ಮದುವೆ ಕಾರ್ಯಕ್ರಮದಲ್ಲಿ ಜೂಜಾಟ – ಪೊಲೀಸರ ದಾಳಿ – ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..!?

ವೀರಾಜಪೇಟೆ : ವಿವಾಹ ಸಮಾರಂಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಜೂಜಿಗೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯವಿತ್ತು. ಮಂಟಪದಲ್ಲಿನ ಕೊಠಡಿಯೊಂದರಲ್ಲಿ ಮದುವೆಗೆ ಬಂದಿದ್ದ ಕೆಲವರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಒಟ್ಟು 4,25,545/ ರೂ. ವಶಕ್ಕೆ ಪಡೆದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]
ವಾಲಿಬಾಲ್ನಲ್ಲಿ ಕೊಡಗಿನ ಹಾಡಿ ಹೈದನ ಸಾಧನೆ – ಸರ್ಕಾರದಿಂದ ಸನ್ಮಾನ…

ಪೊನ್ನಂಪೇಟೆ : ಕ್ರೀಡಾ ಕ್ಷೇತ್ರದ ಸಾಧನೆಗಾಗಿ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಬಿರ್ಸಾ ಮುಂಡರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗಿರಿಜನ ಹಾಡಿಯಲ್ಲಿ ಹುಟ್ಟಿ ಬೆಳೆದು, ಪ್ರಸ್ತುತ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
FMKMC ಕಾಲೇಜಿಗೆ ಹೊಸ ಚೈತನ್ಯ ತುಂಬಲು ಹಳೆ ವಿದ್ಯಾರ್ಥಿಗಳು ಕೈಜೋಡಿಸಿ – ಪ್ರೊ. ಪಿ.ಎಲ್. ಧರ್ಮ ಕರೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಲವು ಸಾಧಕರಿಗೆ ಶಿಕ್ಷಣ ಕೊಟ್ಟ ಸಂಸ್ಥೆ. ಈ ಕಾಲೇಜಿನ ಈಗಿನ ಪರಿಸ್ಥಿತಿ ನೋಡಿದಾಗ ಬಹಳ ಬೇಸರವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ನಾನು ಕೂಡಾ ಈ ಕಾಲೇಜಿನ ಹಳೆ ವಿದ್ಯಾರ್ಥಿ. ದಶಕದ ಹಿಂದೆ ಇದ್ದ ಚಿತ್ರಣ ಈಗ ಇಲ್ಲ. ಹಲವು ರೀತಿಯಲ್ಲಿ ಬದಲಾಗಿದೆ. ಕಾಲೇಜಿನ […]
ಸಂಸ್ಕೃತಿಯನ್ನು ಮರೆಯುವುದು ದೇಶವನ್ನು ವಿನಾಶದ ಕಡೆ ಕೊಂಡೊಯ್ದಂತೆ – ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ

ವೀರಾಜಪೇಟೆ : ಮನುಷ್ಯ ತನ್ನ ಸಂಸ್ಕೃತಿಯನ್ನು ಎಂದಿಗೂ ಬಿಡಬಾರದು. ಸಂಸ್ಕೃತಿಯನ್ನು ಮರೆಯುವುದು ದೇಶದ ವಿನಾಶಕ್ಕೆ ನಾಂದಿ ಹಾಡಿದಂತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮಡಿಕೇರಿ ಡಿ.ಎಲ್.ಎಸ್.ಎ ಸದಸ್ಯ ಕಾರ್ಯದರ್ಶಿ ಶುಭಾ ಅಭಿಪ್ರಾಯಪಟ್ಟರು. ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ, ವಿರಾಜಪೇಟೆ ಹಾಗೂ ಕಾವೇರಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಾದಕ ವಸ್ತುಗಳ ಬಳಕೆ ಹಾಗೂ ಮೊಬೈಲ್ […]
ಬಾಳುಗೋಡು ಸಹಿಪ್ರಾ ಶಾಲೆ ವಿದ್ಯಾರ್ಥಿಗಳಿಗೆ CISCO & ʼಜಾಗೃತಿʼ ಸಂಸ್ಥೆಯಿಂದ ಉಡುಗೊರೆ..!

