ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮ 2025 – ಮಡಿಕೇರಿಯಲ್ಲಿ ಕಾರ್ಯಾಗಾರ

ಮಡಿಕೇರಿ : ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು-2025 ಕುರಿತ ಕಾರ್ಯಾಗಾರ ಮಡಿಕೇರಿಯಲ್ಲಿ ನಡೆಯಿತು. ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಕಾರ್ಯಾಗಾರ ಉದ್ಘಾಟಿಸಿದರು. ಮಾಸ್ಟರ್ ಟ್ರೈನರ್ಗಳಾದ ಪುಟ್ಟರಾಜು, ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿ ಗ್ರೇಡ್-2 ಪೂಣಚ್ಚ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಜಿಲ್ಲಾ ಪಂಚಾಯಿತಿಯ ವಿವಿಧ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡಿದರು. […]
ಹಾರಂಗಿ ಹಿನ್ನೀರಿನಲ್ಲಿ ದುರಂತ : ಇಂದು ಪತ್ತೆಯಾಯ್ತು ಮತ್ತೋರ್ವ ವಿದ್ಯಾರ್ಥಿಯ ಮೃ*ತದೇಹ..!

ಸುಂಟಿಕೊಪ್ಪ : ಹಾರಂಗಿ ಹಿನ್ನೀರಿನಲ್ಲಿ ಬುಧವಾರ ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜರು ತೆರಳಿದ್ದ ಸಂದರ್ಭ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದರು. ಆ ಪೈಕಿ ಚಂಗಪ್ಪ(17) ಮೃತದೇಹ ನಿನ್ನೆಯೇ ಪತ್ತೆಯಾಗಿತ್ತು. ಮಡಿಕೇರಿ ರಾಜಾಸೀಟ್ ಬಳಿಯ ನಿವಾಸಿ ತರುಣ್ ತಮ್ಮಯ್ಯ (17) ಮೃತದೇಹ ಇಂದು ಪತ್ತೆಯಾಗಿದೆ. ಹೆಬ ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿ, ಪೊಲೀಸರು, ದುಬಾರೆ Rafting ತಂಡದವರು ಮೃತದೇಹ ಪತ್ತೆಯಾಗಿ ಕಾರ್ಯಾಚರಣೆ […]
ಅಂಗನವಾಡಿ ಕಾರ್ಯಕರ್ತೆಯರು, ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ ಭೇಟಿ ನೀಡಿದ ಅಧಿಕಾರಿಗಳು

ಮಡಿಕೇರಿ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಕಡಿಮೆ ತೂಕದ ಮಕ್ಕಳ ಪೋಷಕರೊಂದಿಗೆ ಪೌಷ್ಟಿಕ ಪುನಶ್ಚೇತನ ಕೇಂದ್ರಕ್ಕೆ (NRC madikeri) ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್, ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಭೇಟಿ ನೀಡಿ ಪೌಷ್ಟಿಕ ಪುನಶ್ಚೇತನ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ತಿಂಗಳು ಐದನೇ ತಾರೀಖಿನೊಳಗೆ ಅಂಗನವಾಡಿ ಕೇಂದ್ರದಲ್ಲಿ 0-6 ವರ್ಷದ ಮಕ್ಕಳ ತೂಕ, ಎತ್ತರ, ತೋಳಿನ ಸುತ್ತಳತೆಯನ್ನು ಪರಿಶೀಲಿಸಿ […]
ನವೆಂಬರ್ 12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ ಫೀಡರ್ಗಳಲ್ಲಿ ನವೆಂಬರ್, ೧೨ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ […]
ಎನ್ಸಿಸಿಯಲ್ಲಿ C ಪ್ರಮಾಣ ಪತ್ರ ಪಡೆದಿರುವ ಯುವತಿಯರಿಗೆ ʼಅಕ್ಕ ಪಡೆʼ ಸೇರಲು ಅವಕಾಶ..!

ಮಡಿಕೇರಿ : ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ “ಅಕ್ಕ ಪಡೆ” ಯೋಜನೆ ಅನುಷ್ಠಾನಗೊಳಿಸಲು ಎನ್ಸಿಸಿಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ನನ್ನ ಕಲ್ಪನೆಯ ಸ್ವಚ್ಚ ಕೊಡಗು’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರಬಂಧ ಪ್ರತಿಯನ್ನು ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯ ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ಧಿ ಮತ್ತೆಯನ್ನು(ಎಐ) ಉಪಯೋಗಿಸುವಂತಿಲ್ಲ. ಪ್ರಬಂಧವನ್ನು ಚಾಮೆರ […]
ಮಹಿಳೆಯರಿಗೆ ಸುವರ್ಣಾವಕಾಶ: ಅಕ್ಕ ಪಡೆ ತಂಡ ರಚನೆಗೆ ಅರ್ಜಿ ಆಹ್ವಾನ

ಮಡಿಕೇರಿ: ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]
ಕೊಡಗಿನಲ್ಲಿ ಮೂರು ದಿನ ಪವರ್ ಕಟ್: ಯಾವ ಪ್ರದೇಶಗಳಲ್ಲಿ, ಸಮಯ ವಿವರ

ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕ್ಲೋಸ್ಬರ್ನ್ : ವರ್ಗಾವಣೆಯಾದ ಶಿಕ್ಷಕಿ ಸುಜಾತ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮಡಿಕೇರಿ : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು. ಗೌರವ ಸ್ವೀಕರಿಸಿ […]
ಕಾಂತೂರು ಮೂರ್ನಾಡು – ಜಲ ಜೀವನ್ ಮಿಷನ್ ಯೋಜನೆ ಯಶಸ್ವಿ ಅನುಷ್ಠಾನ

ಮಡಿಕೇರಿ : ಕಾಂತೂರು ಮತ್ತು ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಯಶಸ್ವಿಯಾಗಿದ್ದು, ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. ಸಂಸದ ಯದುವೀರ್ ಒಡೆಯರ್ ಮತ್ತು ಶಾಸಕ ಡಾ. ಮಂತರ್ ಗೌಡ […]