ಕಾವೇರಿ ತೀರ್ಥೋದ್ಭವ – ಸ್ವಾಗತ ಕೋರಿ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ – ಕ್ರಮಕ್ಕೆ ಆಗ್ರಹ

ಭಾಗಮಂಡಲ : ನಾಡಿನ ಜೀವನದಿ ಕಾವೇರಿಯ ತವರು ತಲಕಾವೇರಿಯಲ್ಲಿ ತುಲಾ ಸಂಕ್ರಮಣ ಜಾತ್ರೋತ್ಸವ ಅ.17ರಂದು ನಡೆಯಲಿದೆ. ಈ ಸಂಬಂಧ ಭಕ್ತಾದಿಗಳಿಗೆ ಸ್ವಾಗತ ಕೋರಿ ಕಾರುಗುಂದದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗೌಡ ಸಮಾಜಗಳ ಒಕ್ಕೂಟ ವತಿಯಿಂದ ವಿವಿಧೆಯಲ್ಲಿ ಸ್ವಾಗತದ ಬ್ಯಾನರ್ ಅಳವಡಿಸಲಾಗಿತ್ತು. ಕಾರುಗುಂದ ವ್ಯಾಪ್ತಿಯಲ್ಲಿ ರಸ್ತೆ ಬದಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಹರಿದು ಹಾಕಲಾಗಿದೆ. ಈ ಕೃತ್ಯವನ್ನು ವಿವಿಧ ಗೌಡ ಸಮಾಜಗಳು ಖಂಡಿಸಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ […]
RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]
ರೂ.73.10 ಲಕ್ಷ ಲಾಭದಲ್ಲಿ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

ಪೊನ್ನಂಪೇಟೆ: ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ […]
ಅಕ್ಟೋಬರ್ 15ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 12 ಬೆಕ್ಕೆಸೊಡ್ಲೂರು ಫೀಡರ್ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಬೆಕ್ಕೆಸೊಡ್ಲೂರು, ಬಲ್ಯಮಂಡೂರು, ಕಾನೂರು, ಕೋತೂರು, ಬೊಮ್ಮಾಡು, ನಿಡುಗುಂಬ, ವಡ್ಡರಮಾಡು, ಕಪ್ಪರಮನೆ, ಬ್ರಹ್ಮಗಿರಿ, ಕೊಟ್ಟಗೇರಿ, ಬೇಗೂರು, ಮುಗುಟಗೇರಿ, ಚಿಕ್ಕಮಂಡೂರು, ಕೋಟೂರು, ತೂಚಮಕೇರಿ, ಚಿಕ್ಕಮಂಡೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ […]
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕಾರ್ಯಕರ್ತೆ ಮಡಿಕೇರಿ 18, ಸೋಮವಾರಪೇಟೆ 15, ಪೊನ್ನಂಪೇಟೆ 21 […]
ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಪುನರಾಯ್ಕೆ

ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿ ಆಯ್ಕೆ ಸಂಬಂಧ ಇಂದು ಚುನಾವಣೆ ನಿಗಧಿಯಾಗಿತ್ತು. ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಖಜಾಂಚಿಯಾಗಿ ವಿ.ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ವಿ.ಕೆ. ಪ್ರತಾಪ್, ಸಹಾಯಕರಾಗಿ ಬಿ.ಇ. ಕಿರಣ್, […]
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ […]
ಉತ್ತಮ ಜೀವನ ರೂಪುಗೊಳ್ಳಲು ಎನ್ಎಸ್ಎಸ್ ಸಹಕಾರಿ – ಗಣ್ಯರ ಅಭಿಪ್ರಾಯ

ವೀರಾಜಪೇಟೆ : ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ರೂಪಿಸುವುದರೊಂದಿಗೆ ಅವರಲ್ಲಿರುವ ವಿಶೇಷ ಗುಣ, ಹವ್ಯಾಸಗಳನ್ನು ತೋರ್ಪಡಿಸಲು ಎನ್ ಎಸ್ ಎಸ್ ಶಿಬಿರಗಳು ಅತ್ಯುತ್ತಮ ವೇದಿಕೆಯೆಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ಗುರುವಾರ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಹೆಚ್ಚಿನ ವಿಚಾರಗಳನ್ನು ಕಲಿಯಲು ಹಾಗೂ ಕಲಿತ ವಿಚಾರಗಳನ್ನು ಜೀವನದಲ್ಲಿ […]
ಕೊಡಗು ವಿವಿ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರಗೆ ʼಆನರ್ ಆಫ್ ಅಶೋಕʼ ಪ್ರಶಸ್ತಿ

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ “ಆನರ್ ಆಫ್ ಅಶೋಕ ಪ್ರಶಸ್ತಿ 2025” ನೀಡಿ ಗೌರವಿಸಲಾಗಿದೆ. ನ್ಯಾಯಾಂಗ, ಪೊಲೀಸ್, ಸಾರ್ವಜನಿಕ-ಶೈಕ್ಷಣಿಕ ಆಡಳಿತ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಶ್ಲಾಘನೀಯ ಶ್ರೇಷ್ಠತೆಯನ್ನು ಪ್ರದರ್ಶಿಸಿದ ನೈಪುಣ್ಯ ಅಧಿಕಾರಿಗಳು, ಸೈನಿಕರು, ಆಡಳಿತಗಾರರು ಮತ್ತು ಶಿಕ್ಷಣ ತಜ್ಞರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಅಶೋಕ ಸಂಗಪ್ಪ ಆಲೂರ ಈ ಬಾರಿ ಭಾಜನರಾಗಿದ್ದಾರೆ. ಮಾಜಿ […]
ನಗು ನಿಲ್ಲಿಸಿದ ರಾಜು ತಾಳಿಕೋಟೆ – ಹೃದಯಾಘಾತದಿಂದ ಜನಪ್ರಿಯ ಹಾಸ್ಯನಟನ ಬಾಳ ಅಂತ್ಯ..!

ಉಡುಪಿ : ಕನ್ನಡ ರಂಗಭೂಮಿ ಹಾಗೂ ಚಿತ್ರರಂಗದ ಪ್ರಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ(58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೈನ್ ಶೆಟ್ಟಿ ನಟನೆಯ ಚಿತ್ರವೊಂದರ ಚಿತ್ರೀಕರಣಕ್ಕಾಗಿ ಉಡುಪಿಗೆ ಆಗಮಿಸಿದ್ದರು. ನಿನ್ನೆ ಚಿತ್ರೀಕರಣ ಮುಗಿಸಿ ವಿಶ್ರಾಂತಿಯಲ್ಲಿದ್ದಾಗ ಹೃದಯಾಘಾತವಾಗಿದೆ. ತಕ್ಷಣ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ಹಿಂದೊಮ್ಮೆ ಹೃದಯಾಘಾತಕ್ಕೊಳಗಾಗಿದ್ದ ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ಅವರ ಹುಟ್ಟೂರಿಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರಾಜು ತಾಳಿಕೋಟೆ ಅವರ ಬಗ್ಗೆ ಒಂದಷ್ಟು ಮಾಹಿತಿ. […]