ಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ಧನ್ಯತಾ ಭಾವ ಮೂಡಿಸಿದೆ – ಯದುವೀರ್ ಒಡೆಯರ್

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಇದೊಂದು ಅಪೂರ್ವ ಕ್ಷಣ. ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಬರುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದಿದ್ದಾರೆ. ತೀರ್ಥೋದ್ಭವಕ್ಕೂ ಮುನ್ನ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ […]
ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಸಂಗ್ರಹಿಸಲಾದ ತ್ಯಾಜ್ಯ ಎಷ್ಟು ಗೊತ್ತಾ..? ಇಲ್ಲಿದೆ ನೋಡಿ ಡಿಟೇಲ್ಸ್…

ಮಡಿಕೇರಿ : ಕೂರ್ಗ್ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಬುಧವಾರ ಕೈಗೊಳ್ಳಲಾದ ಸ್ವಚ್ಚ ಕೊಡಗು – ಸುಂದರ ಕೊಡಗು ಸ್ವಚ್ಚತಾ ಅಭಿಯಾನದ ಸಂದರ್ಭ ಜಿಲ್ಲಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಚತಾ ಕಾರ್ಯಕರ್ತರಿಗೆ 33,800 ಕೈಕವಚ […]
ಪವಿತ್ರ ಕಾವೇರಿ ತೀರ್ಥೋದ್ಭವ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ…

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ಟೋಬರ್ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ವೀಕ್ಷಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 12.30ಕ್ಕೆ ಭಾಗಮಂಡಲಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ನಂತರ ತಲಕಾವೇರಿಗೆ ತೆರಳಲಿದ್ದಾರೆ. ಪೂಜಾ ಕಾರ್ಯ ಹಾಗೂ ತೀರ್ಥೋದ್ಭವ ವೀಕ್ಷಣೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ಡಿಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.
ಕಾವೇರಿ ತೀರ್ಥೋದ್ಭವ – ಸ್ವಾಗತ ಕೋರಿ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ – ಕ್ರಮಕ್ಕೆ ಆಗ್ರಹ

ಭಾಗಮಂಡಲ : ನಾಡಿನ ಜೀವನದಿ ಕಾವೇರಿಯ ತವರು ತಲಕಾವೇರಿಯಲ್ಲಿ ತುಲಾ ಸಂಕ್ರಮಣ ಜಾತ್ರೋತ್ಸವ ಅ.17ರಂದು ನಡೆಯಲಿದೆ. ಈ ಸಂಬಂಧ ಭಕ್ತಾದಿಗಳಿಗೆ ಸ್ವಾಗತ ಕೋರಿ ಕಾರುಗುಂದದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗೌಡ ಸಮಾಜಗಳ ಒಕ್ಕೂಟ ವತಿಯಿಂದ ವಿವಿಧೆಯಲ್ಲಿ ಸ್ವಾಗತದ ಬ್ಯಾನರ್ ಅಳವಡಿಸಲಾಗಿತ್ತು. ಕಾರುಗುಂದ ವ್ಯಾಪ್ತಿಯಲ್ಲಿ ರಸ್ತೆ ಬದಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಹರಿದು ಹಾಕಲಾಗಿದೆ. ಈ ಕೃತ್ಯವನ್ನು ವಿವಿಧ ಗೌಡ ಸಮಾಜಗಳು ಖಂಡಿಸಿದ್ದು, ಕೃತ್ಯವೆಸಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ […]
RSS ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ? – ಬೆದರಿಕೆಗೆ ನಾನೂ ಹೆದರಲ್ಲ, ಖರ್ಗೆಯವರೂ ಹೆದರಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದು ಈ ಕುರಿತ ಆಡಿಯೋ ಕೂಡ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ತಮಿಳುನಾಡಿನಲ್ಲಿ ಆರ್.ಎಸ್.ಎಸ್. […]
ರೂ.73.10 ಲಕ್ಷ ಲಾಭದಲ್ಲಿ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

ಪೊನ್ನಂಪೇಟೆ: ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ […]
ಅಕ್ಟೋಬರ್ 15ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : 66/11ಕೆ.ವಿ ಪೊನ್ನಂಪೇಟೆ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 12 ಬೆಕ್ಕೆಸೊಡ್ಲೂರು ಫೀಡರ್ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಬೆಕ್ಕೆಸೊಡ್ಲೂರು, ಬಲ್ಯಮಂಡೂರು, ಕಾನೂರು, ಕೋತೂರು, ಬೊಮ್ಮಾಡು, ನಿಡುಗುಂಬ, ವಡ್ಡರಮಾಡು, ಕಪ್ಪರಮನೆ, ಬ್ರಹ್ಮಗಿರಿ, ಕೊಟ್ಟಗೇರಿ, ಬೇಗೂರು, ಮುಗುಟಗೇರಿ, ಚಿಕ್ಕಮಂಡೂರು, ಕೋಟೂರು, ತೂಚಮಕೇರಿ, ಚಿಕ್ಕಮಂಡೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯ […]
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕಾರ್ಯಕರ್ತೆ ಮಡಿಕೇರಿ 18, ಸೋಮವಾರಪೇಟೆ 15, ಪೊನ್ನಂಪೇಟೆ 21 […]
ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಪುನರಾಯ್ಕೆ

ಗೋಣಿಕೊಪ್ಪ : ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಣ್ಣುವಂಡ ಕಿಶೋರ್ ನಾಚಪ್ಪ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿ ಆಯ್ಕೆ ಸಂಬಂಧ ಇಂದು ಚುನಾವಣೆ ನಿಗಧಿಯಾಗಿತ್ತು. ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಚ್ಚಮಾಡ ಅನೀಶ್ ಮಾದಪ್ಪ, ಪ್ರಧಾನ ಕಾರ್ಯದರ್ಶಿ ಎನ್.ಎನ್. ದಿನೇಶ್, ಖಜಾಂಚಿಯಾಗಿ ವಿ.ವಿ. ಅರುಣ್ ಕುಮಾರ್, ಕಾರ್ಯದರ್ಶಿ ಮಂಡೇಡ ಎಸ್. ಅಶೋಕ್, ನಿರ್ದೇಶಕರಾಗಿ ಅಣ್ಣೀರ ಹರೀಶ್ ಮಾದಪ್ಪ, ಚಿಮ್ಮಣಮಾಡ ದರ್ಶನ್ ದೇವಯ್ಯ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ವಿ.ಕೆ. ಪ್ರತಾಪ್, ಸಹಾಯಕರಾಗಿ ಬಿ.ಇ. ಕಿರಣ್, […]
ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಅಷ್ಟೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ […]