ನಿಯಮ ಮೀರಿ ಡಿಜೆ ಬಳಕೆ – 05 ಸಮಿತಿ ವಿರುದ್ಧ ಪ್ರಕರಣ ದಾಖಲು – ಡಿಜೆ ಸಿಸ್ಟಂ ವಶಪಡಿಸಿಕೊಂಡ ಪೊಲೀಸರು..!

ಕುಶಾಲನಗರ(Kushalnagar) : ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸುವವರ ವಿರುದ್ಧ ಕ್ರಮಕ್ಕೆ ಜಿಲ್ಲಾ ಪೊಲೀಸ್‌(police) ಮುಂದಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ನಿನ್ನೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧೆಡೆ ಬಳಸಲಾಗಿದ್ದ ಡಿಜೆ ಸಿಸ್ಟಂಗಳನ್ನು ವಶಕ್ಕೆ ಪಡೆದಿದ್ದಾರೆ. ಮಾದಾಪಟ್ಟಣ ವ್ಯಾಪ್ತಿಯಲ್ಲಿ 04, ಜನತಾ ಕಾಲನಿ ಗಣೇಶೋತ್ಸವ ಮೆರವಣಿಗೆಯಲ್ಲಿ ಬಳಸಲಾಗಿದ್ದ ಒಂದು ಡಿಜೆ ಸಿಸ್ಟಂ, ಧ್ವನಿವರ್ದಕ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಮಿತಿಯವರ ಮೇಲೆ ಕೇಸ್‌ ಕೂಡಾ ದಾಖಲಾಗಿದೆ. ನಿಯಮ ಮೀರಿ ಅಬ್ಬರದ ಸಂಗೀತ ಹಾಕಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಗಣೇಶೋತ್ಸವಕ್ಕೆ ಮುಂಚಿತವಾಗಿಯೇ […]

ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ – ನೊಂದು ಆತ್ಮಹ*ತ್ಯೆಗೆ ಶರಣಾದ ಯುವಕ..!

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26)‌ ಮೃತ ಯುವಕ. ಮನೋಜ್‌ ಉಡುಪಿಯಲ್ಲಿ ಹೋಟೆಲ್‌ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್‌ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ […]

ನಿವೃತ್ತರಾದ ಪಿಎಸ್‌ಐ ಮತ್ತು ಎಎಸ್ಐಗೆ ಜಿಲ್ಲಾ ಪೊಲೀಸ್‌ ವತಿಯಿಂದ ಬೀಳ್ಕೊಡುಗೆ…

ಮಡಿಕೇರಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಪಿಎಸ್ಐ ‌ಹೆಚ್.ಇ. ವೆಂಕಟ್ ಮತ್ತು ಎಎಸ್‌ಐ ಕೆ.ಪಿ. ಮಾಚಯ್ಯ ಅವರು ವಯೋ ನಿವೃತ್ತಿ ಹೊಂದಿದ್ದಾರೆ. ಇವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಎಸ್ಪಿ ಕೆ. ರಾಮರಾಜನ್‌ ಮತ್ತು ಇತರೆ ಅಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು – NSS ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಮಾಡಿ, ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ‌ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ […]

ʼಕೊಡಗಿನಲ್ಲಿ ಡೇಟಿಂಗ್‌ಗೆ ಆಂಟಿ, ಹುಡ್ಗೀರು ಸಿಗ್ತಾರೆʼ ಅಂತ ಪೋಸ್ಟ್‌ ಹಾಕಿದವ ಅಂದರ್..!‌

ಮಡಿಕೇರಿ : ಕೊಡಗು ಜಿಲ್ಲೆಯ ಖ್ಯಾತಿಗೆ ಧಕ್ಕೆ ತರುವಂತೆ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಮಡಿಕೇರಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ವಿಡಿಯೋ ಬಳಸಿಕೊಂಡು ʼಮಡಿಕೇರಿ ಜಿಲ್ಲೆಯಲ್ಲಿ ಹುಡುಗಿ ಆಂಟಿ ಡೇಟಿಂಗ್‌ ಮಾಡೋದಕ್ಕೆ ಸರ್ವಿಸ್‌ ಬೇಕಾದ್ರೆ ಕಾಲ್‌ ಮಾಡಿʼ ಅಂತ ಪೋಸ್ಟ್‌ ಹಾಕಲಾಗಿತ್ತು. ಈ ವಿಚಾರವಾಗಿ ಅನೇಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಡಿವೈಎಸ್ಪಿ ಪಿ.ಎ. ಸೂರಜ್‌, ಸಿಪಿಐ […]

ದಸರಾ ಪೂರ್ವಭಾವಿ ಸಭೆ – ದಶಮಂಟಪ ಸಾಗುವ ಮಾರ್ಗದ ಗುಂಡಿ ಮುಚ್ಚಲು ಶಾಸಕ ಮಂತರ್‌ ಗೌಡ ಸೂಚನೆ

ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ […]

ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ: ಯಾವಾಗ? ಎಲ್ಲೆಲ್ಲಿ?

kodagu liquor ban

ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ ಹಾಗೂ ಅದರ ಸುತ್ತಮುತ್ತಲಿನ ಸುಮಾರು […]

ಮಡಿಕೇರಿ-ವೀರಾಜಪೇಟೆ ಹೆದ್ದಾರಿ ಬದಿಯಲ್ಲಿ ಮತ್ತೆ ಭೂಕುಸಿತ..!

