Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ […]
ಸಂಪಾಜೆಯಲ್ಲಿ ಭೀಕರ ಅಪಘಾತ – ಆಟೋ ರಿಕ್ಷಾ ಚಾಲಕ ದುರ್ಮರಣ..! ಕಾರು ಚಾಲಕ ಎಸ್ಕೇಪ್…

ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಪಲ್ಟಿಯಾದ ಆಟೋ ರಿಕ್ಷಾ ಮೇಲೆ ಟಿಪ್ಪರ್ ವಾಹನ ಹರಿದ ಪರಿಣಾಮ ಆಟೋ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಸಂಪಾಜೆಯಲ್ಲಿ ಸಂಭವಿಸಿದೆ. ಇಲ್ಲಿನ ಪೆಟ್ರೋಲ್ ಬಂಕ್ ಬಳಿ ಆಟೋ ರಿಕ್ಷಾಗೆ ಹಿಂದಿನಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿಯಾಗಿದೆ. ಆ ಋಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಇದೇ ಸಂದರ್ಭ ಎದುರಿನಿಂದ ಬಂದ ಟಿಪ್ಪರ್ ವಾಹನ ಆಟೋ ರಿಕ್ಷಾ ಮೇಲೆ ಹರಿದಿದೆ. ರಸ್ತೆಗೆ ಎಸೆಯಲ್ಪಟ್ಟ ಚಾಲಕನ ಮೇಲೂ ಟಿಪ್ಪರ್ ಹರಿದಿದ್ದು, ಚಾಲಕ ಸುಂದರ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. […]
ವೀರಾಜಪೇಟೆ : ಕಾಡಾನೆ ದಾಳಿಗೆ ತೋಟ ಕಾವಲುಗಾರ ಬಲಿ..!

ವೀರಾಜಪೇಟೆ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದೆ. ಓಂಟಿ ಸಲಗ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಗೌರಿಬೆಟ್ಟ ಎಸ್ಟೇಟ್ನಲ್ಲಿ ಸಂಭವಿಸಿದೆ. ತೋಟದಲ್ಲಿ ಕಾವಲುಗಾರನಾಗಿದ್ದ ಲತೀಫ್(65) ಮೃತ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಕಾಫಿ ತೋಟದಲ್ಲಿ ಕಾಣಿಸಿಕೊಂಡಿದ್ದು, ಲತೀಫ್ ಮೇಲೆ ದಾಳಿ ಮಾಡಿದೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಲತೀಫ್ ಅವರನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು. ಕಾಡು ಪ್ರಾಣಿ ಹಾವಳಿ ತಡೆಗಟ್ಟುವಲ್ಲಿ […]
ಶಾದಿ ಮಹಲ್ ವಿವಾದ: ವಿದ್ಯಾಸಂಸ್ಥೆಗೆ ದಾನ ನೀಡಿದ ಜಾಗ ಅನ್ಯ ಕಾರ್ಯಕ್ಕೆ ಬಳಸುವಂತಿಲ್ಲ: ಕೆ.ಜಿ. ಬೋಪಯ್ಯ

ನಾಪೋಕ್ಲು: ಇಲ್ಲಿಯ ವಿದ್ಯಾಸಂಸ್ಥೆಗೆ ದಾನವಾಗಿ ನೀಡಿದಂತಹ ಜಾಗ ಯಥಾ ಸ್ಥಿತಿಯಲ್ಲಿರಬೇಕು .ಯಾವುದೇ ಅನ್ಯ ಕಾರ್ಯಕ್ಕೆ ಬಳಕೆ ಆಗಬಾರದು ಎಂದು ಮಾಜಿ ವಿಧಾನಸಭಾ ಅಧ್ಯಕ್ಷ, ಮಾಜಿ ಶಾಸಕ ಕೆ. ಜಿ. ಬೋಪಯ್ಯ ಒತ್ತಾಯಿಸಿದರು.ಇಲ್ಲಿಗೆ ಸಮೀಪದ ಚೆರಿಯಪಬುವಿಗೆ ಬುಧವಾರ ಭೇಟಿ ನೀಡಿದ ಬಿಜೆಪಿ ಪಕ್ಷದ ಪ್ರಮುಖರು ನೂತನವಾಗಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಕಟ್ಟಡದ ಸ್ಥಳ ಪರಿಶೀಲನೆ ಮಾಡಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸರ್ಕಾರದಿಂದ ಒಟ್ಟು 47.2 ಎಕರೆ ಸ್ಥಳ ಇಲ್ಲಿಯ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ .ಇಲ್ಲಿ ಪ್ರೌಢಶಾಲೆ […]
ಕೊಡಗಿನ ನಟ-ನಟಿಯರು, ಗಾಯಕ, ಕಲಾವಿದರ ಸಮಾಗಮ

ಮಡಿಕೇರಿ : ಕೊಡಗು ಕಲಾವಿದರ ಬಳಗದ ವತಿಯಿಂದ ಚೆಯ್ಯಂಡಾಣೆಯ ಸಿನಿಮಾ ಕಲಾವಿದೆ ಚೆರುವಾಳಂಡ ಸುಜಲಾ ಹಾಗೂ ನಾಣಯ್ಯ ದಂಪತಿ ತೋಟದ ಮನೆಯಲ್ಲಿ ಜಿಲ್ಲೆಯ ಹಲವಷ್ಟು ಹಿರಿ-ಕಿರಿಯ ಸಿನಿಮಾ ಕಲಾವಿದರುಗಳು, ಬರಹಗಾರರು, ನಿರ್ದೇಶಕರು, ಗಾಯಕರು, ಛಾಯಾಚಿತ್ರ ಕಲಾವಿದರುಗಳು ಸಂತಸ ಸಮ್ಮಿಲನದಲ್ಲಿ ಭಾಗಿಗಳಾದರು. ದಶಕಗಳ ಹಿಂದೆ ಆರಂಭಗೊಂಡ ನೋಂದಾಯಿತ ಕಲಾವಿದರ ಸಂಘವೂ ಕಾರ್ಯಚಟುವಟಿಕೆಗಳಿಲ್ಲದೆ ನಿಷ್ಕ್ರಿಯವಾಗಿತ್ತು. ನಟ ನೆರವಂಡ ಉಮೇಶ್ ಹಾಗೂ ತಂಡದವರ ಸಂಚಾಲಕತ್ವದಲ್ಲಿ ವರ್ಷದಿಂದೀಚೆಗೆ ಸಂಘ ಮರುಜೀವ ಪಡೆದುಕೊಂಡಿದೆ. ರಾಜ್ಯದ ಹಲವೆಡೆಗಳಿಂದ ಕಲಾವಿದರುಗಳು ಆಗಮಿಸಿದ್ದು, ಮೈಸೂರಿನಲ್ಲಿ ನೆಲೆಸಿರುವ ಸಂಗೀತಗಾರ, ಹಾರ್ಮೋನಿಯಂ […]
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 127ನೇ ಜನ್ಮ ದಿನಾಚರಣೆ

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ […]
ಕ್ಲೋಸ್ಬರ್ನ್ ಸಹಿಪ್ರಾ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಮಡಿಕೇರಿ : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ […]
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ

ಪೊನ್ನಂಪೇಟೆ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯು ಪೊನ್ನಂಪೇಟೆ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು […]
ಭಕ್ತಿ-ಸಂಭ್ರಮದಿಂದ ಜರುಗಿದ ವಾಯತೂರ್ ಆದಿ ಬೈತೂರಪ್ಪ ಊಟು ಮಹೋತ್ಸವ

ವರದಿ : ರಜಿತ ಕಾರ್ಯಪ್ಪ ವಿರಾಜಪೇಟೆ : ಉಳಿಕ್ಕಲ್ ಶ್ರೀ ವಾಯತೂರ್ ಕಲಿಯಾರ್ ಕೊಡಗಿನ ಶ್ರೀ ಆದಿ ಬೈತೂರಪ್ಪ ದೇವಸ್ಥಾನದ ಊಟು ಮಹೋತ್ಸವ ಜ.೧೩ ರಿಂದ ಪ್ರಾರಂಭವಾಗಿ ಜ.೨೬ ರವರೆಗೆ ೧೪ ದಿನಗಳ ಕಾಲ ಅತ್ಯಂತ ಶ್ರದ್ದಾಭಕ್ತಿಯಿಂದ ನಡೆದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು. ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಆರಾಟ್ ಉತ್ಸವ, ಆನೆಯ ಜೊತೆ ಭಕ್ತಿಯಿಂದ ನಡೆಸಲಾಯಿತು. ವಿಶೇಷ ಚಂಡೆಮೇಳದೊಂದಿಗೆ ಆನೆಯ ಮೇಲೆ ಉತ್ಸವ ಮೂರ್ತಿಯ ಮೆರವಣಿಗೆ, ದೇವರ ನೃತ್ಯ ಬಲಿ, ದೇವರ ಮೂಲ ಸ್ಥಾನದ […]
ಶಾಸಕ ಪೊನ್ನಣ್ಣ ತೇಜೋವಧೆಗೆ ಯತ್ನ: ಸುಳ್ಳು ಸುದ್ದಿ ಹರಡುವವರ ವಿರುದ್ಧ ನಾಪೋಕ್ಲು ವಲಯ ಕಾಂಗ್ರೆಸ್ ಕಿಡಿ

ನಾಪೋಕ್ಲು: ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ನಮ್ಮ ನೆಚ್ಚಿನ ಶಾಸಕರಾದಂತಹ ಅಜ್ಜಿಕುಟ್ಟಿರ. ಎಸ್ ಪೊನ್ನಣ್ಣ ನವರ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿಸುತ್ತಾ, ಜನರ ದಾರಿ ತಪ್ಪಿಸುತ್ತಿರುವುದು ವಿಪರ್ಯಾಸ. ಇದನ್ನು ನಾಪೋಕ್ಲು ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹೇಳಿದರು. ಬೇತು ಗ್ರಾಮದ ದವಸ ಭಂಡಾರದಲ್ಲಿ ಮಂಗಳವಾರ ನಾಪೋಕ್ಲು ವಲಯ ಕಾಂಗ್ರೆಸಿನಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಸರ್ಕಾರದ ಅಧೀನದಲ್ಲಿ ನಡೆಯುವಂತಹ […]