ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ…

ಕೊಡಗು (Kodagu) ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.14 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.06 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 807.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 476.25 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.22 ಮಿ.ಮೀ. ಕಳೆದ ವರ್ಷ ಇದೇ ದಿನ 8.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1210.02 ಮಿ.ಮೀ, ಕಳೆದ ವರ್ಷ ಇದೇ […]
ಅಹಮದಾಬಾದ್ ವಿಮಾನ ದುರಂತ – ವಿಮಾನ ಬೆಂಕಿಗಾಹುತಿಯಾದರೂ ಗ್ರೇಟ್ ಎಸ್ಕೇಪ್ ಆದ ಏಕಮಾತ್ರ ವ್ಯಕ್ತಿ..!

ಅಹಮದಾಬಾದ್ : ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ೨೪೧ ಮಂದಿ ಮೃತಪಟ್ಟಿದ್ದಾರೆ. ಆದರೆ ಪವಾಡಸದೃಶ ರೀತಿಯಲ್ಲಿ ವ್ಯಕ್ತಿಯೊಬ್ಬರು ಪಾರಾಗಿದ್ದಾರೆ. ರಮೇಶ್ ವಿಶ್ವಕುಮಾರ್ ಮಹಾದುರಂತದಲ್ಲಿ ಬದುಕುಳಿದ ವ್ಯಕ್ತಿ. ಭಾರತ ಮೂಲದ ರಮೇಶ್ ತನ್ನ ಕುಟುಂಬದೊಂದಿಗೆ ಲಂಡನ್ನಲ್ಲಿ ವಾಸವಾಗಿದ್ದರು. ಕೆಲವು ದಿನದ ಹಿಂದೆ ಭಾರತಕ್ಕೆ ಬಂದಿದ್ದ ಅವರು, ಇಂದು ತನ್ನ ಸಹೋದರನೊಂದಿಗೆ ಲಂಡನ್ಗೆ ಮರಳುತ್ತಿದ್ದರು. ವಿಮಾನದ ಸೀಟ್ ೧೧(ಎ)ನಲ್ಲಿ ರಮೇಶ್ ವಿಶ್ವಕುಮಾರ್ ಕುಳಿತಿದ್ದರು. ಪಕ್ಕದಲ್ಲಿ ಅವರ ಸಹೋದರ ಇದ್ದರು. ಏರ್ ಇಂಡಿಯಾದ ಬೋಯಿಂಗ್ ವಿಮಾನ ಟೇಕ್ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮೂರ್ನಾಡು 66 ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪಕೇಂದ್ರದ 11ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಲಾಗುವುದು. ಆದ್ದರಿಂದ ಜೂನ್ 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ […]
ಅಹಮದಾಬಾದ್ ವಿಮಾನ ದುರಂತ – ಮಂಗಳೂರು ಮೂಲದ ಸಹಾಯಕ ಪೈಲಟ್ ದುರ್ಮರಣ..!

ಗುಜರಾತ್ : ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 200ಕ್ಕೂ ಅಧಿಕ ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಅಹಮದಾಬಾದ್ನಿಂದ ಲಂಡನ್ಗೆ ತೆರಳಲು ಹೊರಟಿದ್ದ ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ನೆಲಕ್ಕೆ ಅಪ್ಪಳಿಸಿದೆ. ಈ ದುರಂತದಲ್ಲಿ ಕರ್ನಾಟಕ ಮೂಲದ ಸಹಾಯಕ ಪೈಲಟ್ ಕೂಡಾ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಮಂಗಳೂರು ಮೂಲದ ಕ್ಲೈವ್ ಕುಂದರ್ ದುರಂತ ಅಂತ್ಯ ಕಂಡವರಾಗಿದ್ದಾರೆ. ಈ ಘಟನೆಯಲ್ಲಿ ವಿದೇಶಿ ನಾಗರೀಕರು ಸೇರಿದಂತೆ ಬಹುತೇಕ ಎಲ್ಲರೂ ದುರಂತ ಅಂತ್ಯ ಕಂಡಿದ್ದಾರೆಂದು ಗುಜರಾತ್ನ ಮಾಧ್ಯಮಗಳು […]
Big Breaking : ಅಹಮದಾಬಾದ್ನಲ್ಲಿ ವಿಮಾನ ಪತನ – ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ಫ್ಲೈಟ್..!

ಬೆಂಗಳೂರು : ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಅಪಘಾತ ಸಂಭವಿಸಿದೆ. ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 240ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ವಿಮಾನ ಇದಾಗಿದ್ದು, ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಅಪಘಾತಕ್ಕೀಡಾಗಿದೆ. ಏರ್ಪೋರ್ಟ್ನ ಕೆಲವೇ ಅಂತರದಲ್ಲಿ ದುರಂತ ಸಂಭವಿಸಿದ್ದು, ವಿಮಾನದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗುಜರಾತ್ನ ಮಾಜಿ […]
ಪರೀಕ್ಷೆ ನಡೆದ 20 ದಿನದಲ್ಲಿ ಫಲಿತಾಂಶ – ಕೊಡಗು ವಿಶ್ವವಿದ್ಯಾಲಯ ಹೊಸ ದಾಖಲೆ – ಕುಲಪತಿ ಹೇಳಿದ್ದೇನು..?

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ನ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಆನ್ಸೆನ್ ತಂತ್ರಾಂಶದಲ್ಲಿ ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ವಿಶ್ವವಿದ್ಯಾಲಯಗಳು ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳನ್ನು ನಡೆಸಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ 2024-25 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿಯ ಫಲಿತಾಂಶವನ್ನು ಕೇವಲ ಎರಡು ವಾರಗಳಲ್ಲಿ ಪ್ರಕಟಿಸುವ […]
ಬಜರಂಗದಳ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ರಾಜೀನಾಮೆ – ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದ ಯುವ ನಾಯಕ..!

Coorg Buzz ಸಿದ್ದಾಪುರ : ಬಜರಂಗದಳದ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್ ಸಿದ್ದಾಪುರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ನನ್ನ ವೈಯುಕ್ತಿಕ ಕಾರಣಗಳಿಂದಾಗಿ ಕಳೆದ ಕೆಲವು ಸಮಯಗಳಿಂದ ಬಜರಂಗದಳದ ಕೊಡಗು ಜಿಲ್ಲಾ ಸಂಯೋಜಕ ಜವಾಬ್ದಾರಿಯನ್ನು ನನಗೆ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಡಗು ಜಿಲ್ಲಾ ಬಜರಂಗದಳದ ಜವಾಬ್ದಾರಿಯಿಂದ ಸ್ವಯಂ ಮುಕ್ತಿಗೊಳ್ಳುತ್ತಿದ್ದೇನೆ. ಮುಂದೆ ಸಾಮಾಜಿಕ ಕೆಲಸ ಮಾಡುತ್ತೇನೆ ಹೊರತು ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷ ಹಾಗೂ ಸಂಘಟನೆಯ ನಾಯಕರ […]
ಕೊಡಗಿನಲ್ಲಿ ಜೂನ್ 12ರಂದು ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ – ಮಳೆಗೂ ಮುನ್ನವೇ ಶಾಲೆ, ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾದ ಲಕ್ಷಣ ಗೋಚರಿಸುತ್ತಿದ್ದು, ನಾಳೆಯಿಂದ(ಜೂ.೧೨) ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಾ ಅಲರ್ಟ್ ಆಗಿದೆ. ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ. ವೆಂಕಟ್ ರಾಜಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೇ ಕೊನೇ ವಾರದಲ್ಲಿ […]
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ – ಬದಲಾವಣೆಗೆ ಆಸಕ್ತಿ ತೋರದ ವರಿಷ್ಠರು..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಪುನಾರಾಯ್ಕೆಯಾಗಿದ್ದಾರೆ. ಎರಡನೆ ಹಂತದಲ್ಲಿ ಹತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಕೊಡಗು ಜಿಲ್ಲಾಧ್ಯಕ್ಷ ಸ್ಥಾನವನ್ನು ರವಿ ಕಾಳಪ್ಪ ಎರಡನೇ ಅವಧಿಗೆ ಮುಂದುವರೆಸಲಿದ್ದಾರೆ. ಈ ಬಗ್ಗೆ ಬಿಜೆಪಿಯ ಪ್ರಸ್ತುತ ಸಂಘಟನಾ ಪರ್ವದ ಚುನಾವಣಾಧಿಕಾರಿಯಾದ ಕ್ಯಾ. ಗಣೇಶ್ ಕಾರ್ಣಿಕ್ ಅವರು ಪ್ರಕಟಣೆ ಹೊರಡಿಸಿದ್ದಾರೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ …

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.33 ಮಿ.ಮೀ. ಕಳೆದ ವರ್ಷ ಇದೇ ದಿನ 29.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1171.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]