ಕೊಡಗಿನ ಪುತ್ತರಿ ಹಬ್ಬ ಡಿಸೆಂಬರ್‌ 04ಕ್ಕೆ – ಇಲ್ಲಿದೆ ನೋಡಿ ಸಮಯ ಪಟ್ಟಿ..!

ನಾಪೋಕ್ಲು : ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿ.04ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನಡೆಯಿತು. ಸಾರ್ವತ್ರಿಕವಾಗಿ ಡಿಸೆಂಬರ್ 04 ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬಾಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ. ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ […]

ಕೊಡಗಿನಲ್ಲಿ ಒಂದು ವರ್ಷದಲ್ಲಿ ಬೀದಿ ಶ್ವಾನ ದಾಳಿಗೆ ಒಳಗಾದವರ ಸಂಖ್ಯೆ ಎಷ್ಟು ಗೊತ್ತಾ..!?

ಮಡಿಕೇರಿ : ದಿನದಿಂದ ದಿನಕ್ಕೆ ಬೀದಿ ಶ್ವಾನಗಳ ಹಾವಳಿ ಹೆಚ್ಚಾಗುತ್ತಿದ್ದು, ಶ್ವಾನ ಕಡಿತಕ್ಕೆ ಒಳಗಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ಶ್ವಾನ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿ ಶ್ವಾನಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) […]

ವೀರಾಜಪೇಟೆಯಲ್ಲಿ ಗೋಮಾಂಸ ಮಾರಾಟ – ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!

ವೀರಾಜಪೇಟೆ : ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ವಿಜಯ ನಗರ ನಿವಾಸಿಗಳಾದ ಮೊಹಮ್ಮದ್ ಎಂಬವರ ಪುತ್ರ ಎಂ.ಎಂ. ಮುಸ್ತಾಫ(42), ಮೊಹಮ್ಮದ್ ಹುಸೈನ್ ಎಂಬವರ ಪುತ್ರ ಎಂ.ಎಸ್. ತನ್ವಿರ್(41) ಗೋಮಾಂಸ ಮಾರಾಟಕ್ಕೆ ಮುಂದಾಗಿ ಪೊಲೀಸರ ವಶಕ್ಕೆ ಸಿಕ್ಕವರು. ಇಬ್ಬರು ಸೇರಿಕೊಂಡು ವೀರಾಜಪೇಟೆಯ ವಿವಿಧೆಡೆ ಗೋಮಾಂಸ ಮಾರಾಟಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಮದುವೆ ಕಾರ್ಯಕ್ರಮದಲ್ಲಿ ಜೂಜಾಟ – ಪೊಲೀಸರ ದಾಳಿ – ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..!?

ವೀರಾಜಪೇಟೆ : ವಿವಾಹ ಸಮಾರಂಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಜೂಜಿಗೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯವಿತ್ತು. ಮಂಟಪದಲ್ಲಿನ ಕೊಠಡಿಯೊಂದರಲ್ಲಿ ಮದುವೆಗೆ ಬಂದಿದ್ದ ಕೆಲವರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಒಟ್ಟು 4,25,545/ ರೂ. ವಶಕ್ಕೆ ಪಡೆದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]

ವಾಲಿಬಾಲ್‌ನಲ್ಲಿ ಕೊಡಗಿನ ಹಾಡಿ ಹೈದನ ಸಾಧನೆ – ಸರ್ಕಾರದಿಂದ ಸನ್ಮಾನ…

ಪೊನ್ನಂಪೇಟೆ : ಕ್ರೀಡಾ ಕ್ಷೇತ್ರದ ಸಾಧನೆಗಾಗಿ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಬಿರ್ಸಾ ಮುಂಡರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗಿರಿಜನ ಹಾಡಿಯಲ್ಲಿ ಹುಟ್ಟಿ ಬೆಳೆದು, ಪ್ರಸ್ತುತ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

FMKMC ಕಾಲೇಜಿಗೆ ಹೊಸ ಚೈತನ್ಯ ತುಂಬಲು ಹಳೆ ವಿದ್ಯಾರ್ಥಿಗಳು ಕೈಜೋಡಿಸಿ – ಪ್ರೊ. ಪಿ.ಎಲ್‌. ಧರ್ಮ ಕರೆ

ಮಡಿಕೇರಿ : ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಕಾಲೇಜು ಹಲವು ಸಾಧಕರಿಗೆ ಶಿಕ್ಷಣ ಕೊಟ್ಟ ಸಂಸ್ಥೆ. ಈ ಕಾಲೇಜಿನ ಈಗಿನ ಪರಿಸ್ಥಿತಿ ನೋಡಿದಾಗ ಬಹಳ ಬೇಸರವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪಿ.ಎಲ್.‌ ಧರ್ಮ ಹೇಳಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ನಾನು ಕೂಡಾ ಈ ಕಾಲೇಜಿನ ಹಳೆ ವಿದ್ಯಾರ್ಥಿ. ದಶಕದ ಹಿಂದೆ ಇದ್ದ ಚಿತ್ರಣ ಈಗ ಇಲ್ಲ. ಹಲವು ರೀತಿಯಲ್ಲಿ ಬದಲಾಗಿದೆ. ಕಾಲೇಜಿನ […]

