ಕಾವೇರಿ ಕಾಲೇಜಿನಲ್ಲಿ ನಡೆದ ದಿ. ಎಂ ಜಿ ಪದ್ಮನಾಭ ಕಾಮತ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ವಿರಾಜಪೇಟೆ: ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯ, ಭಾಷೆ , ನಾಡು, ಸಂಸ್ಕೃತಿ , ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ಪ್ರಸ್ತುತ ಕಾಲದಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಕೆ.ಜಿ . ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾವೇರಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ. ಎಂ ಜಿ ಪದ್ಮನಾಭ ಕಾಮತ್ […]
ಕಂಬೆಯಂಡ ಗೋಪಾಲ್ ಅವರಿಗೆ ಡಿ.ಸಿ.ಎಫ್ ಆಗಿ ಮುಂಬಡ್ತಿ

ರಾಜ್ಯ ಅರಣ್ಯ ಸೇವೆಗೆ ಸೇರಿದ 7 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮುಂಬಡ್ತಿ ನೀಡಿ ಕರ್ನಾಟಕ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರನ್ವಯ, ಕೊಡಗು ಜಿಲ್ಲೆಯ ತಿತಿಮತಿ ವಿಭಾಗದಲ್ಲಿ ಎಸಿಎಫ್ (ACF) ಆಗಿ ಕಾರ್ಯನಿರ್ವಹಿಸುತ್ತಿದ್ದ ಕಂಬೆಯಂಡ ಪಿ. ಗೋಪಾಲ್ ರವರನ್ನು ಕೊಡಗು ಜಿಲ್ಲೆಯ ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಹುದ್ದೆಗೆ ಪದೋನ್ನತಿ ನೀಡಿ ನೇಮಿಸಲಾಗಿದೆ. ಮೂಲತಃ ಮಡಿಕೇರಿ ತಾಲೂಕಿನ ಕಕ್ಕಬೆ ಗ್ರಾಮದವರಾದ ಗೋಪಾಲ್ ಕೆ.ಪಿ ರವರು ಪ್ರಸ್ತುತ ವಿರಾಜಪೇಟೆಯ ನಿವಾಸಿಯಾಗಿದ್ದು, ಈ […]
ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀರಾಮನವಮಿ – ರಾಮ , ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು

ಮಡಿಕೇರಿ : ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ, ದುರ್ಗಾಪೂಜೆ ಹಾಗೂ ಟ್ರಸ್ಟ್ನ ವಾರ್ಷಿಕ ಮಹಾಸಭೆ ಸಂಭ್ರಮದಿಂದ ಜರುಗಿತು. ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಪೂಜಾ ಕಾರ್ಯಗಳು ನೆರವೇರಿದವು. ಟ್ರಸ್ಟ್ಗೆ ನೂತನ ಜಾಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸಭಾಭವನಕ್ಕೆ ದೇವರ ಚಿತ್ರಪಟವನ್ನು ಮೆರವಣಿಗೆಯಲ್ಲಿ ತಂದು ಇರಿಸಲಾಯಿತು. ನೂತನ ಭಜನಾ ಮಂದಿರ ನಿರ್ಮಾಣ ಸಂಬಂಧ ಟ್ರಸ್ಟ್ ವತಿಯಿಂದ ಸಾಮೂಹಿಕ ದುರ್ಗಾ ಹೋಮ ಏರ್ಪಡಿಸಲಾಗಿತ್ತು. ಬಳಿಕ ಶ್ರೀರಾಮಚಂದ್ರನ ಚಿತ್ರಪಟಕ್ಕೆ ಆರತಿ ಬೆಳಗಿ ಪ್ರಾರ್ಥಿಸಲಾಯಿತು. ದಿನದ ಪ್ರಯುಕ್ತ […]
ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ವತಿಯಿಂದ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟ ಆಯೋಜನೆ

ವಿರಾಜಪೇಟೆ: ಕೊಡವ ಜಮ್ಮಾ ಮುಸ್ಲಿಂ ಹಾಗೂ ಎಮ್ಮೆಮಾಡು 18 ಜಮ್ಮ ಮುಸ್ಲಿಂ ಕುಟುಂಭಸ್ತರ ಸಂಯುಕ್ತ ಆಶ್ರಯದಲ್ಲಿ ಎಮ್ಮೆಮಾಡು ಕುಟುಂಬದ ಮೈದಾನದಲ್ಲಿ ಮೇ 8,9 ಹಾಗೂ 10 ರಂದು ಜಮ್ಮಾ ಮುಸ್ಲಿಂ ಕುಟುಂಬಗಳ ನಡುವೆ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಆಯೋಜನಾ ಸಮಿತಿಯ ಸದಸ್ಯ ನೆರುಟ್ಟು ಕಾರಂಡ ರಜಾಕ್ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಈ ಭಾರಿಯ ವಾಲಿಬಾಲ್ ಕ್ರೀಡಾಕೂಟಕ್ಕೆ ಸುಮಾರು 60 ರಿಂದ […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ […]
ಶ್ರೇಷ್ಠ ವ್ಯಕ್ತಿಗಳು, ಗ್ರಂಥಗಳ ಸಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಬಿ.ಜಿ. ಅನಂತಶಯನ