ಕುಶಾಲನಗರ : ಬಾಳುಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ CISCO ಹಾಗೂ ʼಜಾಗೃತಿʼ ಸರ್ಕಾರೇತರ ಸಂಸ್ಥೆ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು. ಸಂಸ್ಥೆ ಪ್ರತಿನಿಧಿಗಳಾದ ನೋಯಲ್ ಹಾಗೂ ಕಣ್ಣನ್ ನೇತೃತ್ವದಲ್ಲಿ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಎಕ್ಸಾಂ ಪ್ಯಾಡ್(exam pad) ಮತ್ತು ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಕಿಟ್(sanitary kit) ವಿತರಿಸಲಾಯಿತು. ಜಾಗೃತಿ ಹಾಗೂ CISCO ಸಂಸ್ಥೆಯ ಸಿಬ್ಬಂದಿ, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸ್ಥಳೀಯ ಉದ್ಯಮಿ ದಿನೇಶ್ ಹಾಗೂ ಹಳೆ ವಿದ್ಯಾರ್ಥಿ ಬಳಗದ ರವಿಕುಮಾರ್ ಬಿ.ಎನ್. […]
ಶಾಸಕ ಎ.ಎಸ್. ಪೊನ್ನಣ್ಣ ವಿರುದ್ಧ ಅವಹೇಳನಕಾರಿ ಕಾಮೆಂಟ್ – ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!

ಗೋಣಿಕೊಪ್ಪ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕಿದ ಪ್ರಕರಣ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗುತ್ತಿದೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ನೇತೃತ್ವದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಟ್ಟದಾಗಿ ಕಾಮೆಂಟ್ ಹಾಕಿರುವ 05 ಮಂದಿಯ ವಿರುದ್ಧ ದೂರು ನೀಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಂಡ ದ್ಯಾನ್ ದೇವಯ್ಯ, ಗೋಣಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ […]
ಕಾರಿನಲ್ಲಿತ್ತು ಮಹಿಳೆ ಶ*ವ – ಮಧ್ಯರಾತ್ರಿ ಚೆಕ್ಪೋಸ್ಟ್ನಲ್ಲಿ ಸಿಕ್ಕಿಬಿದ್ದ ಮೂವರು..!

ಸಿದ್ದಾಪುರ : ಕಾರಿನಲ್ಲಿ ಮಹಿಳೆಯ ಶ*ವ ಸಾಗಿಸುತ್ತಿದ್ದ ಪ್ರಕರಣ ಮಾಲ್ದಾರೆ ಚೆಕ್ಪೋಸ್ಟ್ನಲ್ಲಿ ಬೆಳಕಿಗೆ ಬಂದಿದೆ. ಮಾಲ್ದಾರೆ ಲಿಂಗಾಪುರ ಚೆಕ್ ಪೋಸ್ಟ್ ಮೂಲಕ ನಿನ್ನೆ ನಡುರಾತ್ರಿ ಕಾರೊಂದರಲ್ಲಿ ಮಹಿಳೆಯೊಬ್ಬರ ಮೃ*ತದೇಹವನ್ನು ಸಾಗಿಸಲು ಪ್ರಯತ್ನ ನಡೆದಿತ್ತು. ಈ ವೇಳೆ ಅಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ತಪಾಸಣೆ ನಡೆಸುವ ವೇಳೆ ಶ*ವ ಇರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಕಾರಿನಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಶಕ್ಕೆ ಪಡೆದವರ ವಿಚಾರಣೆ ನಡೆಸುತ್ತಿದ್ದಾರೆ. ಮೈಸೂರಿನಿಂದ […]
ʼವೃಕ್ಷಮಾತೆʼ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – 114 ವರ್ಷದ ತುಂಬು ಜೀವನಕ್ಕೆ ವಿದಾಯ ಹೇಳಿದ ಪದ್ಮಶ್ರೀ ಪುರಸ್ಕೃತ ಸಾಧಕಿ