ಸಂಸ್ಕೃತಿಯನ್ನು ಮರೆಯುವುದು ದೇಶವನ್ನು ವಿನಾಶದ ಕಡೆ ಕೊಂಡೊಯ್ದಂತೆ – ಹಿರಿಯ ಸಿವಿಲ್‌ ನ್ಯಾಯಾಧೀಶೆ ಶುಭಾ

ವೀರಾಜಪೇಟೆ : ಮನುಷ್ಯ ತನ್ನ ಸಂಸ್ಕೃತಿಯನ್ನು ಎಂದಿಗೂ ಬಿಡಬಾರದು. ಸಂಸ್ಕೃತಿಯನ್ನು ಮರೆಯುವುದು ದೇಶದ ವಿನಾಶಕ್ಕೆ ನಾಂದಿ ಹಾಡಿದಂತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮಡಿಕೇರಿ ಡಿ.ಎಲ್.ಎಸ್.ಎ ಸದಸ್ಯ ಕಾರ್ಯದರ್ಶಿ ಶುಭಾ ಅಭಿಪ್ರಾಯಪಟ್ಟರು. ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ, ವಿರಾಜಪೇಟೆ ಹಾಗೂ ಕಾವೇರಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಾದಕ ವಸ್ತುಗಳ ಬಳಕೆ ಹಾಗೂ ಮೊಬೈಲ್ […]

ಬಾಳುಗೋಡು ಸಹಿಪ್ರಾ ಶಾಲೆ ವಿದ್ಯಾರ್ಥಿಗಳಿಗೆ CISCO & ʼಜಾಗೃತಿʼ ಸಂಸ್ಥೆಯಿಂದ ಉಡುಗೊರೆ..!

ಕುಶಾಲನಗರ : ಬಾಳುಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ CISCO ಹಾಗೂ ʼಜಾಗೃತಿʼ ಸರ್ಕಾರೇತರ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆ ಪ್ರತಿನಿಧಿಗಳಾದ ನೋಯಲ್ ಹಾಗೂ ಕಣ್ಣನ್ ನೇತೃತ್ವದಲ್ಲಿ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಎಕ್ಸಾಂ ಪ್ಯಾಡ್(exam pad) ಮತ್ತು ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಕಿಟ್‌(sanitary kit) ವಿತರಿಸಲಾಯಿತು. ಜಾಗೃತಿ ಹಾಗೂ CISCO ಸಂಸ್ಥೆಯ ಸಿಬ್ಬಂದಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸ್ಥಳೀಯ ಉದ್ಯಮಿ ದಿನೇಶ್ ಹಾಗೂ ಹಳೆ ವಿದ್ಯಾರ್ಥಿ ಬಳಗದ ರವಿಕುಮಾರ್ ಬಿ.ಎನ್. […]

ಶಾಸಕ ಎ.ಎಸ್.‌ ಪೊನ್ನಣ್ಣ ವಿರುದ್ಧ ಅವಹೇಳನಕಾರಿ ಕಾಮೆಂಟ್‌ – ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು..!

ಗೋಣಿಕೊಪ್ಪ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.‌ ಪೊನ್ನಣ್ಣ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಕಾಮೆಂಟ್‌ ಹಾಕಿದ ಪ್ರಕರಣ ಸಂಬಂಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಾಗುತ್ತಿದೆ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಟ್ಟದಾಗಿ ಕಾಮೆಂಟ್‌ ಹಾಕಿರುವ 05 ಮಂದಿಯ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ದ್ಯಾನ್ ದೇವಯ್ಯ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ […]

ಕಾರಿನಲ್ಲಿತ್ತು ಮಹಿಳೆ ಶ*ವ – ಮಧ್ಯರಾತ್ರಿ ಚೆಕ್‌ಪೋಸ್ಟ್‌ನಲ್ಲಿ ಸಿಕ್ಕಿಬಿದ್ದ ಮೂವರು..!

ಸಿದ್ದಾಪುರ : ಕಾರಿನಲ್ಲಿ ಮಹಿಳೆಯ ಶ*ವ ಸಾಗಿಸುತ್ತಿದ್ದ ಪ್ರಕರಣ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ಬೆಳಕಿಗೆ ಬಂದಿದೆ. ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ ಮೂಲಕ ನಿನ್ನೆ ನಡುರಾತ್ರಿ ಕಾರೊಂದರಲ್ಲಿ ಮಹಿಳೆಯೊಬ್ಬರ ಮೃ*ತದೇಹವನ್ನು ಸಾಗಿಸಲು ಪ್ರಯತ್ನ ನಡೆದಿತ್ತು. ಈ ವೇಳೆ ಅಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ತಪಾಸಣೆ ನಡೆಸುವ ವೇಳೆ ಶ*ವ ಇರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಶಕ್ಕೆ ಪಡೆದವರ ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನಿಂದ […]