ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ […]

ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ

ಕುಶಾಲನಗರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance ಅಡಿ Incubation ಯೋಜನೆ ಕುರಿತು ಬುಧವಾರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಒ ಎಂಎಸ್‌ಎಂಇ ನಿವೃತ್ತ ಉಪ […]

ಜೋಪಡಿಯಲ್ಲಿದ್ದ ವೃದ್ಧೆ ಬಾಳಿಗೆ ಬೆಳಕಾದ ವಿದ್ಯಾರ್ಥಿನಿ ಶ್ರೀಶಾ

ಹರದೂರು ಗ್ರಾಮ ಪಂಚಾಯಿತಿಯ ಮುತ್ತಿನ ತೋಟದ ಬಳಿ ಜೋಪಡಿಯಲ್ಲಿದ್ದ ಗಿರಿಜಾ (76) ಅವರಿಗೆ ಸುಸಜ್ಜಿತ ಸೂರು ಒದಗಿಸಿ ಎಳೆಯ ಪ್ರಾಯದಲ್ಲೇ ಮಾನವೀಯತೆ ತೋರಿದ್ದಾರೆ ವಿದ್ಯಾರ್ಥಿನಿ ಶ್ರೀಶಾ.  ಗುಡಿಸಲಿನಲ್ಲಿ ಸಂಕಷ್ಟದ ಜೀವನ ಸಾಗಿಸುತ್ತಿದ್ದ ವೃದ್ಧ ದಂಪತಿಯ ಸ್ಥಿತಿಯ ಬಗ್ಗೆ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀಶ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರು ಹಾಗೂ ಅಧಿಕಾರಿಗಳ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು.  ಇದಕ್ಕೆ ಸ್ಪಂದಿಸಿದ ಸ್ಥಳೀಯ ಪಂಚಾಯಿತಿ ಸದಸ್ಯ ಸಲೀಂ ಮನೆ ನಿರ್ಮಿಸಿ ಕೊಡುವ ಭರವಸೆ […]

KMSA: ನಾಲ್ವರು ನಿರ್ದೇಶಕರ ನೇಮಕ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಆಡಳಿತ ಮಂಡಳಿಗೆ ನೂತನವಾಗಿ ನಾಲ್ವರು ನಿರ್ದೇಶಕರನ್ನು ನೇಮಿಸಲಾಗಿದೆ. ಕಂಡಂಗಾಲದ ಮಂದಮಾಡ ರಫೀಕ್ (ಮುನ್ನ), ಬೇಗೂರಿನ ಆಲೀರ ಬಿ. ಮೂಸ, ಎಡಪಾಲದ ಕುಪ್ಪೋಡಂಡ ಮಹಮ್ಮದ್ ಮತ್ತು ಚೆರಿಯಪರಂಬುವಿನ ಪರವಂಡ ಸಿರಾಜ್ ಎಂಬುವವರೇ ನೂತನವಾಗಿ ನೇಮಕಗೊಂಡ ನಿರ್ದೇಶಕರಾಗಿದ್ದಾರೆ. ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಈ ನೇಮಕ ಪ್ರಕ್ರಿಯೆ ನಡೆಯಿತು. ಈ ಕುರಿತು ಹೇಳಿಕೆ ನೀಡಿರುವ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್, ಕೊಡವ […]

ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯದ ಜಾಗೃತಿಯನ್ನು ಮೂಡಿಸಿ: ಚಂದ್ರಶೇಖರ್

ವಿರಾಜಪೇಟೆ: ಸಮಾಜದಲ್ಲಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿ ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಚಂದ್ರಶೇಖರ್ ಎನ್. ಸಿ. ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೆಚ್ ಐ ವಿ /ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದರು. ವಿದ್ಯಾರ್ಥಿಗಳು […]

ಸಂವಿಧಾನ ಎಲ್ಲಾ ಕಾನೂನುಗಳ ತಾಯಿ: ನ್ಯಾ. ಎಸ್. ನಟರಾಜ್

ಸಂವಿಧಾನ ಜೀವನದ ಅಂಗವಾಗಿದ್ದು ನಮ್ಮೆಲ್ಲ ಕರ್ತವ್ಯ ,  ಕೆಲಸಗಳು ಸರಾಗವಾಗಿ ನಡೆಯಲು ಮೂಲಕ ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ. ಎಸ್. ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು . ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ ,  ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು […]

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ – ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗಿ

ಮಡಿಕೇರಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಮಂಗಳೂರಿನಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್‌ ರೈ ಪುನರಾಯ್ಕೆಯಾದರು. ಈ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಬಂಟರ ಸಂಘದ ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್‌ ರೈ ನೇತೃತ್ವದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಜಗದೀಶ್‌ ರೈ, ಜಾಗತಿಕ ಬಂಟರ ಒಕ್ಕೂಟದಲ್ಲಿ ಕೊಡಗು ಜಿಲ್ಲೆಗೂ ಸ್ಥಾನ ಸಿಕ್ಕಿದೆ. ಇದರಿದಾಗಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಸಮುದಾಯ […]

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Kodagu power cut

ನವೆಂಬರ್, 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ವೇಗವಾಗಿ ಬಂದು ರಸ್ತೆ ಮಧ್ಯೆ ಎರಡು ಪಲ್ಟಿಯಾದ ಪಿಕಪ್..!‌ Video ನೋಡಿ

ಸೋಮವಾರಪೇಟೆ :  ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿಯ ನಗರೂರು ಬಳಿ ತಿರುವಿನಲ್ಲಿ ಪಿಕಪ್‌ ವಾಹನವೊಂದು ಚಾಲಕನ ನಿಯಂತ್ರಣ ಸಿಗದೆ ರಸ್ತೆಯಲ್ಲಿ ಪಲ್ಟಿಯಾಗಿದೆ. ಅದರ ಹಿಂಬದಿ ಇದ್ದವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಈ ಘಟನೆ ಇಂದು(ನ.25ರಂದು) ಮಧ್ಯಾಹ್ನ ಸಂಭವಿಸಿದ್ದು, ಆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಕಳುಹಿಸಿಕೊಟ್ಟವರು – ಅವಿಲಾಶ್‌ ಕಾಜೂರು.