ಎಚ್.ವೈ. ಮೇಟಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಬೆಂಗಳೂರು : ಮಾಜಿ ಸಚಿವ ಎಚ್.ವೈ. ಮೇಟಿ ಅನಾರೋಗ್ಯದಿಂದಾಗಿ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಮೇಟಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.
ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ, ವಿಜಯಲಕ್ಷ್ಮೀ ಸಿಂಗ್ ಸೇರಿ 70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು : 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಕೊಡಗಿನ ಡಾ. ನೆಲ್ಲಮಕ್ಕಡ ಬಬಿನಾ ಮತ್ತು ಸಿನೆಮಾ ರಂಗದಲ್ಲಿ ವಿಜಯಲಕ್ಷ್ಮಿಸಿಂಗ್ ಸೇರಿದಂತೆ ಒಟ್ಟು 70 ಮಂದಿ ಸಾಧಕರಿಗೆ ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ನವೆಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು […]
ಮಹಿಳಾ ವಿಶ್ವಕಪ್ ಕ್ರಿಕೆಟ್ : ಆಸ್ಟ್ರೇಲಿಯಾವನ್ನು ಮಣಿಸಿ ವಿಶ್ವಕಪ್ ಫೈನಲ್ಗೆ ಲಗ್ಗೆಯಿಟ್ಟ ಭಾರತದ ವನಿತೆಯರು..!

ಮುಂಬೈ : ಜೆಮಿಮಾ ರೋಡ್ರಿಗಸ್ ಅವರ ಸಮಯೋಚಿತ ಶತಕದ ನೆರವಿನಿಂದ ಬಲಿಷ್ಠ ಆಸ್ಟ್ರೇಲಿಯಾವನ್ನು ಸೆಮಿಫೈನಲ್ನಲ್ಲಿ ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಮುಂಬೈನ ಡಿ.ವೈ. ಪಾಟೀಲ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾವನ್ನು ಭಾರತದ ವನಿತೆಯರು 05 ವಿಕೆಟ್ನಿಂದ ಮಣಿಸಿದರು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯ 338 ರನ್ಗೆ ಆಲೌಟ್ ಆಗಿತ್ತು. 339 ರನ್ಗಳ ಬೃಹತ್ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. […]
ಅ.31, ನ.01ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜು ಅಕ್ಟೋಬರ್ 31 ಮತ್ತು ನವೆಂಬರ್ 01ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 31 ರಂದು ಮಧ್ಯಾಹ್ನ 03 ಗಂಟೆಗೆ ನಾಗರಹೊಳೆಯಲ್ಲಿ ಕೊಡಗು ಜಿಲ್ಲಾಡಳಿತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ‘ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಕಟ್ಟಡ ನವೀಕರಣ ಕಾಮಗಾರಿ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 05 ಗಂಟೆಗೆ ವಿರಾಜಪೇಟೆ […]
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅನು ಕಾರ್ಯಪ್ಪ ಅವಿರೋಧ ಆಯ್ಕೆ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ದ ಅಧ್ಯಕ್ಷರಾಗಿ ಬಾಚರಣಿಯಂಡ ಅನು ಕಾರ್ಯಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಯಾಗಿ ಬೇರೆ ಯಾರೂ ಸ್ಪರ್ಧಿಸದ ಕಾರಣ ಅನು ಕಾರ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅನು ಕಾರ್ಯಪ್ಪ ಹಲವು ವರ್ಷದಿಂದ ಪತ್ರಿಕೋದ್ಯಮದಲ್ಲಿದ್ದು, ಪ್ರಸ್ತುತ ರಿಪಬ್ಲಿಕ್ ಕನ್ನಡ ವಾಹಿನಿಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್.ಜೆ. ರಾಕೇಶ್, ಉಪಾಧ್ಯಕ್ಷರಾಗಿ ನವೀನ್ ಸುವರ್ಣ, ವನಿತಾ ಚಂದ್ರಮೋಹನ್, ಎ.ಎನ್.ವಾಸು, ಕಾರ್ಯದರ್ಶಿಗಳಾಗಿ ಪಬ್ಲಿಕ್ ಟಿವಿ ಮಲ್ಲಿಕಾರ್ಜುನ್, ರಿಜ್ವಾನ್ ಹುಸೇನ್, ಚೆರಿಯಮನೆ ಸುರೇಶ್ […]
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನಲ್ಲೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಣೆ ಮಾಡಿದ ಅನುಭವ ಇರುವ ರಮೇಶ್ ಕುಟ್ಟಪ್ಪ, ಪ್ರಸ್ತುತ ಪ್ರತಿನಿಧಿ ದಿನಪತ್ರಿಕೆ ಸ್ಥಾನಿಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಮೇಶ್ ಕುಟ್ಟಪ್ಪ ಅವರಿಗೆ ಕೂರ್ಗ್ ಬಝ್ ಬಳಗದ ವತಿಯಿಂದ ಅಭಿನಂದನೆಗಳು.
ಮಡಿಕೇರಿ : ಚೈನ್ಗೇಟ್ ಬಳಿ ನೂತನ ಪ್ರಯಾಣಿಕರ ತಂಗುದಾಣ, ಬಾಟಲ್ ಡ್ರಾಪ್ ಲೋಕಾರ್ಪಣೆ

ಮಡಿಕೇರಿ : ಲಯನ್ಸ್ ಕ್ಲಬ್ ಹಾಗೂ ಮಡಿಕೇರಿ ಶಾಸಕ ಮಂತರ್ ಗೌಡ ಅವರ ವಿಶೇಷ ಅನುದಾನದಲ್ಲಿ ವಾರ್ಡ್ ನಂ.6ರ ಚೈನ್ ಗೇಟ್ ಬಳಿ ನಿರ್ಮಾಣಗೊಂಡಿರುವ ಪ್ರಯಾಣಿಕರ ತಂಗುದಾಣದ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು. ಶಾಸಕ ಮಂತರ್ ಗೌಡ ತಂಗುದಾಣವನ್ನು ಉದ್ಘಾಟಿಸಿದರು. 3 ಲಕ್ಷ ರೂ. ವೆಚ್ಚದಲ್ಲಿ ತಂಗುದಾಣ ನಿರ್ಮಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಪಕ್ಕದಲ್ಲೇ ಅಳವಡಿಸಲಾಗಿರುವ ಬಾಟಲ್ ಡ್ರಾಪ್ ಒಳಗೆ ಬಾಟಲಿಗಳನ್ನು ಹಾಕುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ಲಯನ್ಸ್ ಸಂಸ್ಥೆಯ ಗವರ್ನರ್ ಅರವಿಂದ್, […]
ನಾಳೆ(ಅ.30) ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : ವಿರಾಜಪೇಟೆ ೬೬/೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-೩ ಪಂಜರ್ಪೇಟೆ ಫೀಡರ್ನಲ್ಲಿ ಅಕ್ಟೋಬರ್ ೩೦ ರಂದು ಬೆಳಗ್ಗೆ ೯ ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ವಿದ್ಯಾನಗರ, ಕೆಎಸ್ಆರ್ಟಿಸಿ, ಶಾಂತಿನಗರ, ಗೋಣಿಕೊಪ್ಪ ರಸ್ತೆ, ನೆಹರುನಗರ, ಪಂಜರ್ಪೇಟೆ, ಸಿಲ್ವನಗರ, ವಿಜಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ […]
ಬೆಂಬಲ ಬೆಲೆಯಡಿ ಭತ್ತ ಖರೀದಿ ಜಿಲ್ಲೆಯಲ್ಲಿ ಆರಂಭ – ರೈತರ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಮನವಿ

ಮಡಿಕೇರಿ : ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೨೦೨೫-೨೬ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬುಧವಾರ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ ೨೦೨೫-೨೬ ನೇ ಸಾಲಿಗೆ […]
ಕೊಡಗು ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಇಳಿಕೆ – ಡಿಎಚ್ಒ ಡಾ. ಸತೀಶ್ ಕುಮಾರ್

ಮಡಿಕೇರಿ : ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ, ಫೀ.ಮಾ.ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ವಿಶ್ವ ಉಪಶಮನ ಆರೈಕೆ ದಿನಾಚರಣೆ ನಡೆಯಿತು. ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಡಿಎಚ್ಒ ಡಾ. ಸತೀಶ್ ಕುಮಾರ್ ಉದ್ಘಾಟಿಸಿದರು. ರಾಜ್ಯದ […]