ಕೊಡವ ಮುಸ್ಲಿಂ ಸ್ಪೋರ್ಟ್ಸ್‌ ಅಕಾಡೆಮಿ ನಿಯೋಗದಿಂದ ಸಿ.ಎಸ್.‌ ಅರುಣ್‌ ಮಾಚಯ್ಯ ಭೇಟಿ

ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ […]

ಕೊಡವರು ಎಂದರೆ ಹಾಕಿ, ಹಾಕಿ ಅಂದ್ರೆ ಕೊಡವರು – ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು : ಏ.5ರಿಂದ ಮೇ.2ರವರೆಗೆ ನಾಪೋಕ್ಲುವಿನ ಜ.ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ‘ಚೇನಂಡ ಕಪ್ ಹಾಕಿ’ ಉತ್ಸವದ ಲಾಂಛನವನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದರು. ಚೇನಂಡ ಹಾಕಿ ಪಂದ್ಯಾವಳಿಗೆ […]

ಸಂಪುಟ ಪುನಾರಚನೆ ವಿಚಾರ – ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಬೋಸರಾಜ್..!

ಮಡಿಕೇರಿ : ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿದ್ದು, ಅಗತ್ಯ ಬಿದ್ದಲ್ಲಿ ಸಚಿವ ಸ್ಥಾನ ಬಿಡಲು ಎಲ್ಲರೂ ಸಿದ್ದರಿದ್ದೇವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಬುದ್ಧರಿದ್ದಾರೆ. ಕರ್ನಾಟಕಕ್ಕೆ ಹಾಗೂ ಕಾಂಗ್ರೆಸ್‌ಗೆ ಇಬ್ಬರ ಅಗತ್ಯತೆ ಇದೆ. ಸಂಪುಟ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ನಡೆದುಕೊಳ್ಳುತ್ತೇವೆಂದರು. 140 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿ ಎಲ್ಲಾ ಮುಖ್ಯ ತೀರ್ಮಾನಗಳನ್ನು ಹೈಕಮಾಂಡ್‌ ತೆಗೆದುಕೊಳ್ಳುತ್ತದೆ. ಹಿಂದಿನಿಂದಲೂ ಬಂದ ಸಂಪ್ರದಾಯ. […]

ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್‌ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕ ಅಜ್ಜಮಾಡ ರಮೇಶ್‌ ಕುಟ್ಟಪ್ಪ ಅವರಿಗೆ Coorg Buzz ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕೂರ್ಗ್‌ ಬಝ್‌ ಸ್ಟುಡಿಯೋದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಫಲ ತಾಂಬೂಲ ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ರಮೇಶ್‌ ಕುಟ್ಟಪ್ಪ ಕಳೆದ ಅವಧಿಯಲ್ಲೂ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಅವಧಿಗೆ ಸ್ಪರ್ಧೆ ಬಯಸಿ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿಗಳು ಇಲ್ಲದ […]

ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಪಾತ್ರ ಮಹತ್ವದ್ದು – ಬೆನೆಡಿಕ್ಟ್ ಆರ್ ಸಲ್ದಾನ

ಮಡಿಕೇರಿ : ವಿವಿಧ ಪ್ರಾಂತ್ಯವಾಗಿ ಹರಿದು ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿ ಏಕತೆಯ ಮೂಲಕ ಬಲಿಷ್ಠ ಭಾರತ ದೇಶವನ್ನು ಕಟ್ಟುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಬಹಳ ಮಹತ್ವದ ಪಾತ್ರವನ್ನು ವಹಿಸಿದ್ದರು ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಏಕತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಉಕ್ಕಿನ ಮನುಷ್ಯ ಪಟೇಲರು ದೇಶವನ್ನು ಒಗ್ಗೂಡಿಸಲು ಪಟ್ಟ ಶ್ರಮದ ಪ್ರತಿಫಲವಾಗಿ ನಾವಿಂದು ಒಗ್ಗೂಡಿದ ಭಾರತವನ್ನು ಕಾಣುತ್ತಿದ್ದೇವೆ. ಅವರು ಪಟ್ಟ ಶ್ರಮಕ್ಕೆ ದೇಶವಿಂದು […]

ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್.‌ ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.‌ ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ […]

ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ – ಮಡಿಕೇರಿಯಲ್ಲಿ ಬಿಜೆಪಿಯಿಂದ ʼಏಕತಾ ನಡಿಗೆʼ

ಮಡಿಕೇರಿ : ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗಿದ್ದು, ಮಡಿಕೇರಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ಯಾತ್ರೆ’ ನಡೆಯಿತು. ದೇಶವನ್ನು ವಿಭಜಿಸುತ್ತಿರುವ ಶಕ್ತಿಗಳು ವಿಜೃಂಭಿಸುತ್ತಿರುವ ಈ ಸಮಯದಲ್ಲಿ ದೇಶದ ಏಕತೆ, ಸಮಗ್ರತೆ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಪಕ್ಷದ ಪ್ರಮುಖರು ಹೇಳಿದರು. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ವೃತ್ತದಿಂದ ಆರಂಭವಾದ ಕಾಲ್ನಡಿಗೆ ಜಾಥಾಗೆ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹಾಗೂ […]

ಬುರುಡೆ ಗ್ಯಾಂಗ್‌ ವಿರುದ್ಧ SIT ಕೇಸ್‌ ದಾಖಲಿಸಿ, ಬಂಧಿಸಲಿ – ಅಪ್ಪಚ್ಚು ರಂಜನ್‌ ಆಗ್ರಹ..!

ಮಡಿಕೇರಿ : ಧರ್ಮಸ್ಥಳ ಪ್ರಕರಣ ವಿಚಾರವಾಗಿ ಬುರುಡೆ ಗ್ಯಾಂಗ್‌ಗೆ ತಪ್ಪಿನ ಅರಿವಾಗಿದೆ. ಹಾಗಾಗಿ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದೆ ಎಂದು ಮಾಜಿ ಶಾಸಕ ಮಂಡೇಪಂಡ ಅಪ್ಪಚ್ಚು ರಂಜನ್‌ ಹೇಳಿದರು. ಮಡಿಕೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬುರುಡೆ ಗ್ಯಾಂಗ್‌ ಧರ್ಮಸ್ಥಳದ ಖ್ಯಾತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಡಿಸಲು ಬುರುಡೆ ಗ್ಯಾಂಗ್ ಹುನ್ನಾರ‌ ಮಾಡಿತ್ತು. ಅದೇ ತಮ್ಮ ಪಾಲಿಗೆ ಉರುಳಾಗ್ತಿದ್ದಂತೆ ಯೂಟರ್ನ್ ಹೊಡೆದಿದೆ. ಸುಳ್ಳು ಪ್ರಕರಣ ದಾಖಲಿಸಿದ್ರೆ ೧೦ ವರ್ಷ ಕಠಿಣ ಶಿಕ್ಷೆ ಇದೆ ಎಂಬುದು ಅರಿವಾಗಿ ಮೂಲ […]

ಎಚ್.ವೈ. ಮೇಟಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು : ಮಾಜಿ ಸಚಿವ ಎಚ್.ವೈ. ಮೇಟಿ ಅನಾರೋಗ್ಯದಿಂದಾಗಿ  ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ  ಮೇಟಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.

ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ, ವಿಜಯಲಕ್ಷ್ಮೀ ಸಿಂಗ್ ಸೇರಿ 70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ ಮತ್ತು ಸಿನೆಮಾ ರಂಗದಲ್ಲಿ ವಿಜಯಲಕ್ಷ್ಮಿಸಿಂಗ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ನವೆಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು […]