ಕೊಡಗಿನಲ್ಲಿ ಮೂರು ದಿನ ಪವರ್ ಕಟ್: ಯಾವ ಪ್ರದೇಶಗಳಲ್ಲಿ,‌ ಸಮಯ ವಿವರ

ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕ್ಲೋಸ್‌ಬರ್ನ್ : ವರ್ಗಾವಣೆಯಾದ ಶಿಕ್ಷಕಿ ಸುಜಾತ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮಡಿಕೇರಿ : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು. ಗೌರವ ಸ್ವೀಕರಿಸಿ […]

ಕಾಂತೂರು ಮೂರ್ನಾಡು – ಜಲ ಜೀವನ್‌ ಮಿಷನ್‌ ಯೋಜನೆ ಯಶಸ್ವಿ ಅನುಷ್ಠಾನ

ಮಡಿಕೇರಿ : ಕಾಂತೂರು ಮತ್ತು ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಯಶಸ್ವಿಯಾಗಿದ್ದು, ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. ಸಂಸದ ಯದುವೀರ್ ಒಡೆಯರ್ ಮತ್ತು ಶಾಸಕ ಡಾ. ಮಂತರ್ ಗೌಡ […]

ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಲಿ – ಸರ್ಕಾರಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹ

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕೊಡಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಎಸ್.ಎಂ ಕೃಷ್ಣ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಮೂವರು ಸಚಿವ ಸಂಪುಟ ಸೇರ್ಪಡೆಯಾಗಿದ್ದರು. ನಂತರ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಪ್ಪಚ್ಚು ರಂಜನ್ ಅವರಿಗೆ ಅಲ್ಪಾವಧಿಗೆ ಸಚಿವ ಸ್ಥಾನ ನೀಡಿದ್ದರು. ನಂತರದಲ್ಲಿ ಬಂದ ಸರ್ಕಾರಗಳು ಕೊಡಗಿನ ಬಗ್ಗೆ ಅಸಡ್ಡೆ ತೋರಿದೆ. ಜಿಲ್ಲೆಯ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸದೇ ಇರುವುದು […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

electricity

ವಿರಾಜಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಪಂಜರಪೇಟೆ ಹಾಗೂ ಹೆಗ್ಗಳ ಫೀಡರ್‍ಗಳಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ನೆಹರು ನಗರ, ಗೋಣಿಕೊಪ್ಪ ರಸ್ತೆ, ಶಾಂತಿ ನಗರ, ವಿದ್ಯಾನಗರ, ನಿಸರ್ಗ ಬಡಾವಣೆ, ಮೀನುಪೇಟೆ, ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್ಜಿ, ಬೇಟೋಳಿ, ಕಲ್ಲುಬಾಣೆ, ಹೆಗ್ಗಳ, ರಾಮನಗರ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೋಮವಾರಪೇಟೆ 66/11 […]

ಸಿ&ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ – ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ

ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಇಂದು ತಮ್ಮನ್ನು ಭೇಟಿಯಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನೊಳಗೊಂಡ ನಿಯೋಗದ ಜೊತೆ ಚರ್ಚಿಸಿದ ಬಳಿಕ ಅವರು ಪ್ರತಿಕ್ರಿಯಿಸಿದರು. ಸಿ ಅಂಡ್ ಡಿ ಜಾಗದ ವಿಚಾರವಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ […]

ಉದ್ದೇಶಿತ ಬಂಟರ ಭವನ ನಿರ್ಮಾಣ ಜಾಗದಲ್ಲಿ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಶ್ರಮದಾನ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘಕ್ಕೆ ಸೇರಿದ ಜಾಗದಲ್ಲಿ ಯುವ ಬಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಶ್ರಮದಾನ ಮಾಡಲಾಯಿತು. ಹೆಸರಾಂತ ಉದ್ಯಮಿ ಡಾ ಪ್ರೇಮನಾಥ್‌ ಪೂಂಜಾ ಅವರು ಮಡಿಕೇರಿ ಹೊರವಲಯದ ಅಬ್ಬಿಫಾಲ್ಸ್‌ ಮಾರ್ಗದಲ್ಲಿರುವ ತಮ್ಮ ಜಮೀನಿನಲ್ಲಿ ಅರ್ಧ ಎಕ್ರೆ ಜಾಗವನ್ನು ಬಂಟರ ಭವನ ನಿರ್ಮಾಣಕ್ಕಾಗಿ ನೀಡಿದ್ದರು. ಹಲವು ವರ್ಷಗಳಿಂದ ಅದು ಪಾಳು ಬಿದ್ದಿತ್ತು. ಇದೀಗ ಜಿಲ್ಲಾ ಬಂಟರ ಸಂಘದ ವತಿಯಿಂದ ಬಂಟರ ಭವನ ಟ್ರಸ್ಟ್‌ ಸಹಯೋಗದಲ್ಲಿ ಅಲ್ಲಿ ಭವನ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಹೀಗಾಗಿ ಆ ಜಾಗದಲ್ಲಿ […]

ಮಿಷನ್ ವಾತ್ಸಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ವೆಂಕಟ್ ರಾಜಾ ಸೂಚನೆ

ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಗಳವಾರ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ […]

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹುಲ್ಲಪ್ಪ ಯಮನಪ್ಪ ಮೇಟಿ@H.Y. ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದಾಗಿ ಕೆಲವು ದಿನದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ. ಎರಡು ದಿನದ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

Crime News : ಪತ್ನಿಯನ್ನು ಹೊಡೆದು ಕೊಂದ ಕ್ರೂರಿ ಪತಿ..!

ಸುಂಟಿಕೊಪ್ಪ : ಪತ್ನಿಯನ್ನು ಪತಿ ಹೊಡೆದು ಹತ್ಯೆಗೈದಿರುವ ಘಟನೆ ಕೊಡಗರಹಳ್ಳಿ ಬಳಿಯ ಅಂದಗೋವೆಯಲ್ಲಿ ನಡೆದಿದೆ. ಲತಾ(45) ಪತಿಯಿಂದ ಹತ್ಯೆಯಾದ ಮಹಿಳೆ. ಅಂದಗೋವೆಯ ಎಸ್ಟೇಟ್‌ ಒಂದರ ಲೈನ್‌ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುತ್ತ(50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಗಂಡ ಹಂಡತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ಲತಾ ಮೇಲೆ ಮುತ್ತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ವಿಚಾರ ತಿಳಿದು ಹೆಚ್ಚುವರಿ […]