ವೀರಾಜಪೇಟೆ : ಪ್ರತಿಯೊಬ್ಬ ಮನುಷ್ಯನಲ್ಲೂ ಅಸಾಧಾರಣವಾದ ಶಕ್ತಿ ಇದ್ದು ಅದನ್ನು ಗುರುತಿಸಿಕೊಂಡು ಉತ್ತಮ ರೀತಿಯಲ್ಲಿ ಬಳಸಿಕೊಂಡರೆ ನಾವು ಕೂಡ ಶ್ರೇಷ್ಠ ವ್ಯಕ್ತಿಗಳಂತೆ ಬದುಕಬಹುದು ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದಿ .ಕೂತಂಡ ಪಿ. ಉತ್ತಪ್ಪ ಸ್ಮರಣಾರ್ಥ ʼಆಧ್ಯಾತ್ಮಿಕ ನಾಯಕನಾಗಿ ಸ್ವಾಮಿ ವಿವೇಕಾನಂದʼ ಎಂಬ ವಿಷಯದ ಕುರಿತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಮಂಗಳವಾರ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, […]
ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಆಯ್ಕೆ

ಮಡಿಕೇರಿ : ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕೋಚನ ಚೇತನ್ ಅವಿರೋಧ ಆಯ್ಕೆಯಾಗಿದ್ದಾರೆ. ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಕೋಚನ ಚೇತನ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಚೇತನ್ ನಗರದ ದೇಚೂರು ನಿವಾಸಿಯಾಗಿದ್ದು, ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.
ಉದ್ಯೋಗಾಂಕ್ಷಿಗಳಿಗೆ ಉತ್ತಮ ಅವಕಾಶ: ಕೊಡಗಿನಲ್ಲಿ ಉದ್ಯೋಗ ಮೇಳ

ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಹಾಗೂ ಗುಣಮಟ್ಟದ ಶಿಕ್ಷಕರನ್ನು ಹುಡುಕುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ, ಮಾರ್ಚ್, 25 ರಿಂದ 27 ರವರೆಗೆ ನಗರದ ಕೊಡವ ಸಮಾಜದಲ್ಲಿ ಮೂರು ದಿನಗಳ ಸಮಗ್ರ ಶೈಕ್ಷಣಿಕ ಕಾರ್ಯಕ್ರಮ ಎಜು ಕನೆಕ್ಟ್ ಮತ್ತು ಜಾಬ್ ಮೇಳ 2026 ನಡೆಯಲಿದೆ. ಈ ಬೃಹತ್ ಕಾರ್ಯಕ್ರಮವನ್ನು ರೀಡ್ಟೆಕ್ ಸಂಸ್ಥೆಯ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಮತ್ತು ನ್ಯಾಚುರಲ್ ಸೋರ್ಸ್ ಡೆವಲಪ್ಮೆಂಟ್ ಸೆಂಟರ್ ಅವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ಪದವೀದರರು […]
ಕಂಡಿಮಕ್ಕಿಯಲ್ಲಿ ವಾರ್ಷಿಕ ತೆರೆ ಮಹೋತ್ಸವ

ವಿರಾಜಪೇಟೆ: ಕೊಡಗಿನ ವಿರಾಜಪೇಟೆ ಸಮೀಪದ ಬಾಳುಗೋಡಿನಲ್ಲಿರುವ ಶ್ರೀ ಕಂಡಿಮಕ್ಕಿ ತ್ರಿಮೂರ್ತಿ ದೇವಸ್ಥಾನ ಒಂದು ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದ್ದು ಮಾ.೨೭ ರಿಂದ ೨೯ ರವರೆಗೆ ವಾರ್ಷಿಕ ತೆರೆ ಮಹೋತ್ಸವ ನಡೆಯಲಿದೆ. ಈ ದೇವಾಲಯವು ಹಿಂದೂ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಶಿವನ ರೂಪದಲ್ಲಿ ಮೂರ್ತಿ ಸ್ವಾಮಿಯನ್ನು ಆರಾಧಿಸುವ ಪುಣ್ಯಕ್ಷೇತ್ರವಾಗಿದ್ದು, ನಂಬಿ ಬಂದವರ ಕಷ್ಟಗಳನ್ನು ದೂರಮಾಡುವ ದೈವವೆಂದು ಭಕ್ತರ ಅಪಾರ ನಂಬಿಕೆಯಿದೆ. ಇಲ್ಲಿನ ಪ್ರಧಾನ ದೇವತೆ ಶ್ರೀ ಕಂಡಿಮಕ್ಕಿ ತ್ರಿಮೂರ್ತಿ ಸ್ವಾಮಿ. ಇಲ್ಲಿ ನಡೆಯುವ ಕಂಡಿಮಕ್ಕಿ ತೆರೆ ಮಹೋತ್ಸವ (ಉತ್ಸವ) […]
ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಪಾರ್ಕಿಂಗ್ಗೆ ವಿರೋಧ

ವಿರಾಜಪೇಟೆ: ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣದಲ್ಲಿ (By stand) ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಖಾಸಗಿ ಬಸ್ಸುಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಖಾಸಗಿ ಬಸ್ಸು ಕಾರ್ಮಿಕರ ಸಂಘದ ಖಜಾಂಚಿ ದಿನೇಶ್ ನಾಯರ್ ಆರೋಪಿಸಿದರು. ಖಾಸಗಿ ಬಸ್ಸು ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್ನಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮಾದ್ಯಮದವರಿಗೆ ಮಾಹಿತಿ ನೀಡಿದ ದಿನೇಶ್ ಅವರು, ದಿನನಿತ್ಯದ ಸಂಬಳಕ್ಕಾಗಿ ದುಡಿಯುವ ಕಾರ್ಮಿಕ ವರ್ಗದ ಬಸ್ಸು ಚಾಲಕ ಮತ್ತು ನಿರ್ವಾಹಕರು ಇಲ್ಲಿದ್ದಾರೆ. ಬಸ್ಸು ನಿಲ್ದಾಣದಲ್ಲಿ ಬಂದು ಅವರಿಗೆ ತಿನ್ನಲು ಕುಡಿಯಲು ಕೇವಲ ೫-೧೦ ನಿಮಿಷಗಳ […]