ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್ಶಿಪ್: ಕರ್ನಾಟಕಕ್ಕೆ ದ್ವಿತೀಯ ಸ್ಥಾನ, ಕೊಡಗಿನ ನಂದಿನಿ ಸಾಧನೆ

ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ನಡೆದ 7ನೇ ವರ್ಷದ ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯ ತಂಡವು ಅಮೋಘ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕುಶಾಲನಗರದ ತರಬೇತುದಾರರಾದ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡವು, ರಾಷ್ಟ್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ […]
ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ಅವಿರೋಧ ಪುನಾರಾಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘದ ಮುಂದಿನ ಸಾಲಿನ ಅಧ್ಯಕ್ಷರಾಗಿ ಬಿ.ಡಿ. ಜಗದೀಶ್ ರೈ ಅವಿರೋಧ ಆಯ್ಕೆಯಾಗಿದ್ದಾರೆ. ನಗರದ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಜಗದೀಶ್ ರೈ ಅವರನ್ನು ಸಭೆಯಲ್ಲಿದ್ದ ಸರ್ವ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. ಬಳಿಕ ಮಾತನಾಡಿದ ಅಧ್ಯಕ್ಷ ಜಗದೀಶ್ ರೈ, ಶೀಘ್ರದಲ್ಲಿ ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸುವುದಾಗಿ ತಿಳಿಸಿದರು. ಬಂಟರ ಭವನ ನಿರ್ಮಾಣಕ್ಕಾಗಿ ಬೇಕಾದ ಎಲ್ಲಾ ತೊಡಕುಗಳನ್ನು ನಿವಾರಿಸಿ, ಕಟ್ಟಡ ನಿರ್ಮಾಣಕ್ಕೆ ತಯಾರಿ […]
ಜಮ್ಮಾಬಾಣೆ ಮಸೂದೆ ಬಗ್ಗೆ ಅಪಪ್ರಚಾರ ಬೇಡ : ಬಿಜೆಪಿ ಮಾಜಿ ಶಾಸಕರ ಅಪಸ್ವರಕ್ಕೆ ಪೊನ್ನಣ್ಣ ಬೇಸರ ಅಸಮಾಧಾನ

ಕೊಡಗಿನ ಜಮ್ಮಾಬಾಣೆ ಸಮಸ್ಯೆ ನಿವಾರಣೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕಾರ ಮಾಡಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ಮಸೂದೆ-2025ರ ಕುರಿತಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದರು. ಜನರ ಸಮಸ್ಯೆ ಬಗೆಹರಿಸಲು ತಾವು ಕೈಗೊಂಡ ಹಲವಾರು ನಡೆಗಳ ಬಗ್ಗೆ ವಿವರಿಸುತ್ತಾ, ಇದರಿಂದ ಕೊಡಗಿನ ಜನತೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು. ಜಮ್ಮ ಬಾಣೆ ಸಮಸ್ಯೆ ನಿವಾರಿಸುವಲ್ಲಿ ತಾವು ಕೈಗೊಂಡ ಶ್ರಮದ […]
ವ್ಯಸನಕ್ಕೆ ದಾಸರಾಗುವುದು ಬಲು ಸುಲಭ, ವ್ಯಸನ ಮುಕ್ತರಾಗುವುದು ಬಲು ಕಷ್ಟ: ಡಾ. ಚೇಂದಿರ ಬೋಪಣ್ಣ

ಇಂದಿನ ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ವಿಚಾರ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ. ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲೆಯಾಳಿ ಸಮಾಜ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ಶನಿವಾರ ನಡೆಸಲಾಗ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]
ಕೊಡಗು ರೆಡ್ಕ್ರಾಸ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ

ಮಡಿಕೇರಿ : ತಾಲೂಕಿನ ಸಾಧಕ ಅಂಗನವಾಡಿ ಕಾರ್ಯಕರ್ತೆಯರಿಗೆ ರೆಡ್ಕ್ರಾಸ್ ಕೊಡಗು ಘಟಕ ವತಿಯಿಂದ ಸನ್ಮಾನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ನಗರದ ರೆಡ್ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ ಉದ್ಘಾಟಿಸಿದರು. ಶಿಕ್ಷಕರಿಯರೆಂದರೆ ಮಕ್ಕಳ ಪಾಲಿನ ದೇವರಂತೆ. ಮಕ್ಕಳನ್ನು ಪ್ರೀತಿಯಿಂದ ಬೆಳೆಸುವಂತೆ ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಶ್ಲಾಘನೀಯವಾದದ್ದು. ಪುಟ್ಟ ಮಕ್ಕಳ ಏಳಿಕೆಯಲ್ಲಿ ಮಹತ್ತರ ಪಾತ್ರವನ್ನು ಅವರು ನಿರ್ವಹಿಸುತ್ತಾರೆ ಎಂದರು. ಪ್ರಭಾರ […]
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ […]
ಕೊಡವ ಮುಸ್ಲಿಮರ ಮಾತೃಭಾಷೆಯ ನಿಘಂಟು ಹೊರತರಲು ನಿರ್ಧಾರ

ಪೊನ್ನಂಪೇಟೆ: ಕೊಡಗಿನ ಮೂಲ ನಿವಾಸಿ ಸಮುದಾಯಗಳಲ್ಲಿ ಒಂದಾಗಿರುವ ಕೊಡವ ಮುಸ್ಲಿಮರ ಮಾತೃಭಾಷೆಯ ಎಲ್ಲಾ ಪದಗಳನ್ನು ಸಂಗ್ರಹಿಸಿ ನಿಘಂಟನ್ನು (ಶಬ್ದ ಭಂಡಾರ) ಹೊರತರಲು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ನಿರ್ಧರಿಸಿದೆ. ಕೆಎಂಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೊಡವ ಮುಸ್ಲಿಮರ ಮಾತೃಭಾಷೆಯಾದ ‘ಪಯಕ’ದ ಬೆಳವಣಿಗೆ ಮತ್ತು ದಾಖಲೀಕರಣದ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದ್ದು, ಇದಕ್ಕಾಗಿ ಸಮುದಾಯದ […]
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಶಾಸಕರ ಭೇಟಿ – ಕ್ರೀಡಾಕೂಟದ ಬಗ್ಗೆ ಚರ್ಚೆ

ಮಡಿಕೇರಿ : ಕೊಡಗು ಗೌಡ ಯುವ ವೇದಿಕೆಯ ನೂತನ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡರನ್ನು ಭೇಟಿಯಾಗಿ ಏಪ್ರಿಲ್ ತಿಂಗಳಲ್ಲಿ ನಡೆಯುವ ಕ್ರೀಟಕೂಟದ ಕುರಿತು ಚರ್ಚಿಸಿದರು. ಅಧ್ಯಕ್ಷ ಬಾಳಾಡಿ ಮನೋಜ್ ನೇತೃತ್ವದಲ್ಲಿ ಶಾಸಕ ಮಂತರ್ ಗೌಡರನ್ನ ಕುಶಾಲನಗರದ ವಿಶ್ರಾಂತಿ ಗೃಹದಲ್ಲಿ ಭೇಟಿಯಾಗಿ ಕೊಡಗು ಗೌಡ ಯುವ ವೇದಿಕೆ ವತಿಯಿಂದ ನಡೆಯುವ ಒಲಂಪಿಕ್ ಮಾದರಿಯ ಕ್ರೀಡಾ ಕೂಟದ ಕುರಿತು ಚರ್ಚಿಸಲಾಯಿತು. ಈ ಬಾರಿ ಕೊಡಗು ಗೌಡ ಯುವ ವೇದಿಕೆಯ ನೇತೃತ್ವದಲ್ಲಿ ಏಪ್ರೀಲ್ 27 ರಿಂದ […]
ಬೆಟ್ಟಗೇರಿಯಲ್ಲಿ ಎ.ಎಸ್.ಪೊನ್ನಣ್ಣ ರಸ್ತೆ ಕಾಮಗಾರಿಗೆ ಚಾಲನೆ

ಮಡಿಕೇರಿ:- ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ […]
ನಿವೃತ್ತ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪರವರು ಮಾತನಾಡುತ್ತಾ ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು […]