ಆಲೆಮಾಡ ತೋಕ್ ನಮ್ಮೆ ಲಾಂಛನ ಅನಾವರಣ : ಅಕ್ಟೋಬರ್ನಲ್ಲಿ ಕಾರ್ಯಕ್ರಮ

ಗೋಣಿಕೊಪ್ಪ : ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಆಲೆಮಾಡ ತೋಕ್ ನಮ್ಮೆ ಲಾಂಛನವನ್ನು ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಭಾನುವಾರ ಅನಾವರಣಗೊಳಿಸಲಾಯಿತು. ಒಕ್ಕದ ಸದಸ್ಯರು ಪಾಲ್ಗೊಂಡು ಉತ್ಸಾಹ ತೋರಿದರು. ಕುಟುಂಬದ ಹಿರಿಯರಾದ ಆಲೆಮಾಡ ಕಾರ್ಯಪ್ಪ, ಶಾಂತಿ ಕಾರ್ಯಪ್ಪ ದಂಪತಿ ಲಾಂಛನ ಅನಾವರಗೊಳಿಸಿ ಶುಭಕೋರಿದರು. ಆಲೆಮಾಡ ಒಕ್ಕ ಅಧ್ಯಕ್ಷ ಆಲೆಮಾಡ ಎನ್. ದೇವಯ್ಯ, ಆಲೆಮಾಡ ತೋಕ್ ನಮ್ಮೆ ಅಧ್ಯಕ್ಷ ಆಲೆಮಾಡ ಸೋಮಣ್ಣ ಉಪಸ್ಥಿತರಿದ್ದರು. ಒಕ್ಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಯಾಗಿ ನಡೆಸಲು ಸಹಕಾರ ನೀಡುವ ಭರವಸೆ ನೀಡಿದರು. ಅಕ್ಟೋಬರ್ ತಿಂಗಳ […]
ಕರಡಿಗೋಡು ಬಸವೇಶ್ವರ ದೇವರ ವಾರ್ಷಿಕೋತ್ಸವ

ಸಿದ್ದಾಪುರ : ಕರಡಿಗೋಡು ಗ್ರಾಮದ ಕುಕ್ಕುನೂರು ಕುಟುಂಬದ ಶ್ರೀ ಬಸವೇಶ್ವರ ದೇವರ ವಾರ್ಷಿಕ ಉತ್ಸವ ಮಾರ್ಚ್ 29, 30, 31ರಂದು ನಡೆಯಲಿದೆ. 29ರ ಭಾನುವಾರ ಸಂಜೆ ಗೋ ಪೂಜೆ, ನಿತ್ಯ ಪೂಜೆಯ ನಂತರ 7:30 ಗಂಟೆಗೆ ಭಂಡಾರದ ಮನೆಯಿಂದ ದೇವರ ಭಂಡಾರವನ್ನು ದೇವಸ್ಥಾನಕ್ಕೆ ತರುವುದು. 30ರಂದು ಬೆಳಗ್ಗೆ 8-30 ಕ್ಕೆ ಗಣಪತಿ ಹೋಮ, 10:00 ಕ್ಕೆ ಕಲಶ ಪೂಜೆ, 11:00ಕ್ಕೆ ಗಂಗಾ ಸ್ನಾನ, ಕಾವೇರಿ ನದಿಯಿಂದ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ, ಮಧ್ಯಾಹ್ನ 12:30 ಕ್ಕೆ […]
ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಶ್ರೀ ಮುತ್ತಪ್ಪ ಸೇವಾ ಸಂಘದಿಂದ ಕಲಶ ಪೂಜೆ

ವಿರಾಜಪೇಟೆ: ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಶ್ರೀ ಮುತ್ತಪ್ಪ ಸೇವಾ ಸಂಘದ ವತಿಯಿಂದ ಕಲ್ಲುಬಾಣೆಯಲ್ಲಿ ೧೧ ನೇ ವರ್ಷದ ಕಳಶ ಮಹೋತ್ಸವ ೨ ದಿನಗಳ ಕಾಲ ಅತ್ಯಂತ ಶ್ರದ್ದಾ ಭಕ್ತಿಯಿಂದ ಯಶಸ್ವಿಯಾಗಿ ನಡೆಯಿತು. ಮೊದಲ ದಿನ ಕಳಸ ಪ್ರತಿಷ್ಠಾಪನೆ, ಶ್ರೀ ಮುತ್ತಪ್ಪ ದೇವರ ಪೈಂಗುತ್ತಿ ಸೇವೆ ನಡೆಯಿತು. ಬಳಿಕ ಸಂಜೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಿತು. ಕಳಸ ಮಹೋತ್ಸವದ ಅಂಗವಾಗಿ ವಿವಿಧ ಸಾಧಕರನ್ನು, ಗ್ರಾಮದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ […]
ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ರಾಮನವಮಿ, ವಾರ್ಷಿಕ ಮಹಾಸಭೆ ಮಾ.26ಕ್ಕೆ