ಮಡಿಕೇರಿ : ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ಶಕ್ತಿ ನಗರ ಬಳಿ ರಸ್ತೆ ಬದಿ ಭೂಕುಸಿತವಾಗಿದೆ. ಕೆಲವು ದಿನದ ಹಿಂದೆ ಈ ಜಾಗದಲ್ಲಿ ಕುಸಿತವಾಗಿತ್ತು. ಅಲ್ಲಿ ಹೆಚ್ಚಿನ ಕುಸಿತವಾಗದಂತೆ ತಡೆಯಲು ಸ್ಯಾಂಡ್‌ ಬ್ಯಾಗ್‌ ಜೋಡಿಸಿಡಲಾಗಿತ್ತು. ಆದರೆ ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಅಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡಿಸಿಡಲಾಗಿದ್ದ ಮರಳಿನ ಮೂಟೆಗಳು ಕೆಳ ಬದಿಗೆ ಜಾರಿ ಹೋಗಿವೆ. ಅಲ್ಲಿನ ರಸ್ತೆ ಕಡಿದಾಗಿದ್ದು, ಹೆಚ್ಚಿನ ವಾಹನ ಸಂಚಾರ ಈ ಮಾರ್ಗದಲ್ಲಿರುವುದರಿಂದ ಮತ್ತಷ್ಟು ಅಪಾಯ ಸಂಭವಿಸುವ ಸಾಧ್ಯತೆ ಇದೆ. […]

ಗಣೇಶೋತ್ಸವದಲ್ಲಿ ಡಿಜೆ ನಿರ್ಬಂಧ – ಮೊದಲ ದಿನ ಮಿಶ್ರ ಪ್ರತಿಕ್ರಿಯೆ – ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಸಮಿತಿಗಳು..!

ಮಡಿಕೇರಿ : ಈ ಬಾರಿಯ ಗೌರಿ ಗಣೇಶೋತ್ಸವ ಧಾರ್ಮಿಕ ಆಚರಣೆಗಿಂತ ಹೆಚ್ಚಾಗಿ ಡಿಜೆ, ಸೌಂಡ್ಸ್‌ ಬಳಕೆ ವಿಚಾರವಾಗಿ ಹೆಚ್ಚಾಗಿ ಚರ್ಚೆಗೊಳಪಟ್ಟಿದೆ. ನಿಯಮ ಬಾಹಿರವಾಗಿ ಡಿಜೆ ಬಳಕೆ ಮಾಡದಂತೆ ಪೊಲೀಸ್‌ ಇಲಾಖೆ ಈಗಾಗಲೇ ಎಚ್ಚರಿಕೆಯನ್ನು ಕೊಟ್ಟಿದೆ. ಈ ನಡುವೆ ಗಣೇಶೋತ್ಸವದ ಮೊದಲ ದಿನ ಕೊಡಗು ಜಿಲ್ಲೆಯಲ್ಲಿ ಗಣೇಶೋತ್ಸವ ಸಮಿತಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿಜೆ ಬಳಸಿದ್ರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿಯಮ ಉಲ್ಲಂಘಿಸಿದರೆ ಆಯೋಜಕರು ಹಾಗೂ ಡಿಜೆ ವ್ಯವಸ್ಥೆ ಕಲ್ಪಿಸಿದವರ ಮೇಲೂ ಕ್ರಮ ಕೈಗೊಳ್ಳುವ ಜೊತೆಗೆ ಪರಿಕರಗಳನ್ನು ಮುಟ್ಟುಗೋಲು […]

ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಬಿರುಸು – ಇನ್ನೆಷ್ಟು ದಿನ ಇರಲಿದೆ ಗೊತ್ತಾ..?

ಕರಾವಳಿ : ಕಳೆದ ಮೂರು ದಿನದಿಂದ ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮತ್ತೆ ಮಳೆ ಬಿರುಸುಗೊಂಡಿದೆ. ಈ ಮಳೆ ಇನ್ನೂ ಕೆಲವು ದಿನ ಮುಂದುವರೆಯುವ ಸಾಧ್ಯತೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 5ರ ತನಕ ಈ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮಳೆ ಮುಂದುವರೆಯಲಿದೆ. ಇದು ಆಗಸ್ಟ್‌ 31ರವರಗೆ ಸಾಗಲಿದೆ. […]