ಸಮರ್ಥ ಸಾಹಿತ್ಯ ಪ್ರತಿಷ್ಟಾನದ ಪತ್ರಿಕೋದ್ಯಮ ಪ್ರಶಸ್ತಿಗೆ ಅನಿಲ್ ಹೆಚ್.ಟಿ. ಆಯ್ಕೆ

ಮಡಿಕೇರಿ : ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಠಾನವು ನೀಡುವ ವಾರ್ಷಿಕ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಟಾನವು ವಾರ್ಷಿಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವರ್ಷದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್ಗಳ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಡಿಸೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅರುವತ್ತೋಕ್ಲು, ಕಿರುಗೂರು, ದೇವರಪುರ, ಮಾಯಮುಡಿ ಧನುಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಡಿಸೆಂಬರ್, 27 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, […]
ಕೆ.ಎಂ.ಎಸ್.ಎ. ವತಿಯಿಂದ ಶಾಲೆಗೆ ಕುರ್ಚಿ ವಿತರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ವಿರಾಜಪೇಟೆ ಸಮೀಪದ ಕಂಡಂಗಾಲದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಶುಕ್ರವಾರ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಎಂ.ಎಸ್.ಎ. ಅಧ್ಯಕ್ಷರಾದ ಆಲೀರ ರಶೀದ್ ಅವರು ಕುರ್ಚಿಗಳನ್ನು ಶಾಲಾ ಮುಖ್ಯ ಶಿಕ್ಷಕರಾದ ಪವೀನ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಲೀರ ರಶೀದ್, ಹಿಂದೆ ಗ್ರಾಮೀಣ ಪ್ರದೇಶದ ಜನರ ಶೈಕ್ಷಣಿಕ ಪ್ರಗತಿಯಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾಗಿದೆ. ಇಂದಿಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಹೆಚ್ಚು ಅನುಕೂಲಕರ […]
ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆ

ಮಡಿಕೇರಿ:-ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು, ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಮಾನಸ ಪಿ.ಜಿ. ಮತ್ತು ಮಾನಸ ಎ.ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ […]
15 ದಿನದಲ್ಲೇ ಕಿತ್ತು ಹೋದ ಮಡಿಕೇರಿ-ಕತ್ತಲೆಕಾಡು ರಸ್ತೆಯ ತೇಪೆ..! – ವೈಜ್ಞಾನಿಕ ಕಾಮಗಾರಿ ನಡೆಸಲು ಜ.01ರ ಗಡುವು – ಬೃಹತ್ ಪ್ರತಿಭಟನೆ ಎಚ್ಚರಿಕೆ

ಮಡಿಕೇರಿ : ಜಿಲ್ಲೆಯ ವಿವಿಧೆಡೆ ಗುಂಡಿಬಿದ್ದ ರಸ್ತೆಗಳಿಗೆ ತೇಪೆ ಹಾಕಿ ಮುಚ್ಚುವ ಕಾಮಗಾರಿ ನಡೆಯುತ್ತಿದ್ದು, ಹಲವು ಕಡೆಗಳಲ್ಲಿ ಇದು ಕಾಟಾಚಾರಕ್ಕೆ ಎಂಬಂತಾಗಿದೆ. ಇದಕ್ಕೆ ಸಾಕ್ಷಿ ಮಡಿಕೇರಿಯಿಂದ ಕತ್ತಲೆಕಾಡುವರೆಗೆ ನಡೆದಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ. ಎರಡು ವಾರದ ಹಿಂದೆ ಈ ಮಾರ್ಗದಲ್ಲಿ ಕಾಮಗಾರಿ ನಡೆದಿದ್ದು, 15 ದಿನ ಕಳೆಯುವಷ್ಟರಲ್ಲೇ ತೇಪೆ ಹಾಕಲಾಗಿದ್ದ ಡಾಂಬರು ಕಿತ್ತು ಹೋಗಿದೆ. ಜಲ್ಲಿಕಲ್ಲುಗಳೆಲ್ಲ ರಸ್ತೆ ಬದಿಯಲ್ಲಿ ಸಂಗ್ರಹವಾಗಿದ್ದು, ಮೊದಲಿದ್ದಂತೆ ಗುಂಡಿಗಳು ಮತ್ತೆ ನಿರ್ಮಾಣವಾಗಿದೆ. ತೀರಾ ಹದಗೆಟ್ಟಿದ್ದ ರಸ್ತೆಯಲ್ಲಿ ಅಲ್ಲಲ್ಲಿ ಕೆಲವು ಗುಂಡಿಗಳನ್ನು ಮುಚ್ಚಿ […]
ಕೊಡಗಿನ ಫಮೀರಾ ಅಹ್ಮದ್ಗೆ ಬಹುಭಾಷಾ ಕಂಟೆಂಟ್ ಕ್ರಿಯೇಟರ್ & ಇನ್ಫ್ಲೂಯೆನ್ಸರ್ ಪ್ರಶಸ್ತಿ

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕೊಡಗಿನ ಫಮೀರಾ ಅಹ್ಮದ್ ಅವರು ‘ಅತ್ಯುತ್ತಮ ಬಹುಭಾಷಾ ವಿಷಯ ರಚನೆಕಾರರು ಮತ್ತು ಡಿಜಿಟಲ್ ಪ್ರಭಾವಿ (ಇನ್ಫ್ಲೂವೆನ್ಸರ್) ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಒಮಾನಿನ್ ಸಲಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಚೆರಿಯಪರಂಬುವಿನ ಪರವಂಡ ಅಹಮದ್ ಮತ್ತು ಝೈನಭ ದಂಪತಿಯ ಪುತ್ರಿಯಾಗಿರುವ ಇವರು ಇನ್ಫರ್ಮೇಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ನಲ್ಲಿ ಬಿಇ ಪದವೀಧರೆಯಾಗಿದ್ದು, ಪ್ರಸ್ತುತ ಮಸ್ಕತ್ನಲ್ಲಿ ನೆಲೆಸಿದ್ದಾರೆ. ಈಕೆ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ನಿರ್ದೇಶಕರಾದ ಪರವಂಡ ಎ. ಸಿರಾಜ್ ಸಹೋದರಿ.
ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಚುನಾವಣೆ – ಬಿಜೆಪಿಯ ನಾಲ್ವರು ಅವಿರೋಧ ಆಯ್ಕೆ

ಮಡಿಕೇರಿ : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿಗೆ ಬಿಜೆಪಿಯ ನಾಲ್ವರು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಎಸ್.ಸಿ ಸತೀಶ್, ಅರುಣ್ ಶೆಟ್ಟಿ, ಕೆ.ಎಂ ಅಪ್ಪಣ್ಣ, ಶಾರದಾ ನಾಗರಾಜ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದವರು. ನಗರಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ಧಾರ ಮತ್ತು ಹಣಕಾಸು ಸಮಿತಿಗೆ ಅರುಣ್ ಶೆಟ್ಟಿ, ಸಾರ್ವಜನಿಕ ಅರೋಗ್ಯ & ಶಿಕ್ಷಣ ಸಮಿತಿಗೆ ಎಸ್.ಸಿ. ಸತೀಶ್, ಪಟ್ಟಣ ಯೋಜನೆ ನಗರ ಅಭಿವೃದ್ಧಿ ಸಮಿತಿಗೆ ಅಪ್ಪಣ್ಣ, ಲೆಕ್ಕಪತ್ರ ಸಮಿತಿಗೆ […]
ಕೊಯನಾಡು ಗ್ರಾಮದಲ್ಲಿ ಜೇನು ಪೆಟ್ಟಿಗೆ ಹಾಗೂ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ವಿತರಿಸಿದ ಎ.ಎಸ್.ಪೊನ್ನಣ್ಣ

ತಾಲ್ಲೂಕಿನ ಕೊಯನಾಡು ವಲಯ ಅರಣ್ಯ ಕಚೇರಿ ಬಳಿ ನೂತನವಾಗಿ ನಿರ್ಮಿಸಿರುವ ಅಧಿಕಾರಿಗಳ ವಸತಿ ಗೃಹವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಉದ್ಘಾಟಿಸಿದರು. ಕೊಯನಾಡು ಬಳಿಯ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಸತಿ ಗೃಹ ಉದ್ಘಾಟಿಸಿ ಶಾಸಕರು ಮಾತನಾಡಿದರು. 30 ಜನ ಕೃಷಿಕರಿಗೆ ತಲಾ 2 ಜೇನು ಪೆಟ್ಟಿಗೆ, ಹಾಗೂ 6 ಜನ ಮಹಿಳೆಯರಿಗೆ ಹೊಲಿಗೆಯಂತ್ರ ಹಸ್ತಾಂತರಿಸಿದರು. ಜೊತೆಗೆ […]
ನಾಲ್ವರ ಹ*ತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ – ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ..!

ಮಡಿಕೇರಿ : ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ವರ ಹ*ತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ. ರಾಮರಾಜನ್ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.
ನನ್ನ ಕಲ್ಪನೆಯ ಸ್ವಚ್ಚ ಕೊಡಗು ಪ್ರಬಂಧ ಸ್ಪರ್ಧೆ – ರುಶೀಲ್ ಎಂ. ಪ್ರಥಮ, ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ಸನ್ನಿಧಿ ಆರ್. ತೃತೀಯ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕವತಿಯಿಂದ ನಡೆದ ನನ್ನ ಕಲ್ಪನೆಯ ಸ್ವಚ್ಚ ಕೊಡಗು ವಿಷಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿ ಕೊಡಗು ವಿದ್ಯಾಲಯದ ರುಶೀಲ್ ಎಂ. ಪ್ರಥಮ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ವೀರಾಜಪೇಟೆ ತ್ರಿವೇಣಿ ಶಾಲೆಯ ಸನ್ನಿಧಿ ಆರ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ರುಶೀಲ್ ಎಂ. ಕೊಡಗು ವಿದ್ಯಾಲಯ […]