ಮಡಿಕೇರಿ : ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ ಆಚರಣೆ ಹಾಗೂ ಟ್ರಸ್ಟ್ನ 2025-26 ವಾರ್ಷಿಕ ಮಹಾಸಭೆ ಮಾರ್ಚ್ 26ರಂದು ನಡೆಯಲಿದೆ. ಟ್ರಸ್ಟ್ಗೆ ನೂತನವಾಗಿ ಖರೀದಿಸಿರುವ ಜಾಗದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿ ಅವರ ನೇತೃತ್ವದಲ್ಲಿ ಗಣಹೋಮ, ಬಳಿಕ ದುರ್ಗಾ ಹೋಮ, 11 ಗಂಟೆಗೆ ಶ್ರೀರಾಮನವಿ ಪ್ರಯುಕ್ತ ವಿಶೇಷ ಪೂಜೆ, ಶ್ರೀರಾಮನಿಗೆ ಆರತಿ ನೆರವೇರಲಿದೆ. ನಂತರ ಟ್ರಸ್ಟ್ನ ಭಜನಾ ತಂಡದಿಂದ ಭಜನೆ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ […]
ಈದ್ ಹಬ್ಬದ ಪ್ರಯುಕ್ತ ದುಬೈನಲ್ಲಿ ಯಶಸ್ವಿಯಾಗಿ ಜರುಗಿದ ವಾಲಿಬಾಲ್ ಪಂದ್ಯಾವಳಿ

ದುಬೈ : ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ದುಬೈನಲ್ಲಿ Coorg Eid Meet 2K26 ವಾಲಿಬಾಲ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. NI Model School Garhood Indoor Stadiumನಲ್ಲಿ ನಡೆದ ಕ್ರೀಡಾಕೂಟದಲ್ಲಿ ಹಲವಾರು ತಂಡಗಳು ಭಾಗವಹಿಸಿದ್ದವು. RYC YEMMEMADU A ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದರೆ, FOUR STAR EDAPALA ತಂಡ ರನ್ನರಪ್ ಸ್ಥಾನ ಪಡೆಯಿತು. ಅತಿಥಿಗಳು ಬಹುಮಾನ ವಿತರಿಸಿದರು. ಝುಬೈರ್ ಚಿಟ್ಟಡೆ, ಅಕ್ಬರ್ ಮೀತಲತಂಡ, ಚಚ್ಚು ಗುಂಡಿಕೆರೆ ಈ ಪಂದ್ಯಾವಳಿ ಆಯೋಜಿಸಿದ್ದರು.
ವೀರಾಜಪೇಟೆಯಲ್ಲಿ ಪ್ರಥಮ ವರ್ಷದ ಹನುಮ ಜಯಂತಿ ಏಪ್ರಿಲ್ 02ರಂದು – ಹಲವು ವಿಶೇಷತೆ

ವೀರಾಜಪೇಟೆ : ಪ್ರಥಮ ಬಾರಿಗೆ ಏಪ್ರಿಲ್ ೨ ರಂದು ವೀರಾಜಪೇಟೆಯಲ್ಲಿ ಅದ್ದೂರಿ ಹನುಮ ಜಯಂತಿ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಈ ಸಂಬoಧ ವಿರಾಜಪೇಟೆ ನಗರದಲ್ಲಿ ಅದ್ದೂರಿ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹನುಮ ಜಯಂತಿ ಆಯೋಜನಾ ಸಮಿತಿಯ ಅಧ್ಯಕ್ಷ ಅಂಜಪರವoಡ ಅನಿಲ್ ಮಂದಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಂತ ವಿಜೃಂಬಣೆಯಿoದ ಹನುಮ ಜಯಂತಿಯನ್ನು ಆಚರಿಸಲು ಸಮಿತಿ ವತಿಯಿಂದ ತೀರ್ಮಾನಿಸಲಾಗಿದೆ. ಕಾರ್ಯಕ್ರಮಕ್ಕೆ ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ಹಾಗೂ ಖ್ಯಾತ ವಾಗ್ಮಿ […]
ಅದ್ಧೂರಿಯಾಗಿ ನೆರವೇರಿತು ವಿರಾಜಪೇಟೆಯಲ್ಲಿ ಮುತ್ತಪ್ಪ ತೆರೆ ಮಹೋತ್ಸವ

ವಿರಾಜಪೇಟೆಯ ಮೀನುಪೇಟೆಯ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಸ್ಥಾನದ ೮೨ ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವು ೩ ದಿನಗಳ ಕಾಲ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಾವಿರಾರು ಭಕ್ತಾಧಿಗಳು ಬುಧವಾರ ರಾತ್ರಿಯಿಂದ ಗುರುವಾರ ಸಂಜೆವರೆಗೂ ಜಾಗರಣೆಯಿದ್ದು, ದೇವರ ದರ್ಶನ ಪಡೆದರು. ಮಂಗಳವಾರ ಬೆಳಗ್ಗೆಯಿಂದಲೇ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿತ್ತು. ಮುತ್ತಪ್ಪ, ವಸೂರಿಮಾಲಾ, ತಿರುವಪ್ಪನ್, ಗುಳಿಗ, ವಿಷ್ಣುಮೂರ್ತಿ, ಪೌವ್ವದಿ ದೇವತೆಗಳು ಭಕ್ತಾಧಿಗಳಿಗೆ ದರ್ಶನ ನೀಡಿದರು. ಪಯಂಗುತ್ತಿ ಹಾಗೂ ತುಲಾಭಾರ, ಇನ್ನಿತರ ಹರಕೆ ಕಾರ್ಯಗಳನ್ನು […]
ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ

ಮಡಿಕೇರಿ : ಒತ್ತೋರ್ಮೆರ ಕೊಡವ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಭೆಯಲ್ಲಿ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಕಾರ್ಯದರ್ಶಿಯಾಗಿ ಮಾಚಂಗಡ ಸಚಿನ್ ತಮ್ಮಯ್ಯ, ಉಪಾಧ್ಯಕ್ಷೆಯಾಗಿ ಮಾತಂಡ ಕುಶಿ ಉನ್ನತಿ, ಸಹ ಕಾರ್ಯದರ್ಶಿಯಾಗಿ ಅಳ್ಳಂಡ ಶಹನಾ ಚೋಂದಮ್ಮ, ಖಜಾಂಜಿಯಾಗಿ ಕಾಳಮಂಡ ರಾಬಿನ್ ಅಚ್ಚಮ್ಮ, ಸಹ ಖಜಾಂಜಿಯಾಗಿ ಮಾಳೇಟಿರ ಯಶ್ಮ ಬೋಜಮ್ಮ, ನಿರ್ದೇಶಕರಾಗಿ ಪೊನ್ನೋಲತಂಡ ಶರಣು ತಮ್ಮಯ್ಯ, ಬಾಡಮಾಡ ದೇಚಮ್ಮ, ಕರ್ನಂಡ ಧನುಶ್ರೀ, ಚೈಯ್ಯಂಡ ಕೀರ್ತನ್ ಅಯ್ಯಪ್ಪ, ಭೂಮಿಕಾ ಮಾಚಂಗಡ ಆಯ್ಕೆಯಾಗಿದ್ದಾರೆ. […]
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಸವಾರ ದುರ್ಮರಣ..!

ಸುಂಟಿಕೊಪ್ಪ : ವಿದ್ಯುಕ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಸುಂಟಿಕೊಪ್ಪ ಬಳಿಯ ಕೆಂಚೆಟ್ಟಿ ಎಂಬಲ್ಲಿ ಸಂಭವಿಸಿದೆ. ಮಾದಾಪುರ ಜಂಬೂರು ನಿವಾಸಿ ಅನೀಲ್(39) ಮೃತ ದುರ್ದೈವಿ. ಸ್ನೇಹಿತ ಹರೀಶ್ ಎಂಬವರೊಂದಿಗೆ ಬೈಕ್ನಲ್ಲಿ ಸುಂಟಿಕೊಪ್ಪದಿಂದ ಮಾದಾಪುರ ಕಡೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ಕಾಲೇಜಿನಲ್ಲಿ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ ಪುಸ್ತಕ ಬಿಡುಗಡೆ

ಗೋಣಿಕೊಪ್ಪಲು: ಕಾವೇರಿ ಕಾಲೇಜಿನ ಸಹ ಪ್ರಾಧ್ಯಾಪಕಿ ಪುತ್ತಾಮನೆ ಪೂಜಾ ಶರಣು ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ವೇಣುಗೋಪಾಲ್ ಹೆಚ್.ಎಸ್. ಅವರು ಜಂಟಿಯಾಗಿ ರಚಿಸಿರುವ ‘ವಾಣಿಜ್ಯ ಶಾಸ್ತ್ರದ ಅಡಿಪಾಯ’ (ಕನ್ನಡ ಆವೃತ್ತಿ) ಮತ್ತು ‘Foundation of Commerce’ (ಆಂಗ್ಲ ಆವೃತ್ತಿ) ಎಂಬ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು. ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾಲಯಗಳ ನೂತನ ಪಠ್ಯಕ್ರಮವನ್ನು ಆಧರಿಸಿ ಈ ಪುಸ್ತಕಗಳನ್ನು ಸಿದ್ಧಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಪೂರಕ ಮಾಹಿತಿಯನ್ನು ಒದಗಿಸುವ ಉದ್ದೇಶ ಹೊಂದಿವೆ. ಕಾರ್ಯಕ್ರಮದಲ್ಲಿ […]