ಬೆಂಗಳೂರು : ‘ವೃಕ್ಷಮಾತೆ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ(114) ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳು ತಿಮ್ಮಕ್ಕ ಅವರ ಮುಡಿಗೇರಿತ್ತು. ಮರಗಳನ್ನೇ ತನ್ನ ಮಕ್ಕಳಂತೆ ಕಂಡು, ನಾಡಿನಲ್ಲಿ ಸಾವಿರಾರು ಮರಗಳನ್ನು ನೆಟ್ಟು ಮಾದರಿಯಾದ ಅವರ ನಿಧನಕ್ಕೆ ನಾಡಿನ ವಿವಿಧ ವರ್ಗದ ಜನ ಸಂತಾಪ ಸೂಚಿಸಿದ್ದಾರೆ. ಇಂದಿನ ಪೀಳಿಗೆಗೆ ಇವರ ಜೀವನ […]
ಕನ್ನಡಪ್ರಭ ಪತ್ರಿಕೆ ವತಿಯಿಂದ ಪೊನ್ನಂಪೇಟೆ, ವೀರಾಜಪೇಟೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ – ಉತ್ಸಾಹದಿಂದ ಪಾಲ್ಗೊಂಡ ನೂರಕ್ಕೂ ಅಧಿಕ ವಿದ್ಯಾರ್ಥಿಗಳು

ವಿರಾಜಪೇಟೆ : ಮಕ್ಕಳ ಪ್ರತಿಭೆ ಅನಾವರಣಕ್ಕೆ ಚಿತ್ರಕಲೆಯಂತಹ ಸ್ಪರ್ಧಾ ಕಾರ್ಯಕ್ರಮಗಳು ಅವಶ್ಯಕವಾಗಿದೆ. ತೀರಾ ಬಡತನದಲ್ಲಿ ಬೆಳೆದು ಬಂದವರು ಇಂದು ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರಂತೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿ ಅಧ್ಯಕ್ಷ ಪೂಜಾ ಸಜೇಶ್ ಹೇಳಿದರು. ಕನ್ನಡಪ್ರಭ ಪತ್ರಿಕೆ ವತಿಯಿಂದ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಗುರುವಾರ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ವಿದ್ಯಾರ್ಥಿಗಳಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. […]
ಕೆಲವು ದಿನದ ಹಿಂದಷ್ಟೇ ರಸ್ತೆ ದುಸ್ಥಿತಿ ಬಗ್ಗೆ ವರದಿ ಮಾಡಿ ಸಾರ್ವಜನಿಕ ಕಾಳಜಿ – ಅದೇ ರಸ್ತೆಯಲ್ಲಿ ಬಿದ್ದು ಗಾಯಗೊಂಡ ಪತ್ರಕರ್ತೆ..!

ಮಡಿಕೇರಿ : ಜಿಲ್ಲೆಯ ಬಹುತೇಕ ಕಡೆ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ಹಲವೆಡೆ ವಾಹನಗಳು ಸಂಚರಿಸುವುದೇ ದುಸ್ತರವಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರ ಪಾಡಂತೂ ಹೇಳತೀರದು. ಒಂದೆಡೆ ಹೊಂಡ ಗುಂಡಿಗಳು ರಸ್ತೆಯನ್ನು ಆವರಿಸಿದ್ದರೆ, ಮತ್ತೊಂದೆಡೆ ಈ ಬಾರಿಯ ನಿರಂತರ ಮಳೆಗೆ ಎಲ್ಲೆಲ್ಲಿಂದೋ ಬಂದು ರಸ್ತೆಯಲ್ಲಿ ಹರಡಿಕೊಂಡಿರುವ ಮಣ್ಣು & ಮರಳಿನ ರಾಶಿ ದ್ವಿಚಕ್ರ ವಾಹನ ಸವಾರರನನು ಯಮಸ್ವರೂಪಿಯಾಗಿ ಕಾಡುತ್ತಿದೆ. ಅದೆಷ್ಟೋ ಮಂದಿ ಹೊಂಡ, ಗುಂಡಿಗಳನ್ನು ತಪ್ಪಿಸಲು ಹೋಗಿ, ಮಣ್ಣು, ಮರಳಿನ ರಾಶಿಯಲ್ಲಿ ವಾಹನ ಜಾರಿದ ಪರಿಣಾಮ ಬಿದ್ದು ಗಾಯಗೊಂಡಿರುವ […]