಗಿತಗೊಳಿಸುವ ಅಥವಾ ಬೇರೆ ವಿ.ವಿ.ಯೊಂದಿಗೆ ವಿಲೀನಗೊಳಿಸುವ ಪ್ರಸ್ತಾಪ ಸರಕಾರದ ಮುಂದಿದ್ದರೆ ತಕ್ಷಣ ಅದನ್ನು ಕೈ ಬಿಟ್ಟು ಕೊಡಗು ವಿಶ್ವವಿದ್ಯಾಲಯವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ), ಒಂದು ವೇಳೆ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಿದರೆ ಅದು ಕೊಡಗು (Kodagu) ಜಿಲ್ಲೆಗೆ ಮಾಡಿದ […]

ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ FMC ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಖಂಡನೆ

Kodagu university

ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆಯಲ್ಲಿ ತನ್ನದೇ ಆದ ವಿಶ್ವವಿದ್ಯಾಲಯವನ್ನು ಹಲವು ವರ್ಷಗಳ ನಂತರ ಪಡೆದು ಅದು ಬೆಳವಣಿಗೆಯ ಗತಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿರುವ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ, ವಿಲೀನಗೊಳಿಸುವ ಪ್ರಸ್ತಾವನೆಯನ್ನು ಸರಕಾರವು ಮುಂದಿಟ್ಟಿರುವುದನ್ನು ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕೆ.ಎಂ, ಕಾರ್ಯಪ್ಪ ಹಳೇ ವಿದ್ಯಾರ್ಥಿ ಸಂಘ ಉಗ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಸರ್ಕಾರಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿದ ನಿದರ್ಶನಗಳು […]

ಯುವಜನತೆಗೆ ಗುಡ್ ನ್ಯೂಸ್: ಫೆ.24 ರಂದು ಕೊಡಗಿನಲ್ಲಿ ಉದ್ಯೋಗ ಮೇಳ

Job Fest

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ […]

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ಕಾರ್ಯಕ್ರಮ

Dr BR Ambedkar Cover

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ರಾಷ್ಟ್ರದಲ್ಲಿ ಪ್ರಥಮ ಬಾರಿಗೆ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮಹದೇವ ಅತ್ನಿ ಅವರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು […]